ಚಿಕ್ಕಬಳ್ಳಾಪುರ: 1126 ಗ್ರಾಮಗಳು ಮತ್ತು 39 ವಾರ್ಡ್ಗಳು ಕೊರೊನಾ ಮುಕ್ತ: ಡಿಸಿ
Team Udayavani, Jun 9, 2021, 8:54 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎರಡು ಗ್ರಾಮ ಪಂಚಾಯಿತಿಗಳು, 1126 ಗ್ರಾಮಗಳು ಮತ್ತು ಎಲ್ಲಾ ತಾಲೂಕು ಕೇಂದ್ರಗಳಲ್ಲಿನ 6 ಸ್ಥಳೀಯ ಸಂಸ್ಥೆಗಳ 39 ವಾರ್ಡ್ಗಳು ಕೊರೊನಾ ಮುಕ್ತವಾಗಿವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಡದಲಮರಿ ಗ್ರಾಮ ಪಂಚಾಯತಿಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಶೂನ್ಯಕ್ಕೆ ಬಂದು, ಈಗಾಗಲೇ ಕೊರೊನಾ ಮುಕ್ತ ಗ್ರಾಮ ಪಂಚಾಯಿತಿಯಾಗಿದ್ದು, ಇದೀಗ ಹೊಸದಾಗಿ ಗೌರಿಬಿದನೂರು ತಾಲೂಕಿನ ಮುದಲೋಡು ಗ್ರಾಮ ಪಂಚಾಯ್ತಿಯು ಈ ಪಟ್ಟಿಗೆ ಸೇರ್ಪಡೆಯಾಗಿ ಕೊರೋನಾ ಮುಕ್ತ ಗ್ರಾಮಪಂಚಾಯ್ತಿಯಾಗಿದೆ ಹಾಗೂ ಚಿಕ್ಕಬಳ್ಳಾಪುರ-23, ಚಿಂತಾಮಣಿ -35, ಶಿಡ್ಲಘಟ್ಟ -28, ಬಾಗೇಪಲ್ಲಿ-25,ಗುಡಿಬಂಡೆ-8, ಗೌರಿಬಿದನೂರು-38 ಗ್ರಾಮಗಳು ಸೇರಿದಂತೆ ಒಟ್ಟಾರೆ ಈ ತಾಲೂಕುಗಳ 1126 ಗ್ರಾಮಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಶೂನ್ಯಕ್ಕೆ ಬಂದಿವೆ. ಅಲ್ಲದೆ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ ನಗರಸಭೆ, ಬಾಗೇಪಲ್ಲಿ ಪುರಸಭೆ ಹಾಗೂ ಗುಡಿಬಂಡೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಒಟ್ಟು 39 ವಾರ್ಡ್ ಗಳು ಕೊರೊನಾ ಮುಕ್ತ ವಾರ್ಡ್ಗಳಾಗಿವೆ ಎಂದರು.
ಶಿಡ್ಲಘಟ್ಟದಲ್ಲಿ 19 ವಾರ್ಡ್ ಕೊರೊನಾ ಮುಕ್ತ: ಜಿಲ್ಲೆಯ ಪೈಕಿ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡ್ಗಳಿದ್ದು, ಈ ಪೈಕಿ 1, 5, 6, 7, 8, 9, 10, 12, 13, 14, 16, 17, 18, 19, 21, 22, 24, 28, 29 ಒಳಗೊಂಡಂತೆ ಬರೋಬ್ಬರಿ 19 ವಾರ್ಡ್ ಗಳು ಕೊರೊನಾ ಮುಕ್ತ ವಾರ್ಡ್ಗಳಾಗಿವೆ ಅದೇ ರೀತಿ ಗೌರಿಬಿದನೂರು ನಗರಸಭೆ(4, 9, 10, 16, 27) ಮತ್ತು ಬಾಗೇಪಲ್ಲಿ ಪುರಸಭೆ(4, 10, 12, 17, 19 )ಯಲ್ಲಿ ತಲಾ 5 ವಾರ್ಡ್ಗಳು ಕೊರೊನಾ ಮುಕ್ತವಾಗಿದ್ದು, ಚಿಕ್ಕಬಳ್ಳಾಪುರ ನಗರಸಭೆಯಲ್ಲಿ 4(3, 16, 19, 28) ವಾರ್ಡ್ ಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಶೂನ್ಯಕ್ಕೆ ಬಂದಿದೆ. ಉಳಿದಂತೆ ಚಿಂತಾಮಣಿ ನಗರಸಭೆ(18, 26, 29) ಮತ್ತು ಗುಡಿಬಂಡೆ ಪಟ್ಟಣ ಪಂಚಾಯಿತಿ(4, 6, 10)ಯ ತಲಾ 3 ವಾರ್ಡ್ ಗಳು ಕೊರೊನಾ ಮುಕ್ತ ವಾರ್ಡ್ಗಳಾಗಿವೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಲಾಕ್ ಡೌನ್ ಅಂತ್ಯದೊಳಗೆ ಜಿಲ್ಲೆಯ ಗ್ರಾಮೀಣ ಭಾಗದ ಎಲ್ಲಾ ಗ್ರಾಪಂಗಳು ಮತ್ತು ನಗರ ಪ್ರದೇಶದ ಎಲ್ಲಾ ಸ್ಥಳೀಯ ಸಂಸ್ಥೆಗಳ ವಾಡ್ರ್ಗಳನ್ನು ಕೊರೊನಾ ಮುಕ್ತ ಮಾಡಲು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್