ಸ್ಟ್ರಾಂಗ್‌ ರೂಂಗೆ 3 ಹಂತದ ಭದ್ರತೆ


Team Udayavani, Apr 20, 2019, 3:00 AM IST

strong-roo

ಚಿಕ್ಕಬಳ್ಳಾಪುರ: ಅಲ್ಲಿ ಹೆಜ್ಜೆ ಹೆಜ್ಜೆಗೂ ಶಸ್ತ್ರಸಜ್ಜಿತ ಭದ್ರತಾ ಪಡೆಗಳ ಹದ್ದಿನ ಕಣ್ಣು..ಸುತ್ತಲೂ ಸಿಸಿ ಕ್ಯಾಮೆರಾಗಳ ಕಣ್ಗಾವಲು. ಮೂರು ಹಂತದಲ್ಲಿ ಬಿಗಿ ಪೊಲೀಸ್‌ ಪಹರೆ..8 ಕೊಠಡಿಗಳ ಕಿಟಕಿ, ಬಾಗಿಲು ಸಂಪೂರ್ಣ ಬಂದ್‌, ವಿದ್ಯುತ್‌ ಸಂಪರ್ಕ ಕಟ್‌..ದಿನದ 24 ಗಂಟೆ ಹೈಲರ್ಟ್‌.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗುರುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅಖಾಡದಲ್ಲಿದ್ದ 15 ಮಂದಿ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಅಡಗಿರುವ ಇವಿಎಂ ಮತಯಂತ್ರಗಳನ್ನು ಶೇಖರಿಸಿಟ್ಟಿರುವ ನಗರದ ಹೊರ ವಲಯದ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ಸ್ಟ್ರಾಂಗ್‌ ರೂಮ್‌ ಬಳಿ ಶುಕ್ರವಾರ ಬೆಳಗ್ಗೆ ಕಂಡು ಬಂದ ದೃಶ್ಯಗಳು ಇವು.

ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ದೇವನಹಳ್ಳಿ ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿಯುತ್ತಿದ್ದಂತೆ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆದಿರುವ ಇವಿಎಂ ಮತಯಂತ್ರಗಳನ್ನು ಭಾರೀ ಭದ್ರತೆಯಲ್ಲಿ ಸ್ಟ್ರಾಂಗ್‌ ರೂಂ ಸ್ಥಾಪಿಸಿರುವ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ಗುರುವಾರ ಮಧ್ಯ ರಾತ್ರಿಯೇ ತಂದಿಟ್ಟಿದ್ದಾರೆ. ಜಿಲ್ಲೆಯ ಚಿಂತಾಮಣಿ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಕೋಲಾರಕ್ಕೆ ಕೊಂಡೊಯ್ಯಲಾಗಿದೆ.

ಮೂರು ಹಂತದಲ್ಲಿ ಭದ್ರತೆ: ಎಂಟು ವಿಧಾನಸಭಾ ಕ್ಷೇತ್ರದ ಇವಿಎಂ ಮತಯಂತ್ರಗಳು ಇರುವ 8 ಕೊಠಡಿಗಳ ಸ್ಟ್ರಾಂಗ್‌ ರೂಮ್‌ ಸುತ್ತಲೂ ಮೊದಲ ವೃತ್ತದಲ್ಲಿ ಕೇಂದ್ರ ಮೀಸಲು ಅರೆಸೇನಾ ಪಡೆ ಯೋಧರನ್ನು ಕೊಠಡಿಗಳ ಸುತ್ತಲೂ ನಿಯೋಜಿಸಲಾಗಿದ್ದು, ಸದಾ ಶಸ್ತ್ರಸಜ್ಜಿತವಾಗಿ ಪ್ಯಾರಾಮಿಲಿಟರಿ ಪಡೆಗಳು ಹದ್ದಿನ ಕಣ್ಣು ಇಟ್ಟು ನಿಗಾ ವಹಿಸಿವೆ.

ಎರಡನೇ ಹಂತದಲ್ಲಿ ಪೊಲೀಸ್‌ ಅಧಿಕಾರಿಗಳ ಮಟ್ಟದಲ್ಲಿ ಡಿವೈಎಸ್‌ಪಿ, ಸಿಪಿಐ, ಎಎಸ್‌ಐ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಮೂರನೇ ಹಂತದಲ್ಲಿ 1 ಕೆಎಸ್‌ಆರ್‌ಪಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಯನ್ನು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇಡೀ ಸ್ಟ್ರಾಂಗ್‌ ರೂಮ್‌ನ್ನು ಕೇಂದ್ರ ಮೀಸಲು ಅರೆಸೇನಾ ಪಡೆಗಳು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ಡೀಸಿ ಮುಂದಾಳತ್ವದಲ್ಲಿ ಬೀಗ ಮುದ್ರೆ: ಶುಕ್ರವಾರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ಎಸ್‌ಪಿ ಕೆ.ಸಂತೋಷಬಾಬು, ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡ, ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ಸಮ್ಮುಖದಲ್ಲಿ ಬಿಗಿ ಭದ್ರತೆಯಲ್ಲಿ ಬಂದಿರುವ ಇವಿಎಂ ಹಾಗೂ ವಿವಿ ಪ್ಯಾಟ್‌ಗಳ ಯಂತ್ರಗಳನ್ನು ಒಟ್ಟು 8 ಕೊಠಡಿಗಳನ್ನು ಪಡೆದು ಕ್ರಮವಾಗಿ ಜೋಡಿಸಿ ಇಡಲಾಗಿದೆ.

ಸ್ಟ್ರಾಂಗ್‌ ರೂಮ್‌ಗೆ 18 ಸಿಸಿ ಕ್ಯಾಮೆರಾ ಅಳವಡಿಕೆ: ಸ್ಟ್ರಾಂಗ್‌ ರೂಮ್‌ ಇರುವ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ಬರೋಬ್ಬರಿ 18 ಸಿಸಿ ಕ್ಯಾಮೆರಾಗಳನ್ನು ಮುಂಜಾಗ್ರತಾವಾಗಿ ಅಳವಡಿಸಲಾಗಿದ್ದು, 8 ಕೊಠಡಿಗಳಿಗೆ ತಲಾ ಇಬ್ಬರಂತೆ 16 ಮಂದಿ ಕೇಂದ್ರ ಮೀಸಲು ಅರೆಸೇನಾ ಪಡೆಯನ್ನು ಶಸ್ತ್ರಸಜ್ಜಿತವಾಗಿ ನೇಮಿಸಲಾಗಿದೆ.

ಪಾಳಿಯಂತೆ ದಿನದ 24 ಗಂಟೆ ಕಾಲ ಪೊಲೀಸರನ್ನು ನಿಯೋಜಿಸಲಾಗಿದ್ದು, 1 ಡಿವೈಎಸ್‌ಪಿ, 3 ಸಿಪಿಐ, 6 ಪಿಎಸ್‌ಐ ಹಾಗೂ 1 ಡಿಆರ್‌ ಹಾಗೂ 1 ಕೆಎಸ್‌ಆರ್‌ಪಿ ತುಕಡಿಗಳನ್ನು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಸಂತೋಷ ಬಾಬು ತಿಳಿಸಿದರು.

ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಸ್ಟ್ರಾಂಗ್‌ ರೂಮ್‌ ತೆರೆದು ಒಟ್ಟು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಒಟ್ಟು 8 ಕೊಠಡಿಗಳನ್ನು ತೆರೆದು ಇವಿಎಂ ಹಾಗೂ ಮತಯಂತ್ರಗಳನ್ನು ಜೋಡಿಸಿ ಇಡಲಾಗಿದೆ. ಸ್ಟ್ರಾಂಗ್‌ ರೂಮ್‌ಗೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು, ಎಲ್ಲಾ 8 ಕೊಠಡಿಗಳ ಕಿಟಕಿ, ಬಾಗಿಲುಗಳನ್ನು ಸಂಪೂರ್ಣ ಬಂದ್‌ ಮಾಡಿ ಸೀಲ್‌ ಮಾಡಲಾಗಿದೆ.
-ಅನಿರುದ್ಧ್ ಶ್ರವಣ್‌, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.