ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತ ಹಾಕಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರ ಕಿಡ್ನ್ಯಾಪ್
Team Udayavani, Nov 2, 2021, 3:12 PM IST
ಗುಡಿಬಂಡೆ: ಪಟ್ಟಣ ಪಂಚಾಯಿತಿ ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಯಲ್ಲಿ ಮತ ಹಾಕಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರಿಬ್ಬರನ್ನು ಕಿಡ್ನಾಪ್ ಮಾಡಿರುವ ಘಟನೆ ಗುಡಿಬಂಡೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಒಂದನೇ ವಾರ್ಡಿನ ರಾಜೇಶ್ ಮತ್ತು ಐದನೇ ವಾರ್ಡಿನ ಗಂಗರಾಜು ಕಿಡ್ನಾಪ್ ಆದ ಸದಸ್ಯರಾಗಿದ್ದು, ಪಟ್ಟಣ ಪಂಚಾಯಿತಿ ಅಧ್ಯಕ್ಷ ,ಉಪಾಧ್ಯಕ್ಷ ಚುನಾವಣೆಯಲ್ಲಿ ಮತ ಹಾಕಬೇಕಿದ್ದ ಇಬ್ಬರನ್ನು ಅಪಹರಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 7 ರ ಕಾಮತ್ ಹೋಟೇಲ್ ಬಳಿ ಕಿಡ್ನಾಪ್ ನಡೆದಿರುವುದಾಗಿ ಪಕ್ಷದ ಇತರರು ತಿಳಿಸಿದ್ದು, ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗುಡಿಬಂಡೆ ಪೊಲೀಸ್ ಠಾಣೆಯ ಮುಂದೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆಯು ನಡೆಯುತ್ತಿದ್ದು, ಸಚಿವ ಸುಧಾಕರ್ ಅವರ ಅಪ್ತರಿಂದ ಕಾಂಗ್ರೆಸ್ ಸದಸ್ಯರ ಕಿಡ್ನಾಪ್ ಮಾಡಲಾಗಿದೆ ಎಂದು ಶಾಸಕರು ಆರೋಪಿಸುತ್ತಿದ್ದಾರೆ.
ಪ್ರತಿಭಟನಾಕಾರರು ಕೂಡಲೇ ಕಾಂಗ್ರೆಸ್ ಸದಸ್ಯರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದು, ಗುಡಿಬಂಡೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!