ದುರಸ್ತಿಗಾಗಿ ಕಾದಿವೆ 506 ಶಾಲೆಗಳು


Team Udayavani, May 18, 2022, 3:17 PM IST

ದುರಸ್ತಿಗಾಗಿ ಕಾದಿವೆ 506 ಶಾಲೆಗಳು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪಠ್ಯ ಪುಸ್ತಕ ಮತ್ತು ಸಮವಸ್ತ್ರದ ಅಭಾವದ ನಡುವೆಯೂ ಮೇ.16 ರಿಂದಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಕಾರ್ಯಾರಂಭವಾಗಿದೆ. ವಿದ್ಯಾರ್ಥಿಗಳುಉತ್ಸಾಹದಿಂದ ಶಾಲೆಗೆ ಬಂದಿದ್ದಾರೆ. ಆದರೆ,ಜಿಲ್ಲೆಯಲ್ಲಿ ಈಗಾಗಲೇ ಸುರಿದ ಮಳೆಯಿಂದಾಗಿ1,560 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಪೈಕಿ 506 ಶಾಲೆಗಳಿಗೆ ಹಾನಿಯಾಗಿದ್ದು ಅದರಲ್ಲಿ 1,114 ಕೊಠಡಿಗಳಿಗೆ ಹಾನಿಯಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಈ ಅವಧಿಯಲ್ಲಿ ಸುರಿದ ಮಳೆಯಕಾರಣದಿಂದ ಅನೇಕ ಶಾಲೆಯ ಕೊಠಡಿಗಳು ಶಿಥಿಲ ವ್ಯವಸ್ಥೆಗೆ ತಲುಪಿ ನೆಲಕಚ್ಚಿದರೆ, ಇನ್ನು ಬಹುತೇಕ ಶಾಲೆಗಳಕೊಠಡಿಗಳ ಚಾವಣಿ ಮಳೆಯ ಕಾರಣದಿಂದ ಸುರಿ ಯುತ್ತಿರುವ ದೂರುಗಳು ಸಹ ಕೇಳಿಬಂದಿದೆ. ಶಾಲೆಗಳಸ್ಥಿತಿಗತಿ ಸುಧಾರಿಸುವ ಸಲುವಾಗಿ ಶಿಕ್ಷಣ ಇಲಾಖೆಯಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ಸರ್ಕಾರಿ ಶಾಲೆಗಳುಮತ್ತು ಆ ಶಾಲೆಗಳಲ್ಲಿ ಶಿಥಿಲ ಮತ್ತು ನೆಲಕಚ್ಚಿರುವಕೊಠಡಿಗಳ ಸಂಖ್ಯೆಯನ್ನು ಪಟ್ಟಿ ಮಾಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಭರ್ಜರಿಯಾಗಿಮಳೆಯಾಗಿದ್ದು ಪ್ರಸಕ್ತ ಸಾಲಿನಲ್ಲೂ ಮಳೆಪ್ರಾರಂಭವಾಗಿದೆ. ಇದರಿಂದ ಎಚ್ಚೆತ್ತಿಕೊಂಡಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಾಗಲೇ ಸಿದ್ಧಪಡಿಸಿರುವ ಪಟ್ಟಿಯನ್ನು ಹಿರಿಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಚಿಂತಾಮಣಿ ತಾಲೂಕಿನಲ್ಲಿ 327 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 63 ಮಳೆಯಿಂದ ಹಾಗೂಇತರೆ ಕಾರಣಗಳಿಂದ ಹಾನಿಯಾಗಿದೆ. 131 ಶಾಲಾಕೊಠಡಿಗಳು ದುರಸ್ತಿಯಾಗಬೇಕಿದೆ. ಒಟ್ಟು 24ಸರ್ಕಾರಿ ಪ್ರೌಢಶಾಲೆಗಳಿದ್ದು, ಅದರಲ್ಲಿ 1 ಶಾಲೆಮಳೆಯಿಂದ, 06 ಪ್ರೌಢಶಾಲಾ ಕೊಠಡಿಗಳುಹಾನಿಯಾಗಿವೆ. ಒಟ್ಟು ಸರ್ಕಾರಿ ಶಾಲೆಗಳ ಸಂಖ್ಯೆ 351ಅದರಲ್ಲಿ 64 ಶಾಲೆಗಳು ಮತ್ತು 137 ಕೊಠಡಿಗಳು ಮಳೆಯಿಂದ ಹಾನಿಯಾಗಿವೆ.

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 233 ಸರ್ಕಾರಿಪ್ರಾಥಮಿಕ ಶಾಲೆಗಳಿದ್ದು, 149 ಮಳೆ, ಇತರೆ ಕಾರಣ ದಿಂದ ಹಾನಿಯಾಗಿವೆ. 291 ಶಾಲಾ ಕೊಠಡಿ ದುರಸ್ತಿಯಾಗಬೇಕಿದೆ. ಒಟ್ಟು 14 ಸರ್ಕಾರಿ ಪ್ರೌಢಶಾಲೆಗಳಿದ್ದು, ಅದರಲ್ಲಿ 1 ಶಾಲೆ ಮಳೆಯಿಂದ, 6 ಪ್ರೌಢಶಾಲಾಕೊಠಡಿಗಳು ಹಾನಿಯಾಗಿವೆ. ಒಟ್ಟು ಸರ್ಕಾರಿ ಶಾಲೆಗಳಸಂಖ್ಯೆ 247 ಅದರಲ್ಲಿ 150 ಶಾಲೆಗಳು, 297ಕೊಠಡಿಗಳು ಮಳೆಯಿಂದ ಹಾನಿಯಾಗಿವೆ.

ಗುಡಿಬಂಡೆ ತಾಲೂಕಿನಲ್ಲಿ 97 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 28 ಮಳೆ, ಇತರೆ ಕಾರಣದಿಂದಹಾನಿಯಾಗಿವೆ. 36 ಶಾಲೆ ಕೊಠಡಿದುರಸ್ತಿಯಾಗಬೇಕಿದೆ. ಒಟ್ಟು 12 ಸರ್ಕಾರಿ ಪ್ರೌಢಶಾಲೆಗಳಿದ್ದು, ಅದರಲ್ಲಿ 2 ಶಾಲೆ ಮಳೆಯಿಂದ, 4ಪ್ರೌಢಶಾಲಾ ಕೊಠಡಿಗಳು ಹಾನಿಯಾಗಿವೆ. ಒಟ್ಟು109 ಶಾಲೆಗಳಲ್ಲಿ 30 ಶಾಲೆಗಳು ಹಾಗೂ 40ಕೊಠಡಿಗಳು ಮಳೆಯಿಂದ ಹಾನಿಯಾಗಿವೆ.

ಗೌರಿಬಿದನೂರು ತಾಲೂಕಿನಲ್ಲಿ 286 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 136 ಮಳೆ, ಇತರಕಾರಣದಿಂದ ಹಾನಿಯಾಗಿವೆ. 314 ಶಾಲೆ ಕೊಠಡಿದುರಸ್ತಿಯಾಗಬೇಕಿದೆ. ಒಟ್ಟು 23 ಸರ್ಕಾರಿಪ್ರೌಢಶಾಲೆಗಳಿದ್ದು, ಅದರಲ್ಲಿ 5 ಶಾಲೆ ಮಳೆಯಿಂದ,20 ಪ್ರೌಢಶಾಲಾ ಕೊಠಡಿಗಳು ಹಾನಿಯಾಗಿವೆ. ಒಟ್ಟು 309 ಶಾಲೆಗಳಲ್ಲಿ 141ಶಾಲೆಗಳು ಮತ್ತು 334ಕೊಠಡಿಗಳು ಮಳೆಯಿಂದ ಹಾನಿಯಾಗಿವೆ.

ಬಾಗೇಪಲ್ಲಿ ತಾಲೂಕಿನಲ್ಲಿ 255 ಪ್ರಾಥಮಿಕಶಾಲೆಗಳಿದ್ದು, 44 ಮಳೆ, ಇತರ ಕಾರಣದಿಂದಹಾನಿಯಾಗಿವೆ. 102 ಶಾಲೆ ದುರಸ್ತಿಯಾಗಬೇಕಿದೆ. ಒಟ್ಟು 21 ಪ್ರೌಢಶಾಲೆಗಳಿದ್ದು, ಅದರಲ್ಲಿ 3 ಶಾಲೆ ಮಳೆಯಿಂದ ಹಾಗೂ 9 ಪ್ರೌಢಶಾಲಾ ಕೊಠಡಿಗಳು ಹಾನಿಯಾಗಿವೆ. ಒಟ್ಟು 276 ಶಾಲೆಗಳಲ್ಲಿ 47 ಶಾಲೆಗಳು

ಹಾಗೂ 111 ಕೊಠಡಿಗಳು ಹಾನಿಗೆ ಒಳಗಾಗಿವೆ.ಶಿಡ್ಲಘಟ್ಟ ದಲ್ಲಿ 251 ಪ್ರಾಥಮಿಕ ಶಾಲೆಗಳಿದ್ದು, 70ಮಳೆ, ಇತರ ಕಾರಣದಿಂದ ಹಾನಿಯಾಗಿವೆ. 176ಶಾಲೆ ದುರಸ್ತಿಯಾಗಬೇಕಿದೆ. ಒಟ್ಟು 17 ಸರ್ಕಾರಿಪ್ರೌಢಶಾಲೆಗಳಿದ್ದು, 4 ಶಾಲೆ ಮಳೆಯಿಂದ ಹಾಗೂ 19 ಪ್ರೌಢಶಾಲಾ ಕೊಠಡಿಗಳು ಹಾನಿಯಾಗಿವೆ. ಒಟ್ಟು268 ಶಾಲೆಗಳಲ್ಲಿ 74ಶಾಲೆಗಳು ಮತ್ತು 195 ಕೊಠಡಿಗಳು ಮಳೆಯಿಂದ ಹಾನಿಯಾಗಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 1449 ಪ್ರಾಥಮಿಕ ಶಾಲೆಗಳಿದ್ದು ಸುಮಾರು 490 ಪ್ರಾಥಮಿಕ ಶಾಲೆಗಳ 1050 ಕೊಠಡಿಗಳು ಅಧಿಕ ಮಳೆಯಿಂದ ಹಾನಿಗೊಳಗಾಗಿರುತ್ತದೆ ಅದರಂತೆ ಒಟ್ಟು 111 ಸರ್ಕಾರಿಪ್ರೌಢಶಾಲೆಗಳಿದ್ದು 16 ಶಾಲೆಗಳ ಸುಮಾರು 64 ಕೊಠಡಿಗಳು ಮಳೆಯಿಂದ ಹಾನಿಗೊಳಗಾಗಿರುತ್ತದೆ. ಮಳೆಯಿಂದ ಹಾನಿಗೊಳಗಾದ ಶಾಲಾ ಕೊಠಡಿಗಳುಶಿಥಿಲಗೊಂಡಿದ್ದು, ಗೋಡೆಗಳು ಬಿರುಕು ಬಿಟ್ಟಿವೆ, ಶಾಲೆ ಸೋರುತ್ತಿದ್ದು ಕುಸಿದು ಬೀಳವ ಸ್ಥಿತಿ ತಲುಪಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಆರಂಭವಾಗಿದೆ ಇತ್ತೀಚೆಗೆಸುರಿಯುತ್ತಿರುವ ಮಳೆಯಿಂದ ಈಗಾಗಲೇ ಹಾನಿಯಾಗಿರುವ ಶಾಲೆಗಳು ಮತ್ತುಕೊಠಡಿಗಳ ಪಟ್ಟಿಯನ್ನು ಸಿದ್ಧಪಡಿಸಿ ಹಿರಿಯ ಅಧಿಕಾರಿಗಳ ಮೂಲಕ ದುರಸ್ತಿಗೊಳಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಅನುದಾನ ಬಂದ ತಕ್ಷಣ ಹಾನಿಗೊಳಗಾಗಿರುವ ಶಾಲಾಕೊಠಡಿಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ನಡೆಸಲಾಗುವುದು. – ಜಯರಾಮರೆಡ್ಡಿ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಬಳ್ಳಾಪುರ

 

– ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.