ಪಿಯು ಪರೀಕ್ಷೆಗೆ 442 ವಿದ್ಯಾರ್ಥಿಗಳು ಗೈರು
Team Udayavani, Jun 19, 2020, 6:22 AM IST
ಚಿಕ್ಕಬಳ್ಳಾಪುರ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯುಸಿ ಆಂಗ್ಲ ಪರೀಕ್ಷೆ ಗುರುವಾರ ಜಿಲ್ಲಾದ್ಯಂತ ಶಾಂತಿಯುತವಾಗಿ ನಡೆಯಿತು.
442 ಮಂದಿ ಗೈರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆ, ಅಂತರ ಜಿಲ್ಲೆ ಹಾಗೂ ಅಂತರ ರಾಜ್ಯದ ವಿದ್ಯಾರ್ಥಿಗಳು ಸೇರಿ ಒಟ್ಟು ನೋಂದಣಿಯಾಗಿದ್ದ 12,134 ವಿದ್ಯಾರ್ಥಿಗಳ ಪೈಕಿ 11,692 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದು ಉಳಿದ 442 ವಿದ್ಯಾರ್ಥಿಗಳು ಗೈರಾಗಿದ್ದರು.
200 ಕೆಎಸ್ಆರ್ಟಿಸಿ ಬಸ್: ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅನುಕೂಲವಾಗುವಂತೆ ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ಒಟ್ಟು 200 ಕೆಎಸ್ಆರ್ಟಿಸ್ ಬಸ್ ಸೌಕರ್ಯ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳು ಯಾವುದೇ ಅಡೆತಡೆ ಇಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆಯುವಂತಾಯಿತು. ಇದರ ನಡುವೆಯು ಕೆಲ ವಿದ್ಯಾರ್ಥಿಗಳು ಅವರ ಪೋಷಕರ ಜೊತೆಗೆ ಸ್ವಂತ ವಾಹನಗಳಲ್ಲಿ ಆಗಮಿಸಿ ಪರೀಕ್ಷೆ ಬರೆದರು.
22 ಕೇಂದ್ರಗಳಲ್ಲಿ ಪರೀಕ್ಷೆ: ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ 6, ಬಾಗೇಪಲ್ಲಿ 03, ಗೌರಿಬಿದನೂರು 04, ಶಿಡ್ಲಘಟ್ಟ 02, ಚಿಂತಾಮಣಿ 06 ಹಾಗೂ ಗುಡಿಬಂಡೆ 01 ಸೇರಿ ಒಟ್ಟು 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿಯಾಗಿದ್ದ ಜಿಲ್ಲೆಯ ಒಟ್ಟು 11,807 ವಿದ್ಯಾರ್ಥಿಗಳ ಪೈಕಿ 11,368 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉಳಿದ 439 ಮಂದಿ ಗೈರಾದರೆ ಪಕ್ಕದ ಜಿಲ್ಲೆಗಳ ಒಟ್ಟು 324 ವಿದ್ಯಾರ್ಥಿಗಳ ಪೈಕಿ 321 ಮಂದಿ ಪರೀಕ್ಷೆ ಬರೆದು 03 ಮಂದಿ ಗೈರಾದರೆ ಅಂತರ ರಾಜ್ಯಗಳಿಂದ ನೋಂದಣಿ ಯಾಗಿದ್ದ 9 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಥರ್ಮಲ್ ಸ್ಕ್ರೀನಿಂಗ್ ಬಳಿಕ ಕೇಂದ್ರದೊಳಗೆ ವಿದ್ಯಾರ್ಥಿಗಳ ಪ್ರವೇಶ: ಬೆಳಗ್ಗೆ 8:30ಕ್ಕೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಕಾಲೇಜುಗಳಿಗೆ ಆಗಮಿಸಿದ್ದರು. ಪರೀಕ್ಷಾ ಕೇಂದ್ರದೊಳಗೆ ಪ್ರವೇಶಕ್ಕೂ ಮೊದಲು ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ಪ್ರತಿಯೊಬ್ಬರನ್ನು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷಿಸಿ ಕೈಗಳಿಗೆ ಸ್ಯಾನಿಟೈಸರ್ ಹಾಕಿ ಮಾಸ್ಕ್ ಕೊಟ್ಟು ಪರೀಕ್ಷಾ ಕೇಂದ್ರದೊಳಗೆ ಕಳುಹಿಸಿಕೊಟ್ಟ ದೃಶ್ಯಗಳು ಸಾಮಾನ್ಯವಾಗಿತ್ತು. ದೇಹದ ಉಷ್ಣಾಂಶ ಪರೀಕ್ಷೆಗಾಗಿ ನೂರಾರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಆವರಣದಲ್ಲಿ ಸಾಲುಗಟ್ಟಿ ನಿಂತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ