ಸೂಳೆಕೆರೆಯಲ್ಲಿ ಜಲ ಸಾಹಸ ಕೇಂದ್ರ

ಕೋಡಿ ಒಡೆದ ಶಾಂತಿಸಾಗರಕ್ಕೆ ಬಾಗಿನ 30 ಲಕ್ಷ ವೆಚ್ಛದಲ್ಲಿ ಕೆರೆಗೆ ತಡೆಗೋಡೆ ನಿರ್ಮಾಣ

Team Udayavani, Nov 18, 2019, 11:38 AM IST

18-November-4

ಚನ್ನಗಿರಿ: ಸೂಳೆಕೆರೆ ವಿಚಾರವಿಟ್ಟುಕೊಂಡು ಅಪಪ್ರಚಾರ ಮಾಡುವ ಮೂಲಕ ನನಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನೆಡೆಯುಂಟು ಮಾಡಲು ಪ್ರಯತ್ನಿಸಿದ್ದರು. ಕಾಂಗ್ರೆಸ್‌ ನವರು ಕೆರೆಯನ್ನು ತುಂಬಿಸುತ್ತಾರೆ ಎನ್ನುತ್ತಿದ್ದರು. ಅದರೆ ಇಂದು ಸೂಳೆಕೆರೆ ತುಂಬಿರುವುದು ನಮ್ಮ ಪರಿಶ್ರಮದಿಂದ ಎಂದು ಸಂಸದ ಜಿ.ಎಂ ಸಿದ್ದೇಶ್ವರ್‌ ಹೇಳಿದರು.

ತಾಲೂಕಿನ ಶಾಂತಿಸಾಗರ (ಸೂಳೆಕೆರೆ)ಯಲ್ಲಿ ಭಾನುವಾರ ಬಾಗಿನ ಅರ್ಪಣೆ ಮತ್ತು ದೋಣಿ ವಿಹಾರ ಹಾಗೂ ಜಲ ಸಾಹಸ ಕ್ರೀಡಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಸ್ವಗ್ರಾಮ ಭೀಮಸಮುದ್ರದ ಕೆರೆಗೆ ಸೂಳೆಕೆರೆಯಿಂದ ನೀರು ಒಯ್ಯುತ್ತಿದ್ದಾರೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡಿದ್ದರು. ಆದರೆ, ಸತ್ಯ ಜನತೆಗೆ ಗೊತ್ತಿಲ್ಲ. ಕಳೆದ 25 ವರ್ಷಗಳಿಂದ ಭೀಮಸಮುದ್ರದ ಕೆರೆ ಖಾಲಿ ಇದೆ. ಚುನಾವಣೆಯಲ್ಲಿ ಚನ್ನಗಿರಿ ತಾಲೂಕಿನ ಜನತೆ ಲೀಡ್‌ ಕೊಡದಿದ್ದರೆ ಈ ಬಾರಿ ಅಪಪ್ರಚಾರದಿಂದ ನಾನು ಸೋಲು ಅನುಭವಿಸಬೇಕಾಗಿತ್ತು. ಜಗಳೂರು, ಸಿರಿಗೆರೆ, ಚಿತ್ರದುರ್ಗ ತಾಲೂಕು, ಚನ್ನಗಿರಿ ತಾಲೂಕು, ಹೊಳಲ್ಕೆರೆ ಸೇರಿದಂತೆ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಸೂಳೆಕೆರೆಯಿಂದ ಆಗುತ್ತಿತ್ತು. ಇದನ್ನು ಮನಗಂಡು ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ನಾನು ಭದ್ರಾ ನಾಲೆಯ ನೀರನ್ನು ಸೂಳೆಕೆರೆಗೆ ಹರಿಸಿ ಕೆರೆಯನ್ನು ಶೇ.70 ಭಾಗದಷ್ಟು ತುಂಬಿಸಿದ್ದೇವೆ. ಜನತೆ ಅಪಪ್ರಚಾರಕ್ಕೆ ಕಿವಿಗೊಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ಪತ್ರಿಕೆಗಳನ್ನು ಓದುವ ಮೂಲಕ ಸತ್ಯ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಭದ್ರಾ ಅಚ್ಚುಕಟ್ಟು ಪ್ರದೇಶದ ಕೊನೆಭಾಗಕ್ಕೆ ನೀರು ಹೋಗುತ್ತಿಲ್ಲ ಎಂಬ ರೈತರ ಕೂಗು ಒಂದೆಡೆಯಾದರೆ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಇನ್ನೊಂದೆಡೆ ನೋಡಿಕೊಳ್ಳಬೇಕು. ಇದನ್ನರಿತು ಭದ್ರಾ ನೀರನ್ನು ಕೆರೆಗೆ ಬಿಡಿಸಿದ ಪರಿಣಾಮ ಕೆರೆ ತುಂಬಿ ಕೋಡಿ ಬಿದ್ದಿದೆ ಎಂದರು.

ಮಾಯಕೊಂಡ ಶಾಸಕ ಪ್ರೊ| ಎನ್‌. ಲಿಂಗಣ್ಣ ಮಾತನಾಡಿ, ಯಡಿಯೂರಪ್ಪ ಸಿ.ಎಂ ಗದ್ದುಗೆ ಏರುತ್ತಿದಂತೆ ರಾಜ್ಯದಲ್ಲಿ ಸಮೃದ್ಧ ಮಳೆಯಾಗಿದೆ. ಕೆರೆ-ಕಟ್ಟೆ, ನದಿಗಳು ಉಕ್ಕಿ ಹರಿದಿವೆ. ಇದಕ್ಕೆ ಯಡಿಯೂರಪ್ಪ ಕಾಲ್ಗುಣವೇ ಕಾರಣ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಸೂಳೆಕೆರೆ ಅಭಿವೃದ್ಧಿ ಕೆಲಸಗಳು ಚುರುಕಾಗಿ ನಡೆಯಬೇಕಿದೆ. ಸೂಳೆಕೆರೆಯು ಪ್ರಕೃತಿ ಸೌಂದರ್ಯದಲ್ಲಿ ಶ್ರೀಮಂತವಾಗಿದೆ. ಇದನ್ನು ಬಳಸಿಕೊಂಡು ದೊಡ್ಡ ಮಟ್ಟದಲ್ಲಿ ಪ್ರವಾಸಿ ತಾಣವಾಗಿಸಿ ಪ್ರವಾಸಿಗರಿಗೆ ಕೊಡುಗೆಯಾಗಿ ನೀಡಬೇಕು ಎಂಬ ಹಂಬಲವಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಮುಖ್ಯವಾಗಿದೆ ಎಂದರು.

ಜಿಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಲೋಕೇಶ್ವರ, ಜಿಪಂ ಸದಸ್ಯರಾದ ಫಕೀರಪ್ಪ, ಮಂಜುಳಾ ಟಿ.ವಿ. ರಾಜು, ಲೀಲಾವತಿ ಮಾಡಾಳ್‌ ವಿರೂಪಾಕ್ಷಪ್ಪ, ಗಾಯಿತ್ರಿ ಜಿ.ಎಂ. ಸಿದ್ದೇಶ್ವರ್‌, ಜಿಪಂ ಸಿಇಒ ಪದ್ಮಬಸವಂತಪ್ಪ, ಉಪ ವಿಭಾಗಾಧಿಕಾರಿ ಮಮತ ಹೊಸಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ಶ್ರೀನಿವಾಸ್‌, ಪ್ರಕಾಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.