8 ಕೋಟಿ ರೂ. ಬೆಳೆ ಹಾನಿ ಪರಿಹಾರ ಬಿಡುಗಡೆ


Team Udayavani, Dec 6, 2021, 1:24 PM IST

8 ಕೋಟಿ ರೂ. ಬೆಳೆ ಹಾನಿ ಪರಿಹಾರ ಬಿಡುಗಡೆ

ಚಿಕ್ಕಬಳ್ಳಾಪುರ: ಬೆಳೆ ಹಾನಿಗೊಳಗಾದ ಜಿಲ್ಲೆಯ ರೈತ ಫಲಾನುಭವಿಗಳಿಗೆ 8 ಕೋಟಿ ರೂ. ಹೆಚ್ಚು ಪರಿಹಾರ ಹಣ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ಲತಾ ತಿಳಿಸಿದರು.

ಬೆಳೆಹಾನಿ ಪರಿಹಾರ ಜಿಲ್ಲೆಯ ರೈತ ಫಲಾನುಭವಿಗಳಿಗೆ ಸಂದಾಯವಾಗಿರುವ ಬಗ್ಗೆಮಾಧ್ಯಮಗಳಿಗೆ ವಿವರಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಜಿಲ್ಲಾದ್ಯಂತ ಹಾನಿಗೊಳಗಾದರೈತರ ಬೆಳೆಗಳ ವಿವರವನ್ನು 4 ಹಂತಗಳಲ್ಲಿ ಪರಿಹಾರ ಪೊರ್ಟಲ್‌ನಲ್ಲಿ ನಮೂದಿಸಲಾಗಿದ್ದು, ಡಿ.4ರವರೆಗೆಒಟ್ಟು 16,917 ರೈತರಿಗೆ 8.07 ಕೋಟಿ ರೂ. ಪರಿಹಾರ ಹಣ ಅವರ ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ನೇರ ವರ್ಗಾವಣೆಯಾಗಿದೆ. ಇನ್ನುಳಿದವರಿಗೂ ಸದ್ಯದಲ್ಲೇ ಸಂದಾಯವಾಗಲಿದೆ ಎಂದು ಹೇಳಿದರು.

ಕಳೆದ ಅಕ್ಟೋಬರ್‌ ತಿಂಗಳಿನಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿ ಬೆಳೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ಜಂಟಿ ಸಮೀಕ್ಷೆ ನಡೆಸಿ ಬೆಳೆ ಹಾನಿವಿವರವನ್ನು ಸಂಗ್ರಹಿಸಿದ್ದರು. ಜಂಟಿ ಸಮೀಕ್ಷೆಯಿಂದಸ್ವೀಕೃತವಾದ ಬೆಳೆ ಹಾನಿಯಾದ ರೈತರ ವಿವರ ಹಾಗೂ ದತ್ತಾಂಶವನ್ನು ಪರಿಹಾರ ಪೊರ್ಟಲ್‌ನಲ್ಲಿ ನಮೂದಿಸುವ ಹಾಗೂ ಪರಿಹಾರ ಸಂದಾಯಿಸುವ ಎರಡೂ ಪ್ರಕ್ರಿಯೆಗಳು ಜೊತೆಯಲ್ಲಿಯೇ ಶರವೇಗದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.

7ಕ್ಕೆ ಪೂರ್ಣಗೊಳ್ಳುತ್ತದೆ: ಈ ಕಾರ್ಯದಲ್ಲಿ ಸರ್ಕಾರಿ ರಜಾ ದಿನಗಳನ್ನೂ ಲೆಕ್ಕಿಸದೆ ಸಮರೋಪಾದಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಪರಿಹಾರ ಪೊರ್ಟಲ್‌ನಲ್ಲಿ ಈ ಮಾಹಿತಿ ಹಾಗೂ ದತ್ತಾಂಶ ನಮೂದು ಪ್ರಕ್ರಿಯೆಯು ಡಿ.7ಕ್ಕೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಹೆಚ್ಚಿನ ಆತಂಕಕ್ಕೆ ಒಳಗಾಗಬೇಕಿಲ್ಲ: ಪರಿಹಾರ ಪೊರ್ಟಲ್‌ನಲ್ಲಿ ಈಗಾಗಲೇ ನಮೂದಾಗಿರುವ ಬೆಳೆ ಹಾನಿಗೊಳಗಾದ ರೈತರ ಪೈಕಿ ಡಿ.4ರವರೆಗೆ ಒಟ್ಟು 16,917 ರೈತ ಫಲಾನುಭವಿಗಳಿಗೆ 8.07 ಕೋಟಿ ರೂ.ಪರಿಹಾರ ಹಣವನ್ನು ಅವರ ಖಾತೆಗೆ ಪ್ರತ್ಯೇಕವಾಗಿನೇರ ವರ್ಗಾವಣೆಯಾಗಿದೆ ಜೊತೆಗೆ ಪ್ರತಿದಿನದತ್ತಾಂಶವನ್ನು ನಮೂದಿಸುವ ಹಾಗೂ ಪರಿಹಾರಸಂದಾಯಿಸುವ ಎರಡೂ ಪ್ರಕ್ರಿಯೆಗಳು ನಿರಂತರಚಾಲನೆಯಲ್ಲಿವೆ. ಪರಿಹಾರ ಸಂದಾಯವಾಗಿಲ್ಲದರೈತರು ಹೆಚ್ಚಿನ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಹೇಳಿದರು.

ಬೆಳೆ ಹಾನಿಗೊಳಗಾದ ಜಿಲ್ಲೆಯ ಎಲ್ಲಾ ರೈತರಿಗೆ ಈತಿಂಗಳ ಅಂತ್ಯದೊಳಗೆಪರಿಹಾರ ಹಣವು ತಮ್ಮಬ್ಯಾಂಕ್‌ ಖಾತೆಗಳಿಗೆ ಡಿಬಿಟಿ ಮೂಲಕತ್ವರಿತವಾಗಿ ನೇರ ವರ್ಗಾವಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.