ಚಿಕ್ಕಬಳ್ಳಾಪುರದಲ್ಲಿಂದು ನಗರಸಭೆ ಆಯುಕ್ತ ಸೇರಿ 19 ಮಂದಿಗೆ ಸೋಂಕು ದೃಢ: ಇಬ್ಬರು ಸಾವು
Team Udayavani, Jul 10, 2020, 7:38 PM IST
ಚಿಕ್ಕಬಳ್ಳಾಪುರ: ಕೋವಿಡ್ -19 ಮಹಾಮಾರಿ ಅರ್ಭಟ ಜಿಲ್ಲೆಯಲ್ಲಿ ಮುಂದುವರೆದಿದ್ದು ಶುಕ್ರವಾರ ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಸೇರಿ ಒಟ್ಟು 19 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ 19 ಹೊಸ ಪ್ರಕರಣಗಳು ಸೇರಿ ಒಟ್ಟು ಇದುವರೆಗೂ ಬರೋಬ್ಬರಿ 351 ಮಂದಿ ಸೋಂಕಿತರು ಪತ್ತೆಯಾಗಿದ್ದು ಹೊಸದಾಗಿ ಕಂಡು ಬಂದಿರುವ 19 ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರದಲ್ಲಿ 9, ಬಾಗೇಪಲ್ಲಿ, ಚಿಂತಾಮಣಿಯಲ್ಲಿ ತಲಾ 2 ಹಾಗೂ ಶಿಡ್ಲಘಟ್ಟ 4 ಹಾಗೂ ಗೌರಿಬಿದನೂರು, ಗುಡಿಬಂಡೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.
ಸಾವಿನ ಸಂಖ್ಯೆ 12ಕ್ಕೆ ಏರಿಕೆ: ಇದರ ಮಧ್ಯೆ ಜಿಲ್ಲೆಯಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ ಏರುತ್ತಲೇ ಇದ್ದು ಶುಕ್ರವಾರ ಚಿಕ್ಕಬಳ್ಳಾಪುರ ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ ತಲಾ ಒಬ್ಬರು ಕೋವಿಡ್-19ಗೆ ಬಲಿಯಾಗಿರುವುದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ. ಸಾವಿನ ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ ಮೊದಲ ಸ್ಥಾನದಲ್ಲಿದೆ. ಚಿಕ್ಕಬಳ್ಳಾಪುರದಲ್ಲಿ ಒಟ್ಟು 6 ಮಂದಿ ಇದುವರೆಗೂ ಕೋವಿಡ್-19 ಬಲಿಯಾಗಿದ್ದರೆ ಉಳಿದಂತೆ ಶಿಡ್ಲಘಟ್ಟ 1, ಗೌರಿಬಿದನೂರು 4, ಚಿಂತಾಮಣಿ 1 ದಾಖಲಾಗಿದೆ.
ಒಟ್ಟು 351 ಮಂದಿ ಸೋಂಕಿತರ ಪೈಕಿ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 218 ಮಂದಿ ಮಾತ್ರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ 12 ಮಂದಿ ಕೋವಿಡ್ಗೆ, 1 ಕೋವಿಡ್ ಅಲ್ಲದ ಅನ್ಯ ಕಾರಣಕ್ಕೆ ಮೃತ ಪಟ್ಟಿದ್ದಾರೆ. ಉಳಿದಂತೆ 120 ಸಕ್ರಿಯ ಪ್ರಕರಣಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ