10ರಂದು ಬಿಎಸ್‌ವೈ ಚುನಾವಣಾ ಪ್ರಚಾರ

ಜಿಲ್ಲೆಯಲ್ಲೂ ಕಾಂಗ್ರೆಸ್‌ ಸಂಘಟನೆ ಕಣ್ಮರೆ: ಲೋಕೇಶ್‌ ಭವಿಷ್ಯ

Team Udayavani, Apr 5, 2019, 3:19 PM IST

5-April-24

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಏ. 10ರಂದು ಜಿಲ್ಲೆಯ ಸಖರಾಯಪಟ್ಟಣ ಮತ್ತು ತರೀಕರೆಗೆ ಭೇಟಿ ನೀಡಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ವಕ್ತಾರ ಸಿ.ಎಚ್‌. ಲೋಕೇಶ್‌ ತಿಳಿಸಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಅವರು, ಏ.10ರಂದು ಸಖರಾಯಪಟ್ಟಣದಲ್ಲಿ ಚುನಾವಣೆ
ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ನಂತರ ತರೀಕೆರೆ ತಾಲೂಕಿನ ಎರಡು ಕಡೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವರು ಎಂದರು.

2019ರ ಲೋಕಸಭಾ ಚುನಾವಣೆ ದೇಶಪ್ರೇಮಿಗಳ ಮತ್ತು ದೇಶದ ಒಳಗಿರುವ ದೇಶದ್ರೋಹಿಗಳ ನಡುವೆ ನಡೆಯುತ್ತಿರುವ ಚುನಾವಣೆ. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕಾಶ್ಮೀರದ ಕಾನೂನುಗಳಿಗೆ ಸಡಲಿಕೆ ತರುವುದಾಗಿ ತನ್ನ ಪ್ರನಾಳಿಕೆಯಲ್ಲಿ ಹೇಳಿದೆ. ಇದು ಒಂದು ವರ್ಗದ ಮತ ಕಬಳಿಕೆ ಹುನ್ನಾರ. ಈ ಅಂಶಗಳನ್ನು
ಕನ್ನಡಕ್ಕೆ ತರ್ಜುಮೆ ಮಾಡಿ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷ ದೊಡ್ಡ ಹಡಗು ಎಂದು ಹೇಳಿಕೊಳ್ಳುತ್ತಿದ್ದಾರೆ. ಮುಳುಗುವ ಹಡಗಿನಲ್ಲಿ ಪಕ್ಷದ ಮುಖಂಡರು ಪ್ರಯಾಣಿಸುತ್ತಿದ್ದಾರೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಮಾಜಿ ಪ್ರಧಾನಿ ದಿ| ಇಂದಿರಾ ಗಾಂಧಿ  ಅವರಿಗೆ ರಾಜಕೀಯ ಮರುಜನ್ಮ ನೀಡಿದ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಚುನಾವಣೆ ಕಣಕ್ಕಿಳಿಸಲು ಕಾಂಗ್ರೆಸ್‌ ಪಕ್ಷಕ್ಕೆ ಅಭ್ಯರ್ಥಿಗಳೇ ಸಿಗಲಿಲ್ಲ ಎಂದರೆ ಇಂದು ಕಾಂಗ್ರೆಸ್‌ ಪಕ್ಷದ ಸ್ಥಿತಿ ಪ್ರತಿಬಿಂಬಿಸುತ್ತಿದೆ ಎಂದು ಲೇವಡಿ ಮಾಡಿದರು.

ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡದೆ. ಜೆಡಿಎಸ್‌ ಪಕ್ಷದ ಚಿಹ್ನೆಯಡಿ
ಸ್ಪರ್ಧಿಸುತ್ತಿರುವುದು ಪಕ್ಷ ಎಷ್ಟು ಹೀನಾಯ ಸ್ಥಿತಿಗೆ ತಲುಪಿದೆ ಎಂದು ತಿಳಿಯುತ್ತದೆ. ಕಾಂಗ್ರೆಸ್‌ನ ಪ್ರಸ್ತುತ ಸ್ಥಿತಿ ಕೃಷಿ ಹೊಂಡ ಇದ್ದ ಹಾಗೇ ಆಗಿದೆ. ಸಮುದ್ರ ಎಂಬ ಕಲ್ಪನೆ ಮುಗಿದು ಹೋಗಿದೆ. ಜಿಲ್ಲೆಯಲ್ಲೂ ಕಾಂಗ್ರೆಸ್‌ ಸಂಘಟನೆ ಕಣ್ಮರೆಯಾಗಲಿದೆ ಎಂದು
ಭವಿಷ್ಯ ನುಡಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೆಸರು ಹೇಳಿದರೆ ಬರುವ ಮತಗಳು ಬರುವುದಿಲ್ಲ ಎಂಬ ಭಯ ಕಾಂಗ್ರೆಸ್‌ ಪಕ್ಷದವರನ್ನು ಕಾಡುತ್ತಿದೆ. ಪ್ರಮೋದ್‌ ಮಧ್ವರಾಜ್‌ ಅವರು ಶೋಭಾ ಕರಂದ್ಲಾಜೆ ಅವರು ಮೋದಿ ಮುಖವಾಡ ಧರಸಿ ಚುನಾವಣೆಗೆ ಹೊರಟಿದ್ದಾರೆ ಎಂದು ಹೇಳಿರುವುದು ಹಾಸ್ಯಾಸ್ಪದ ಎಂದರು.

ಬಿಜೆಪಿ ಅಭ್ಯರ್ಥಿಯಾಗಿ ಮೋದಿ ಮುಖವಾಡ ಅಲ್ಲದೆ. ಬೇರೆ ಪಕ್ಷದ ನಾಯಕರ ಮುಖವಾಡ ಧರಿಸಲು ಸಾಧ್ಯವೇ. ಗಟ್ಟಿ ನಾಯಕತ್ವದ ಮುಖವಾಡ ಧರಿಸಿ ಮತಕೇಳಲು ಕಾರ್ಯಕರ್ತರಲ್ಲಿ ಹಿಂಜರಿಕೆಯಿಲ್ಲ. ಐದು ವರ್ಷದಲ್ಲಿ ಶೋಭಾ ಕರಂದ್ಲಾಜೆ ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರ ಬಳಿ ಹೋಗುತ್ತಿದ್ದೇವೆ ಎಂದು ಹೇಳಿದರು.

ಪ್ರಮೋದ್‌ ಮಧ್ವರಾಜ್‌ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಗೆ ಎಷ್ಟು ಸಾರಿ ಭೇಟಿ ನೀಡಿದ್ದಾರೆ. ತಮ್ಮ ಇಲಾಖೆಯಲ್ಲಿ ಯುವ ಜನತೆಗೆ ಹಾಗೂ ಮೀನುಗಾರರಿಗೆ ಯಾವ ನೂತನ ಯೋಜನೆ ರೂಪಿಸಿದ್ದಾರೆ ಎಂದು ಪ್ರಶ್ನಿಸಿದ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿ ಪಡಿಸುವಲ್ಲಿ ವಿಫಲರಾಗಿದ್ದಾರೆ. ಆ ಜಿಲ್ಲೆಗೆ ಸಲ್ಲದವರು ಇನ್ನೂ ಈ ಜಿಲ್ಲೆಗೆ ಸಲ್ಲುವರೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಬಿ.ರಾಜಪ್ಪ, ನೆಟ್ಟಕೆರೆಹಳ್ಳಿ ಜಯಣ್ಣ, ಅನಿಲ್‌
ಕುಮಾರ್‌, ನಾರಾಯಣ ಇದ್ದರು.

ರಾಹುಲ್‌ ಗಾಂಧಿ  ಹೆಸರು ಹೇಳಿಕೊಂಡು ಮತ ಕೇಳಿದರೆ ಠೇವಣಿ
ಬರುವುದಿಲ್ಲ ಎನ್ನುವ ಭಯ ಅವರನ್ನು ಕಾಡುತ್ತಿದೆ. ಮೊದಲು ತಮ್ಮ ಪಕ್ಷದ ಪರಿಸ್ಥಿತಿಯನ್ನು ಅವಲೋಕಿಸಿವುದು ಬಿಟ್ಟು ನರೇಂದ್ರ ಮೋದಿ ಅವರ ಮುಖವಾಡದ ಬಗ್ಗೆ ಮಾತನಾಡುವುದು ವ್ಯರ್ಥ.
ಸಿ.ಎಚ್‌. ಲೋಕೇಶ್‌,
ಬಿಜೆಪಿ ವಕ್ತಾರ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.