ಶಿಥಿಲ ಕಟ್ಟಡ ದುರಸ್ತಿಗೆ 15 ಲಕ್ಷ ರೂ.ಬಿಡುಗಡೆ
Team Udayavani, Dec 7, 2019, 12:43 PM IST
ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಾಧೀಶ ಅಮರನಾರಾಯಣ ಅವರು ಶಿಥಿಲಗೊಂಡಿರುವ ಗೌರಿಬಿದನೂರು ನ್ಯಾಯಾಲಯದ ಕಟ್ಟಡದ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಕಟ್ಟಡ ಶಿಥಿಲಗೊಂಡಿದ್ದು, ದುರಸ್ತಿಗಾಗಿ ಸರ್ಕಾರದಿಂದ 15 ಲಕ್ಷ ಮಂಜೂರಾಗಿದೆ. ಡಿ.14ರಂದುರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಲಿರುವುದರಿಂದ ಈ ಅವಧಿಯೊಳಗೆ ಕಟ್ಟಡ ಸಂಪೂರ್ಣವಾಗಿ ರಿಪೇರಿ ಮಾಡಿಸ ಬೇಕೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮತ್ತು ನಗರಸಭೆ ಪರಿಸರ ಅಭಿಯಂತರರು ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗೌರಿಬಿದನೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ.ಸಿ.ಗಂಗಯ್ಯ ಮಾತನಾಡಿ, ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಇದ್ದು, ನ್ಯಾಯಾಲಯದ ಕಟ್ಟಡ ಶಿಥಿಲಗೊಂಡಿರುವುದರಿಂದ ತುರ್ತಾಗಿ ದುರಸ್ತಿಯಾಗುವ ಅನಿವಾರ್ಯತೆ ಇದೆ. ತಾವು ಗೌರಿಬಿದನೂರಿಗೆ ಆಗಮಿಸಿ ಖುದ್ದು ಪರಿಶೀಲನೆ ನಡೆಸಬೇಕೆಂದು ಮನವಿ ಮಾಡಲಾಗಿತ್ತು. ನಮ್ಮ ಮನವಿ ಮೇರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸರ್ಕಾರದಿಂದ 15 ಲಕ್ಷ ಬಿಡುಗಡೆಯಾಗಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕಿದೆ ಎಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಲಿಂಗಪ್ಪ, ಇತರೆ ವಕೀಲರು ಹಾಗೂ ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ