ಮೌಂಟ್‌ ತುಳಿಯನ್‌ ಶಿಖರ ಏರಿದ ಜಿಲ್ಲೆಯ ಸಾಹಸಿಗರು

22 ಗಂಟೆ ಒಳಗೆ ಶಿಖರ ಏರಿ ಇಳಿದು ಸಾಹಸ ರಾಷ್ಟ್ರಧ್ವಜ, ನಾಡಧ್ವಜ ಹಾರಿಸಿ ಗಮನ ಸೆಳೆದ ಸಾಧಕರು

Team Udayavani, Sep 21, 2021, 3:20 PM IST

ಮೌಂಟ್‌ ತುಳಿಯನ್‌ ಶಿಖರ ಏರಿದ ಜಿಲ್ಲೆಯ ಸಾಹಸಿಗರು

ಚಿಕ್ಕಬಳ್ಳಾಪುರ: ಮೈಕೊರೆಯುವ ಚಳಿಯ ಅಬ್ಬರದ ನಡೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಸಾಹಸ ಚಾರಣಿಗರು ಕೇವಲ 22 ಗಂಟೆಯೊಳಗೆ ಜಮ್ಮು ಮತ್ತು ಕಾಶ್ಮೀರದ ಮೌಂಟ್‌ ತುಳಿಯನ್‌ ಶಿಖರವನ್ನು ಏರಿ ಸಾಧನೆ ಮಾಡಿದ್ದಾರೆ.

ಜನರಲ್‌ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ, ಕರ್ನಾಟಕ ಸರ್ಕಾರ ವತಿಯಿಂದ ರಾಜ್ಯದ ಸಾಹಸಿಗರನ್ನು ಮೌಂಟ್‌ ತುಳಿಯನ್‌ ಶಿಖರ ಏರಲು ಆಯ್ಕೆ ಮಾಡಿಕೊಂಡಿತ್ತು. ಶಿಖರದ ತುತ್ತ ತುದಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಸಾಹಸಿಗರು ಮೊದಲು ಪ್ರವೇಶಿಸಿದರಲ್ಲದೆ, ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಹಾರಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರಮೇಶ್‌, ಮಂಚೇನಹಳ್ಳಿಯ ಶಂಕರ್‌ನಾಗ್‌, ಶಿಡ್ಲಘಟ್ಟ ತಾಲೂಕಿನ ಸುನೀಲ್‌ನಾಯಕ್‌ ಸೇರಿದಂತೆ 22 ಜನರನ್ನು ಹೊಂದಿದ ತಂಡ ಜಮ್ಮು ಮತ್ತು ಕಾಶ್ಮಿರದ 16,500 ಅಡಿ ಅತಿ ಎತ್ತರದ ಮೌಂಟ್‌ ತುಳಿಯನ್‌ ಶಿಖರವನ್ನು ಕೇವಲ 22 ಗಂಟೆ ಒಳಗೆ ಏರಿ ಇಳಿದು ಸಾಹಸ ಮೆರೆದಿದ್ದಾರೆ, ಜಿಲ್ಲೆಯ ಮೂರು ಸಾಹಿಸಿಗರ ಸಾಧನೆಯನ್ನು ಮೆಚ್ಚಿ ರೇಷ್ಮೆ ನಾಡಿನ ಜನರು ಅಭಿನಂದಿಸಿದ್ದಾರೆ.

ಇದನ್ನೂ ಓದಿ:ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ

22 ಗಂಟೆ ಒಳಗೆ ಸಂಪೂರ್ಣ ಯಶಸ್ವಿ:
ಆ.26ರಂದು ವಿಮಾನ ಪ್ರಯಾಣ ಮಾಡಿ ಜಮ್ಮುವಿನ ಪಹಾಲ್ಗಮ್‌ನ ನಗರದ ಜವಾರ್‌ ಇನ್ಸ್ಟಿಟ್ಯೂಟ್‌ ಆಫ್‌ ಮೌಂಟೈನೇರಿಂಗ್‌ ಆ್ಯಂಡ್‌ ವಿನrರ್‌ ಸ್ಪೋರ್ಟ್ಸ್ ಸಂಸ್ಥೆ ಸಹಕಾರದಿಂದ ಆ.31ರಂದು ಮೌಂಟ್‌ ತುಳಿಯನ್‌ ಶಿಖರವನ್ನು ಸತತವಾಗಿ 22 ಗಂಟೆ ಒಳಗೆ ಸಂಪೂರ್ಣ ಯಶಸ್ವಿಗೊಳಿಸಿದ್ದಾರೆ.

ಸಾಕಷ್ಟು ಅಪಾಯ: 22 ಸಾಹಸಿಗರಲ್ಲಿ ಕೇವಲ 13 ಮಂದಿ ಮಾತ್ರ ಗುರಿ ತಲುಪಿದ್ದಾರೆ. ಅದರಲ್ಲಿ ಮೊಟ್ಟ ಮೊದಲಿಗೆ ಶಿಖರದ ತುದಿ ಸೇರಿಕೊಳ್ಳುವಲ್ಲಿ ಜಿಲ್ಲೆಯ ರಮೇಶ್‌ ಯಶಸ್ವಿ ಆಗಿದ್ದಾರೆ. ಶಿಖರವನ್ನು ಹತ್ತುವ ವೇಳೆ ಸಾಕಷ್ಟು ಅಪಾಯಗಳಿಂದ ತಪ್ಪಿಸಿಕೊಂಡ ಕೆಲವು ಘಟನೆಗಳನ್ನು ಸಾಹಸಿ ಸುನೀಲ್‌ ನಾಯಕ್‌ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಅಪಾಯದಿಂದ ಪಾರು: ಶಿಖರವನ್ನು ಏರುವ ವೇಳೆ ತಿನ್ನಲು ಆಹಾರದ ಸಮಸ್ಯೆ, ಉಸಿರಾಡಲು ಗಾಳಿಯ ಸಮಸ್ಯೆ ತಂಡದ ಕೆಲವರಿಗೆ ಉಂಟಾಗಿ ಸಾಕಷ್ಟು ತೊಂದರೆ ಆಗಿತ್ತು. ಅದೇ ರೀತಿ ದೊಡ್ಡ ಕಲ್ಲು ಬಂಡೆಗಳು ಶಿಖರದಿಂದ ಉರುಳಿ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದೇವೆ ಎಂದು ತಿಳಿಸಿದರು. ಸದ್ಯ ಮೌಂಟ್‌ ತುಳಿಯನ್‌ ಶಿಖರವನ್ನು ಏರಿದ ನಂತರ ತುದಿಯಲ್ಲಿ ನಾಡಧ್ವಜ ಹಾಗೂ ರಾಷ್ಟ್ರಧ್ವಜ ದೊಂದಿಗೆ ಪೋಸ್‌ ನೀಡಿರುವ ದೃಶ್ಯ ಹಾಗೂ ಶಿಖರವನ್ನು ಏರುತ್ತಿರುವ ಸಾಹಸ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ಅಪೂರ್ವ ಸಾಧನೆ ಮಾಡಿದ ಸುನೀಲ್‌ ನಾಯಕ್‌, ರಮೇಶ್‌, ಶಂಕರ್‌ನಾಗ್‌ ಅವರನ್ನು ಜಿಲ್ಲೆಯ ಜನತೆ ಅಭಿನಂದಿಸಿದ್ದಾರೆ.

 

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.