1,484 ಸಂಶಯಾಸ್ಪದ ಕುಷ್ಠರೋಗ ಪ್ರಕರಣ ಪತ್ತೆ

ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಅಭಿಯಾನಕ್ಕೆ ತೆರೆ

Team Udayavani, Sep 27, 2019, 3:46 PM IST

cb-tdy-1

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಳೆದ ಸೆ.5 ರಿಂದ 23ರ ವರೆಗೂ ಹಮ್ಮಿಕೊಳ್ಳಲಾಗಿದ್ದ ಕುಷ್ಠರೋಗ ಪತ್ತೆ ಅಭಿಯಾನಕ್ಕೆ ತೆರೆ ಬಿದ್ದಿದೆ.

ಜಿಲ್ಲೆಯಲ್ಲಿ 15 ಜನರಲ್ಲಿ ಕುಷ್ಠರೋಗ ಇರುವುದು ಪತ್ತೆಯಾದರೆ, 1,484 ಸಂಶಯಾಸ್ಪದ ಪ್ರಕರಣಗಳು ಬೆಳಕಿಗೆ ಬಂದಿವೆ. 2025ಕ್ಕೆ ರಾಜ್ಯವನ್ನು ಕುಷ್ಠರೋಗ ಮುಕ್ತಗೊಳಿಸುವ ದಿಸೆಯಲ್ಲಿ ರಾಜ್ಯದಲ್ಲಿ 9 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಕುಷ್ಠರೋಗ ಪತ್ತೆ ಅಭಿಯಾನ ಸೆ.5ರಿಂದ 23 ರ ವರೆಗೂ ನಡೆದಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ನಡೆದ ಅಭಿಯಾನ ಯಶಸ್ವಿಯಾಗಿದ್ದು, ಜಿಲ್ಲೆಯಲ್ಲಿ ಬರೋಬ್ಬರಿ 2,94,909 ಮನೆಗಳಿಗೆ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಕುಷ್ಠರೋಗ ಪತ್ತೆ ಪರೀಕ್ಷೆ ಮಾಡಿದ್ದಾರೆ.

11,41,241 ಮಂದಿಗೆ ಪರೀಕ್ಷೆ: ಕುಷ್ಠರೋಗ ಪತ್ತೆಗಾಗಿ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ವಿಶೇಷ ಅಭಿಯಾನದಲ್ಲಿಜಿಲ್ಲಾದ್ಯಂತ ಒಟ್ಟು 11,41,241 ಮಂದಿಗೆ ಪರೀಕ್ಷೆ ನಡೆಸಲಾಗಿದೆ. 15 ಜನರಲ್ಲಿ ಮಾತ್ರ ಕುಷ್ಠರೋಗ ಇರುವುದು ದೃಢಪಟ್ಟಿರುವುದು ಕಂಡು ಬಂದಿದೆ. ಅವರನ್ನು ಆರೋಗ್ಯ ಇಲಾಖೆ ಚಿಕಿತ್ಸೆಗೆ ಆಯ್ಕೆ ಮಾಡಿಕೊಂಡಿದೆ. ಉಳಿದ 1,484 ಮಂದಿ ಜನರಲ್ಲಿ ಕುಷ್ಠರೋಗದ ಗುಣಲಕ್ಷಣಗಳು ಕಂಡು ಬಂದರೂ ಅವರಿಗೆ ಇನ್ನೂ ಹೆಚ್ಚಿನ ಪರೀಕ್ಷೆ ಅವಶ್ಯಕವಾಗಿರುವುದರಿಂದ ಅವರನ್ನು ಸಂಶಯಾಸ್ಪದ ಪ್ರಕರಣಗಳೆಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

ಜಿಲ್ಲೆಯಲ್ಲಿ ಕುಷ್ಠರೋಗ ಪತ್ತೆ ಅಭಿಯಾನದಲ್ಲಿ ಒಟ್ಟು 1,287 ತಂಡಗಳು, ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಹಿಡಿದು ಮೇಲ್ವಿಚಾರಕರು, ಆರೋಗ್ಯ ಶಿಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆ ಯರು ಸೇರಿ ಒಟ್ಟು 3,114 ಮಂದಿ ಅಧಿಕಾರಿ, ಸಿಬ್ಬಂದಿ ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

ಗೌರಿಬಿದನೂರು ಪ್ರಥಮ: ಸದ್ಯ ಜಿಲ್ಲೆಯಲ್ಲಿ ದೃಢಪಟ್ಟಿರುವ 15 ಮಂದಿ ಕುಷ್ಠರೋಗ ಪ್ರಕರಣ ಪೈಕಿ ಗೌರಿಬಿದನೂರು ತಾಲೂಕು ಮೊದಲ ಸ್ಥಾನದಲ್ಲಿದ್ದು, ಉಳಿದಂತೆ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕುಗಳಲ್ಲಿ ತಲಾ 2 ಪ್ರಕರಣಗಳು ದಾಖಲಾಗಿ 2ನೇ ಸ್ಥಾನ, ಗುಡಿ ಬಂಡೆ ಯಲ್ಲಿ 1 ಪ್ರಕರಣ ದಾಖಲಾಗಿದೆ. ಶಿಡ್ಲಘಟ್ಟದಲ್ಲಿ ಪ್ರಕರಣ ದಾಖಲಾಗಿಲ್ಲ. ಗೌರಿಬಿದನೂರು ತಾಲೂಕಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದು ಆರೋಗ್ಯಇಲಾಖೆಯನ್ನು ಚಿಂತೆಗೀಡು ಮಾಡಿದೆ. 3 ಬಿಳಿ ಮಚ್ಚೆಗಳು ಇದ್ದರೆ, ಸಂಶಯಾಸ್ಪದ ಕುಷ್ಠರೋಗ ಪ್ರಕರಣಗಳೆಂದು ಹಾಗೂ 5 ಮಚ್ಚೆಗಿಂತ ಹೆಚ್ಚು ಬಿಳಿ ಮಚ್ಚೆಗಳು ಇದ್ದರೆ ಕುಷ್ಠರೋಗ ಪ್ರಕರಣಗಳೆಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

ಜಿಲ್ಲೆಯಲ್ಲಿ ಒಟ್ಟು 1,082 ಪ್ರಕರಣ: ಸದ್ಯ ಜಿಲ್ಲೆಯಲ್ಲಿ ಇದುವರೆಗೂ ಕುಷ್ಠರೋಗ ಪ್ರಕರಣಗಳು ಎಲ್ಲಾ ತಾಲೂಕುಗಳು ಸೇರಿ ಒಟ್ಟು 1,082 ಪ್ರಕರಣಗಳು ದಾಖಲಾಗಿವೆ. ಎಲ್ಲಾ ವ್ಯಕ್ತಿಗಳಿಗೆ ಆರೋಗ್ಯ ಇಲಾಖೆ ಮನೆಬಾಗಿಲಿಗೆ ಚಿಕಿತ್ಸೆ ತಲುಪಿಸುತ್ತಿದೆ. ಈ 1,082 ಪ್ರಕರಣಗಳಲ್ಲಿ ಪ್ರತಿಯೊಬ್ಬರು ಆರೋಗ್ಯವಾಗಿದ್ದಾರೆ. ಯಾರು ಮೃತಪಟ್ಟಿಲ್ಲವೆಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಚಂದ್ರಮೋಹನ್‌ ಉದಯವಾಣಿಗೆ ತಿಳಿಸಿದರು.

ಕುಷ್ಠರೋಗ ನಿರ್ಮೂಲನೆಗೆ ಸಾಕಷ್ಟು ಔಷಧ ಲಭ್ಯವಿದ್ದು, ರೋಗಿಗಳು ಸಮರ್ಪಕವಾಗಿ ಔಷಧ ಸೇವಿಸುವುದರಿಂದ ರೋಗದಿಂದ ಶೀಘ್ರ ಗುಣಮುಖರಾಗಬಹುದುಎಂದರು.

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.