ಬಿಸಿಲಿಗೆ ಕುಂಚಾವರಂ ಅರಣ್ಯ ಬರಡು

ಒಣಗಿದ ತೇಗು, ಶ್ರೀಗಂಧ, ಸಿರಂಜಿ ಗಿಡಗಳು•ಬತ್ತಿದ ಚಿಕ್ಕನಿಂಗದಳ್ಳಿ-ವೆಂಕಟಾಪುರ ಕೆರೆ

Team Udayavani, Jun 5, 2019, 9:54 AM IST

5-June-4

ಚಿಂಚೋಳಿ: ಕುಂಚಾವರಂ ಅರಣ್ಯಪ್ರದೇಶದಲ್ಲಿರುವ ಬಕ್ಕಪ್ರಭು ದೇವಸ್ಥಾನ ಸುತ್ತಲಿರುವ ಗಿಡಮರಗಳು ಒಣಗಿವೆ.

ಚಿಂಚೋಳಿ: ಹೈದ್ರಾಬಾದ ಕರ್ನಾಟಕ ಪ್ರದೇಶದ ಏಕೈಕ ಮಿನಿ ಮಲೆನಾಡು ಪ್ರದೇಶವೆಂದು ಪ್ರಸಿದ್ಧಿ ಪಡೆದಿರುವ ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಮಳೆ ಅಭಾವ, ಬಿಸಿಲಿನ ತಾಪದ ಪ್ರಖತೆಯಿಂದಾಗಿ ಅರಣ್ಯದಲ್ಲಿನ ಗಿಡಮರಗಳು ಒಣಗಿ ನಿಂತಿವೆ.

ತಾಲೂಕು ಸತತವಾಗಿ ಕಳೆದ ಮೂರು ವರ್ಷಗಳಿಂದ ಮಳೆ ಅಭಾವ ಮತ್ತು ಬರಗಾಲಕ್ಕೆ ತುತ್ತಾಗಿರುವುದರಿಂದ ಕುಂಚಾವರಂ ಅರಣ್ಯಪ್ರದೇಶ ಬರಡಾಗಿದೆ. ಕುಂಚಾವರಂ ಅರಣ್ಯದಲ್ಲಿ ಬೆಳೆದಿರುವ ಸಾಗವಾನಿ, ತೇಗು, ಶ್ರೀಗಂಧ, ಬಿಟಲಿ, ಹುಣಸೆ ಮರ, ಸೀತಾಫಲ ಗಿಡ, ಸಿರಂಜಿ ಮರಗಳು ಬಿಸಿಲಿನ ತಾಪದಿಂದ ಒಣಗಿವೆ.

ಪ್ರತಿ ವರ್ಷ ಅಲ್ಪಸ್ವಲ್ಪ ಅರಣ್ಯಪ್ರದೇಶದಲ್ಲಿ ಮಳೆ ಆಗುತ್ತಿರುವುದರಿಂದ ಕಾಡಿನಲ್ಲಿರುವ ಹಣ್ಣಿನ ಮರಗಳು ಫಲ ನೀಡುತ್ತಿದ್ದವು. ಆದರೆ ಈ ವರ್ಷ ನೀರಿಲ್ಲದ ಕಾರಣ ಹಣ್ಣಿನ ಮರಗಳು ಫಲ ನೀಡಿಲ್ಲ. ಕಾಡು ಪ್ರಾಣಿಗಳಿಗೆ ತಿನ್ನಲು ಆಹಾರ ಸಿಗದ ಕಾರಣ ಕಾಡಿನಲ್ಲಿ ಇರುವ ಕಾಡು ಪ್ರಾಣಿಗಳ ಸ್ಥಿತಿಯನ್ನು ಆ ದೇವರೇ ಬಲ್ಲ ಎನ್ನುವಂತಾಗಿದೆ. ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ಒಟ್ಟು 45ಸಾವಿರ ಹೆಕ್ಟೇರ್‌ ಪ್ರದೇಶ ಹೊಂದಿರುವುದರಿಂದ ಭೋಗಾಲಿಂಗದಳ್ಳಿ, ಸೇರಿಭಿಕನಳ್ಳಿ, ಚಿಕ್ಕನಿಂಗದಳ್ಳಿ, ಸೋಮಲಿಂಗದಳ್ಳಿ, ಭೈರಂಪಳ್ಳಿ, ಐನೋಳಿ, ಕೊಳ್ಳೂರ, ಚಂದ್ರಂಪಳ್ಳಿ, ಕುಸರಂಪಳ್ಳಿ,ಧರ್ಮಸಾಗರ, ವಂಟಿಚಿಂತಾ, ಅಂತಾವರಂ, ವೆಂಕಟಾಪುರ, ಸಂಗಾಪುರ, ಕುಸರಂಪಳ್ಳಿ ಗ್ರಾಮಗಳಿಗೆ ಹೊಂದಿಕೊಂಡಿರುವ ಅರಣ್ಯದಲ್ಲಿ ಬರೀ ಮರದ ಟೊಂಗೆಗಳು ಮಾತ್ರ ಕಾಣಿಸುತ್ತಿವೆ. ವನ್ಯಜೀವಿಧಾಮ ಅರಣ್ಯದಲ್ಲಿ ಇರುವ ಕಾಡು ಪ್ರಾಣಿಗಳಿಗೆ ನೀರು ಕುಡಿಯಲು ಜೀವಜಲವಾಗಿದ್ದ ಚಂದ್ರಂಪಳ್ಳಿ ಜಲಾಶಯ ಬತ್ತಿ ಹೋಗುತ್ತಿದೆ. ಚಿಕ್ಕನಿಂಗದಳ್ಳಿ, ಧರ್ಮಸಾಗರ, ಅಂತಾವರಂ, ವೆಂಕಟಾಪುರ ಕೆರೆಗಳು ಸಂಪೂರ್ಣ ಒಣಗಿವೆ. ಇಂತಹ ಭೀಕರ ಬರ ಪರಸ್ಥಿತಿ ಕುಂಚಾವರಂ ಅರಣ್ಯದಲ್ಲಿ ಕಾಣಬಹುದಾಗಿದೆ.

ಕುಂಚಾವರಂ ವನ್ಯಜೀವಿಧಾಮದಲ್ಲಿ ಇರುವ ಐತಿಹಾಸಿಕ ಶ್ರೀ ಗಂಗಾಧರ ಬಕ್ಕಪ್ರಭು ದೇವಾಲಯ ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿತ್ತು. ಈಗ ದೇವಾಲಯದ ಸುತ್ತಲೂ ಬೆಳೆದಿರುವ ಮರಗಳು ಒಣಗಿವೆ. ಪ್ರವಾಸಿಗರಿಗೆ ನೆರಳು ಇಲ್ಲದಂತಾಗಿದೆ. ಪ್ರತಿ ಹುಣ್ಣಿಮೆ, ಅಮಾವ್ಯಾಸೆ ದಿವಸ ಸಾವಿರಾರು ಭಕ್ತರು ಇಲ್ಲಿಗೆ ಬರುತ್ತಾರೆ. ಅರಣ್ಯ ಇಲಾಖೆಯಿಂದ ಒಂದು ಕೋಟಿ ರೂ.ಗಳಲ್ಲಿ ನಿರ್ಮಿಸಿದ ದೈವ ವನದಲ್ಲಿ ಬೆಳೆದಿರುವ ಮರಗಳು ಒಣಗಿವೆ. ಇಂತಹ ಸುಂದರ ರಮಣೀಯ ಪ್ರದೇಶ ಬರಗಾಲಕ್ಕೆ ತುತ್ತಾಗಿದೆ ಎನ್ನುತ್ತಾರೆ ಸಮಾಜ ಸೇವಕ ಗೋಪಾಲರೆಡ್ಡಿ ಕೊಳ್ಳೂರ. ಕುಂಚಾವರಂ ವನ್ಯಜೀವಿ ಧಾಮದಲ್ಲಿ ಮಳೆಯಾದರೆ ಮಾತ್ರ ಗಿಡ ಮರಗಳು ಚಿಗುರುತ್ತವೆ. ಕಾಡು ಪ್ರಾಣಿಗಳಿಗೆ ತಿನ್ನಲು ಆಹಾರ ಸಿಗುತ್ತದೆ. ಕುಡಿಯಲು ನೀರು ಸಿಗುತ್ತದೆ. ಮಳೆ ಕೃಪೆ ಕಾಡು ಪ್ರಾಣಿಗಳ ಮೇಲಿರಲಿ ಎನ್ನುತ್ತಾರೆ ಪರಿಸರ ಪ್ರೇಮಿ ಶಿಕಾರ ಮೋತಕಪಳ್ಳಿ ನಾಗಶೆಟ್ಟಿ ಪಾಟೀಲ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.