Farmers: ನೋಂದಣಿಯಾಗದ 89 ಸಾವಿರ ರೈತರು!


Team Udayavani, Nov 16, 2023, 4:23 PM IST

Farmers: ನೋಂದಣಿಯಾಗದ 89 ಸಾವಿರ ರೈತರು!

ಚಿಕ್ಕಬಳ್ಳಾಪುರ: ರೈತರ ಸಮಗ್ರ ಮಾಹಿತಿ ದಾಖಲಿಸುವ ಪ್ರೋಟ್ಸ್‌ ಆ್ಯಪ್‌ನಲ್ಲಿ ಜಿಲ್ಲೆಯ ಬರೋಬ್ಬರಿ 89,344 ರೈತರ ಜಮೀನು ವಿವರಗಳು ಇನ್ನೂ ನೋಂದಣಿ ಆಗದೇ ಹೊರ ಉಳಿದಿದ್ದು, ಇದರ ಪರಿಣಾಮ ಸರ್ಕಾರ ಬರದ ಹಿನ್ನೆಲೆಯಲ್ಲಿ ನೀಡುವ ಬೆಳೆ ನಷ್ಟ ಪರಿಹಾರ ಸಿಗುವುದು ಅನುಮಾನವಾಗಿದೆ.

ಬೆಳೆ ನಷ್ಟ ಪರಿಹಾರ ಪಡೆಯಬೇಕಾದರೆ ರೈತರ ಮಾಹಿತಿ ಸಮಗ್ರವಾಗಿ ಪ್ರೋಟ್ಸ್‌ ಆ್ಯಪ್‌ನಲ್ಲಿ ದಾಖಲಾಗಿರಬೇಕು. ಆದರೆಜಿಲ್ಲೆಯಲ್ಲಿ ಸಾಕಷ್ಟು ಅರಿವು ಮೂಡಿಸಿದರೂ ಪ್ರೋಟ್ಸ್‌ ಆ್ಯಪ್‌ನಲ್ಲಿ ಒಟ್ಟು 2,28,158 ರೈತರ ಪೈಕಿ ಇಲ್ಲಿವರೆಗೂ ಕೇವಲ 1,38,814 ರೈತರು ಆ್ಯಪ್‌ನಲ್ಲಿ ದಾಖಲಾಗಿದ್ದು, ಇನ್ನೂ 89,344 ರೈತರು ಹೊರಗೆ ಉಳಿದಿದ್ದಾರೆ.

ಕೃಷಿ ಇಲಾಖೆ ಎಲ್ಲಾ ರೈತರ ಸಮಗ್ರ ವಿವರಗಳನ್ನು ಪಹಣಿ ನಂ, ಸರ್ವೆ ನಂ, ವಿಸ್ತೀರ್ಣ, ಬೆಳೆ ವಿವರ ಮತ್ತಿತರ ಅಂಶಗಳನ್ನು ಡಿಜಿಟಲೀಕರಣ ಮಾಡುವ ದೃಷ್ಠಿಯಿಂದ ಹೊಸದಾಗಿ ಪರಿಚಯಸಿರುವ ಪ್ರೋಟ್ಸ್‌ ಆ್ಯಪ್‌ನಲ್ಲಿ ರೈತರ ವಿವರ ಹಾಗೂ ಪ್ಲಾಟ್‌ಗಳನ್ನು ಅಪ್ಲೋಡ್‌ ಮಾಡಬೇಕು. ಆದರೆ ಜಿಲ್ಲೆಯಲ್ಲಿ ಮಾತ್ರ ಇನ್ನೂ 89,344 ಮಂದಿ ರೈತರು ಪ್ರೋಟ್ಸ್‌ ಆ್ಯಪ್‌ನಲ್ಲಿ ನೋಂದಣಿ ಆಗದೇ ಇರುವುದು ಕೃಷಿ ಇಲಾಖೆ ನೀಡಿರುವ ಅಂಕಿ, ಅಂಶಗಳಿಂದ ದೃಢಪಟ್ಟಿದೆ.

ಫ‌ಲಾನುಭವಿಗಳ ನೈಜತೆಯನ್ನು ಖಾತ್ರಿ ಪಡಿಸಿಕೊಳ್ಳುವುದರ ಜೊತೆಗೆ ಸೌಲಭ್ಯಗಳು ದುರ್ಬಳಕೆ ಆಗದಂತೆ ತಡೆಯುವ ನಿಟ್ಟಿನಲ್ಲಿ ಕೃಷಿ ಇಲಾಖೆ ಪ್ರೋಟ್ಸ್‌ ಆ್ಯಪ್‌ ಅಭಿವೃದ್ದಿಪಡಿಸಿದ್ದು, ರೈತರಿಗೆ ಬೆಳೆ ನಷ್ಟ ಪರಿಹಾರದಿಂದ ಹಿಡಿದು ಬೆಳೆ ವಿಮೆ ಪಾವತಿ, ಸರ್ಕಾರದಿಂದ ಏನೇ ಸೌಲಭ್ಯ ಪಡೆಯಲು ಪ್ರೋಟ್ಸ್‌ ಐಡಿನಲ್ಲಿ ರೈತರು ತಮ್ಮ ಜಮೀನು ವಿವರಗಳನ್ನು ದಾಖಲಿಸಿರಬೇಕು. ಆದರೆ ಜಿಲ್ಲೆಯಲ್ಲಿ ಪ್ರೋಟ್ಸ್‌ ಆ್ಯಪ್‌ ದಾಖಲಾತಿ ವಿಚಾರದಲ್ಲಿ ಅರ್ಧಕ್ಕರ್ಧ ರೈತರು ಹೆಸರು ನೋಂದಣಿ ಆಗದೇ ಇರುವುದು ಎದ್ದು ಕಾಣುತ್ತಿದ್ದು, ಅದೇ ರೀತಿ ಪ್ಲಾಟ್‌ಗಳು ಕೂಡ ನೋಂದಣಿಗೆ ಬಾಕಿ ಇವೆ.

ಗ್ರಾಮ ಒನ್‌, ರೈತ ಸಂಪರ್ಕ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ: ಸರ್ಕಾರದಿಂದ ಸೌಲಭ್ಯಗಳನ್ನು ಪಡೆಯಲು ರೈತರು ಪ್ರೋಟ್ಸ್‌ ಆ್ಯಪ್‌ನಲ್ಲಿ ನೋಂದಣಿ ಮಾಡಿಸಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಆಧಾರ್‌ , ಪಹಣಿ, ಬ್ಯಾಂಕ್‌ ಪಾಸ್‌ಬುಕ್‌, ಮೊಬೈಲ್‌ ಸಂಖ್ಯೆ ಕಡ್ಡಾಯವಾಗಿ ನಮೂದಗಿಸಬೇಕು. ಪ್ರೋಟ್ಸ್‌ ಆ್ಯಪ್‌ನಲ್ಲಿ ನೋಂದಣಿ ಆಗದ ರೈತರಿಗೆ ಸರ್ಕಾರದಿಂದ ಬೆಳೆ ನಷ್ಟ ಪರಿಹಾರ ಕೂಡ ಬರಲ್ಲ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.