22 ಕೇಂದ್ರ, 12,215 ವಿದ್ಯಾರ್ಥಿಗಳು
Team Udayavani, Jun 17, 2020, 6:39 AM IST
ಚಿಕ್ಕಬಳ್ಳಾಪುರ: ಕೋವಿಡ್ 19 ಸಂಕಷ್ಟದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಆಂಗ್ಲ ಪರೀಕ್ಷೆ ಜಿಲ್ಲಾದ್ಯಂತ ಗುರುವಾರ ನಡೆಯಲಿದ್ದು, ಒಟ್ಟು 22 ಕೇಂದ್ರಗಳಲ್ಲಿ 12,215 ವಿದ್ಯಾರ್ಥಿಗಳು ಪರೀಕ್ಷೆ ಬರೆಯಯಲಿದ್ದಾರೆ.
ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದಾಗ ಪರೀಕ್ಷೆ ನಡೆಸದೇ ಮುಂದೂಡಿದ್ದ ಸರ್ಕಾರ ಪ್ರಕರಣಗಳ ಸಂಖ್ಯೆ ಹೆಚ್ಚಾದ ಸಂದರ್ಭದಲ್ಲಿ ಆಂಗ್ಲ ಪರೀಕ್ಷೆ ನಡೆಸುತ್ತಿರುವುದು ವಿದ್ಯಾರ್ಥಿ ಪೋಷಕರಲ್ಲಿ ಸಹಜವಾಗಿಯೇ ಆತಂಕ ಮನೆ ಮಾಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ತಡೆಗೆ ಹಲವು ದಿಟ್ಟ ಕ್ರಮಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿದೆ.
ಮೂರು ದಿನ ಮುಂಚೆ ಸ್ಯಾನಿಟೈಸ್: ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಮೂರು ದಿನ ಮುಂಚಿತವಾಗಿ ಸ್ಯಾನಿಟೈಸ್ ಮಾಡಲಾಗಿದ್ದು, ಕೇಂದ್ರಗಳ ಮುಖ್ಯ ಅಧೀಕ್ಷಕರು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸುವಂತೆ ಸೂಚಿಸಲಾಗಿದೆ.
ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗೆ 8-30 ರೊಳಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು. ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ 4 ಮಂದಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಕಡ್ಡಾ ಯವಾಗಿ ಮಾಸ್ಕ್ ಧರಿಸಿರಬೇಕೆಂದು ಸೂಚಿಸಲಾಗಿದೆ.
144 ಸೆಕ್ಷನ್ ಜಾರಿ: ಪರೀಕ್ಷಾ ಕೇಂದ್ರದ 200 ಮೀ. ಸುತ್ತಲೂ ಸೆಕ್ಷನ್ 144 ಜಾರಿ ಮಾಡಿ ಜಿಲ್ಲಾಡಳಿತ ಆದೇಶಿಸಿದೆ. ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ದಿನ ಮುಚ್ಚಿಸುವಂತೆ ಆದೇಶಿಸಲಾಗಿದೆ.
ಪ.ಪೂ.ಶಿಕ್ಷಣ ಇಲಾಖೆ ನೀಡಿರುವ ಮಾರ್ಗಸೂಚಿಯಂತೆ 200 ಕೆಎಸ್ಆರ್ ಟಿಸಿ ಬಸ್ಗಳನ್ನು ಪಿಯುಸಿ ಆಂಗ್ಲ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳನ್ನು ಕರೆ ತರಲು ನಿಯೋಜಿಸಲಾಗಿದೆ. ಪರೀಕ್ಷೆಗೆ ಹೋಗಿ ಬರಲು ವಿದ್ಯಾರ್ಥಿಗಳು ಹಳೆಯ ಸ್ಮಾರ್ಟ್ ಪಾಸ್ ಅಥವಾ ಪ್ರವೇಶ ಪತ್ರ ತೋರಿಸಿ ಬಸ್ಗಳಲ್ಲಿ ಪ್ರಯಾಣಿಸಬಹುದು.
-ವಿ.ಬಸವರಾಜ್, ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್ಆರ್ಟಿಸಿ
* ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ