ಶ್ರೀಲಕ್ಷ್ಮೀ ವೆಂಕಟರವಣ ಸ್ವಾಮಿ ದೇವಸ್ಥಾನಕ್ಕೆ 2 ಲಕ್ಷ ಅನುದಾನ
Team Udayavani, Mar 6, 2021, 3:30 PM IST
ಚೇಳೂರು: ತಾಲೂಕಿನ ಪಾಳ್ಯಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಪುರಾತನ ಕಾಲದ ಪ್ರಸಿದ್ಧ ಪಾಳ್ಯಕೆರೆ ಗ್ರಾಮದ ಲಕ್ಷ್ಮೀ ವೆಂಕಟರವಣಸ್ವಾಮಿ ದೇವಾಲಯದ ಅಭಿವೃದ್ಧಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎರಡು ಲಕ್ಷ ರೂ. ಅನುದಾನ ವಿತರಿಸಲಾಯಿತು.
ಹೆಸರುವಾಸಿಯಾದ ಪಾಳ್ಯಕೆರೆ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟರವಣಸ್ವಾಮಿ ದೇವಸ್ಥಾನ ಅಭಿವೃದ್ಧಿ ಮಾಡಲು ಗ್ರಾಮ ಸ್ಥರು ಹಾಗೂ ಅನೇಕ ದಾನಿಗಳು ಶ್ರಮಿಸುತ್ತಿದ್ದಾರೆ. ಗ್ರಾಮ ಅಭಿವೃದ್ಧಿಯತ್ತ ಸಾಗಲು ಊರಿನ ಮಧ್ಯದಲ್ಲಿರುವ ಲಕ್ಷ್ಮೀ ವೆಂಕಟರವಣ ಸ್ವಾಮಿ ದೇವಸ್ಥಾನ, ಗೋಪುರವನ್ನು ನವೀಕರಣ ಮಾಡಬೇಕೆಂಬ ನಿರ್ಧಾರದ ಮೇಲೆ ಟ್ರಸ್ಟ್ ಮುಖಾಂತರ ಅಭಿವೃದ್ಧಿ ಸಾಧಿಸಲು ಶ್ರಮಿಸುತ್ತಿದ್ದಾರೆ.
ಜಿಲ್ಲಾ ಯೋಜನಾಧಿಕಾರಿ ಗಿರೀಶ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಹಲವಾರು ಕಾರ್ಯಕ್ರಮ ಗಳು ಗ್ರಾಮಗಳ ಅಭಿ ವೃದ್ಧಿಗೆ ಸಹಕಾರಿಯಾಗಿದೆ. ಧರ್ಮಾಧಿ ಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಜಾತಿ, ಧರ್ಮ, ಬೇದ ವಿಲ್ಲದೆ ದೇವಸ್ಥಾನ ಗಳ ಜೀರ್ಣೋದ್ಧಾರಕ್ಕೆ ಮುಂದಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಅಭಿವೃದ್ಧಿ ಕ್ಷೇತ್ರ ಪಾಲಕರಾದ ಜೈಪಾಲ್, ಚೇಳೂರಿನ ನೊಂಡಲ್ ಅಭಿಷೇಕ್ ಮತ್ತು ವೆಂಕರ ವಣ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಶ್ರೀನಾಥ ರೆಡ್ಡಿ, ಸದಸ್ಯರಾದ ಪಿ.ಎನ್.ಶೇಷಗಿರಿರಾವ್, ಪಿ.ಆರ್.ಸುಂದರೇಶ್, ಪಿ. ವೆಂಕಟರೆಡ್ಡಿ, ಜ್ಯೋತಿ ನಗರಂ ವೆಂಕಟ ರವಣಸ್ವಾಮಿ, ಆಂಜನೇಯ ಪ್ರಸಾದ್, ಡಂಕಣಾಚಾರಿ, ರಾಮಕೃಷ್ಣಾರೆಡ್ಡಿ, ಎಂ.ಕೆ. ನಾರಾಯಣರೆಡ್ಡಿ, ಮಾಚನಹಳ್ಳಿ ಪಿ. ವೆಂಕಟ ರಾಮರೆಡ್ಡಿ, ನರ ಸಿಂಹಮೂರ್ತಿ ಮತ್ತು ಎಲ್ಲಾ ಸದಸ್ಯರು ಹಾಗೂ ಗ್ರಾಮ ಸ್ಥರು ಭಾಗವಹಿಸಿದ್ದರು.
ಗ್ರಾಮಸ್ಥರಲ್ಲಿ ಸಂತಸ :
ದೇವಸ್ಥಾನ ಸಮಿತಿ ಅಧ್ಯಕ್ಷರಾಗಿರುವ ಶ್ರೀನಾಥರೆಡ್ಡಿ ಮಾತನಾಡಿ, ದೇವಸ್ಥಾನದ ಕಾಮಗಾರಿಯ ಬಗ್ಗೆ ಪೂಜ್ಯರಲ್ಲಿ ವಿಮರ್ಶೆ ಮಾಡಿದಾಗ ಅವರು ಒಪ್ಪಿ ನಮ್ಮ ದೇವಸ್ಥಾನಕ್ಕೆ ವಾರದ ಹಿಂದೆ ಎರಡು ಲಕ್ಷ ರೂ.ಚೆಕ್ಮುಖಾಂತರ ಕೊಡುತ್ತೇನೆಂದು ಭರವಸೆ ನೀಡಿದ್ದರು.ಅದೇ ರೀತಿ ಇದೀಗ ಅನುದಾನ ನೀಡಿದ್ದು, ಗ್ರಾಮಸ್ಥರಲ್ಲಿ ಮತ್ತು ನಮಗೆ ಸಂತಸ ಉಂಟುಮಾಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ