ಚಿಂತಾಮಣಿ: ಚಿನ್ನದ ಸರ ಕಸಿಯಲು ಹೋಗಿ ಸಿಕ್ಕಿಬಿದ್ದ ಕಳ್ಳ
Team Udayavani, Sep 29, 2019, 9:16 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕದಿಯಲು ಹೋಗಿ ಕಳ್ಳನೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಧರ್ಮದೇಟು ತಿಂದ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಚಿಂತಾಮಣಿ ನಗರದ ಹೊರ ವಲಯದ ಕಾಗತಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಸದ್ಯ ಸರ ಕದಿಯಲು ಬಂದವ ಚಿಂತಾಮಣಿ ಗ್ರಾಮಾಂತರ ಪೊಲೀಸರ ಅತಿಥಿಯಾಗಿದ್ದಾನೆ.
ಕಾಗತಿ ಗ್ರಾಮದ ಸುನಂದಮ್ಮ ಎಂಬುವರು ಬೆಳ್ಳಗೆ ಕಸ ತೆಗೆದುಕೊಂಡು ತಿಪ್ಪೆಗೆ ಹಾಕಿ ಮನೆಗೆ ಹೋಗುತ್ತಿದ್ದ ವೇಳೆ ದ್ವಿಚಕ್ರವಾಹನದಲ್ಲಿ ಬಂದ ಬೆಂಗಳೂರು ಮೂಲದ ಕಳ್ಳ ಚಾಕು ತೊರಿಸಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಮಹಿಳೆ ಜೋರಾಗಿ ಕಿರುಚಾಡಿದ್ದು ಅದನ್ನು ಕೇಳಿಸಿಕೊಂಡ ಗ್ರಾಮಸ್ಥರು ಅಸಾಮಿಯನ್ನು ಹಿಡಿದು ಧರ್ಮದೇಟು ನೀಡಿ ಗ್ರಾಮಾಂತರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ