ಕಾಮಗಾರಿ ನನೆಗುದಿಗೆ: ಅಧಿಕಾರಿಗಳ ನಿರ್ಲಕ್ಷ್ಯ
ಸಣ್ಣಪುಟ್ಟ ವಾಹನಗಳ ಸಂಚಾರಕ್ಕೆ ತೊಂದರೆ•ಶೀಘ್ರ ಕಾಮಗಾರಿ ಕೈಗೊಂಡು ಅನುಕೂಲ ಕಲ್ಪಿಸಿ
Team Udayavani, Jul 8, 2019, 10:06 AM IST
ಚಿಂಚೋಳಿ: ಕುಂಚಾವರಂ ಗಡಿಭಾಗದ ಶಿವರೆಡ್ಡಿಪಳ್ಳಿ-ಲಚಮಾಸಾಗರ ಗ್ರಾಮದ ಬಳಿ ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿದೆ.
ಚಿಂಚೋಳಿ: ತಾಲೂಕಿನ ತೆಲಂಗಾಣ ಗಡಿಭಾಗದ ಲಚಮಾಸಾಗರ-ಶಿವರೆಡ್ಡಿಪಳ್ಳಿ ಗ್ರಾಮಗಳಿಗೆ ರಸ್ತೆ ಡಾಂಬರೀಕರಣ ಮತ್ತು ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದ ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದ್ದರೂ ಗುತ್ತಿಗೆದಾರ ಮತ್ತು ಇಲಾಖೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಕುಂಚಾವರಂ ತಾಪಂ ಸದಸ್ಯ ಚಿರಂಜೀವಿ ಶಿವರಾಮಪುರ ದೂರಿದ್ದಾರೆ.
ಲಚಮಾಸಾಗರ-ಶಿವರೆಡ್ಡಿಪಳ್ಳಿ ಗ್ರಾಮಗಳಿಗೆ ರಸ್ತೆ ಸಂಪರ್ಕ ಮತ್ತು ಸೇತುವೆ ನಿರ್ಮಿಸಿ ಕೊಡುವುದಕ್ಕಾಗಿ ಲೋಕೋಪಯೋಗಿ ಇಲಾಖೆ, ಎಚ್.ಕೆ.ಆರ್.ಡಿ.ಬಿ ವತಿಯಿಂದ 2018-19ನೇ ಸಾಲಿನಲ್ಲಿ 60 ಲಕ್ಷ ರೂ.ಮಂಜೂರಿ ಆಗಿದೆ. ಆದರೆ ಗುತ್ತಿಗೆದಾರರನು ಟೆಂಡರ್ ಪ್ರಕ್ರಿಯೆ ನಡೆಯುತ್ತಿರುವಾಗಲೇ ತರಾತುರಿಯಲ್ಲಿ ಕಾಮಗಾರಿ ಪ್ರಾರಂಭಿಸುವುದಕ್ಕಾಗಿ ಹಳೆ ಸೇತುವೆಯನ್ನು ಜೆಸಿಬಿ ಯಂತ್ರದಿಂದ ಕಿತ್ತು ಹಾಕಿರುವುದರಿಂದ ಬೇರೆ ಕಡೆ ಜನರಿಗೆ ಹೋಗಿ ಬರಲು ಹಾಗೂ ಸಣ್ಣಪುಟ್ಟ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೇ 700 ಮೀಟರ್ ರಸ್ತೆ ಡಾಂಬರೀಕರಣ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದ ಜನರು ತೊಂದರೆ ಪಡಬೇಕಾಗಿದೆ.
ಶಿವರೆಡ್ಡಿಪಳ್ಳಿ-ಲಚಮಾಸಾಗರ ಗ್ರಾಮಗಳು ಅತ್ಯಂತ ಕುಗ್ರಾಮಗಳಾಗಿವೆ. ಹೀಗಾಗಿ ಗ್ರಾಮಸ್ಥರಿಗೆ ರಸ್ತೆ ಸಂಪರ್ಕ ಮತ್ತು ಸೇತುವೆ ನಿರ್ಮಿಸಿಕೊಡಲು ಸಾಕಷ್ಟು ಪ್ರಯತ್ನ ಮಾಡಲಾಗಿತ್ತು. ಈಗ ಮಂಜೂರಿ ಆಗಿರುವ ಕಾಮಗಾರಿಯ ಟೆಂಡರ್ ಪಡೆದುಕೊಂಡಿರುವ ಬೀದರ ಮೂಲದ ಪ್ರಥಮ ದರ್ಜೆ ಗುತ್ತಿಗೆದಾರ ಜಗದೀಶ ಖುಬಾ ಎನ್ನುವರು ಪೋಚಾವರಂ ಗ್ರಾಮದ ಉಪ ಗುತ್ತಿಗೆದಾರನಿಗೆ ಕಾಮಗಾರಿ ವಹಿಸಿಕೊಟ್ಟಿರುವುದರಿಂದ ಕಳೆದ ಎರಡು ತಿಂಗಳಿಂದ ಕಾಮಗಾರಿ ನನೆಗುದಿಗೆ ಬಿದ್ದಿದೆ ಎಂದು ತಿಳಿಸಿದ್ದಾರೆ.
ಶಿವರೆಡ್ಡಿ-ಲಚಮಾಸಾಗರ ಮಧ್ಯೆ ಸೇತುವೆ ಇಲ್ಲದ ಕಾರಣ ಜನರು ವೃದ್ಧರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ರೋಗಿಗಳು ನೀರಿನಲ್ಲಿ ದಾಟಿ ಹೋಗಬೇಕಾಗಿದೆ. ಮಳೆಗಾಲ ಇರುವುದರಿಂದ ಹೆಚ್ಚಿನ ಮಳೆ ನೀರು ಹಳ್ಳಕ್ಕೆ ಹರಿದು ಬಂದರೆ ರಸ್ತೆ ಸಂಪರ್ಕ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಕಾಮಗಾರಿ ಪ್ರಾರಂಭಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಕಾಮಗಾರಿಯಲ್ಲಿ ರಾಜಕೀಯ: ಶಿವರೆಡ್ಡಿಪಳ್ಳಿ-ಲಚಮಾಸಾಗರ ರಸ್ತೆ ಮತ್ತು ಸೇತುವೆ ಕಾಮಗಾರಿ ನಡೆಸಲು ಸ್ಥಳೀಯ ಪೋಚಾವರಂ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರೊಬ್ಬರಿಗೆ ವಹಿಸಿಕೊಡಲಾಗಿತ್ತು. ಆದರೆ ಕಳೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡದೇ ಇರುವುದರಿಂದ ಕಾಮಗಾರಿಯನ್ನು ಇದೀಗ ಪೆದ್ದಾ ತಾಂಡಾದ ಬಿಜೆಪಿ ಕಾರ್ಯಕರ್ತನಿಗೆ ವಹಿಸಿ ಕೊಡುವ ವಿಚಾರ ನಡೆದಿರುವುದರಿಂದ ಕಾಮಗಾರಿ ನನೆಗುದಿಗೆ ಬಿದ್ದಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ