ಹನಿ ನೀರಾವರಿ ಸಹಾಯಧನ ಬಿಡುಗಡೆ ಮಾಡಲು ಲಂಚ ಸ್ವೀಕರಿಸಿದ ರೇಷ್ಮೆ ನಿರೀಕ್ಷಕ ಎಸಿಬಿ ಬಲೆಗೆ
Team Udayavani, Oct 13, 2020, 8:19 PM IST
ಚಿಕ್ಕಬಳ್ಳಾಪುರ: ರೇಷ್ಮೆ ಹುಳು ಸಾಕಾಣಿಕೆ ಮನೆ ಮತ್ತು ಹನಿ ನೀರಾವರಿಯ ಸಹಾಯಧನ ಬಿಡುಗಡೆ ಮಾಡಲು 12,500 ರೂಗಳು ಲಂಚ ಸ್ವೀಕರಿಸಿದ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ನಿರೀಕ್ಷಕರೊಬ್ಬರು ಭ್ರಷ್ಟಚಾರ ನಿಗ್ರಹದಳ(ಎಸಿಬಿ) ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ರೇಷ್ಮೆ ನಿರೀಕ್ಷಕ ಪ್ರವೀಣ್ ಅವರು ಲಂಚ ಸ್ವೀಕರಿಸುವಾಗ ಎಸಿಬಿ ಪೋಲಿಸರು ಹಣದ ಸಮೇತ ಬಂಧಿಸಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ಮೇಲೂರಿನ ಶ್ರೀನಿವಾಸರೆಡ್ಡಿ ಅವರು ನೀಡಿದ ದೂರಿನ ಮೇರೆಗೆ ಭ್ರಷ್ಟಚಾರ ನಿಗ್ರಹದಳ(ಎಸಿಬಿ) ಡಿವೈಎಸ್ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ಸಿಪಿಐ ಬಿ.ವಿ.ಲಕ್ಷ್ಮೀದೇವಿ ಮತ್ತು ಸಿಬ್ಬಂದಿ ದಾಳಿ ನಡೆಸಿ ರೈತರಿಂದ ಲಂಚ ಸ್ವೀಕರಿಸುತ್ತಿದ್ದ ಮೇಲೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ರೇಷ್ಮೆ ನಿರೀಕ್ಷಕ ಪ್ರವೀಣ್ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನೆ ಹಿನ್ನೆಲೆ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರಿನ ಶ್ರೀನಿವಾಸರೆಡ್ಡಿ ಅವರು ತಮ್ಮ ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಿಸಲು ಸಹಾಯಧನವನ್ನು ಪಡೆಯಲು ಈಗಾಗಲೇ ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ರೇಷ್ಮೆ ನಿರೀಕ್ಷಕ ಪ್ರವೀಣ್ ಅವರಿಗೆ 20 ಸಾವಿರ ರೂಗಳನ್ನು ನೀಡಿದ್ದಾರೆ ಎನ್ನಲಾಗಿದೆ ಅದರ ಬಾಬತ್ತು 5 ಸಾವಿರ ರೂಗಳು ಮತ್ತು ಹನಿ ನೀರಾವರಿಯ 35 ಸಾವಿರ ರೂಗಳ ಸಹಾಯಧನ ಬಿಡುಗಡೆ ಮಾಡಲು 5 ಸಾವಿರ ಲಂಚ ನೀಡಲು ಅಧಿಕಾರಿ ನವೀನ್ ಬೇಡಿಕೆ ಇಟ್ಟಿದ್ದಾರೆ ಒಟ್ಟು 12500 ರೂಗಳನ್ನು ಪಾವತಿಸಲು ಪದೇ ಪದೇ ಒತ್ತಡ ಹಾಕುತ್ತಿದ್ದರಿಂದ ನೊಂದ ರೈತ ಭ್ರಷ್ಟಚಾರ ನಿಗ್ರಹದಳಕ್ಕೆ ದೂರು ದಾಖಲಿಸಿದ್ದಾರೆ.
ಭ್ರಷ್ಟಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಎಸಿಬಿ ಅಧಿಕಾರಿಗಳ ತಂಡ ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ರೇಷ್ಮೆ ನಿರೀಕ್ಷಕ ಪ್ರವೀಣ್ ಅವರನ್ನು ಲಂಚ ಸ್ವೀಕರಿಸುವಾಗ ದಾಳಿ ನಡೆಸಿ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ