ಸಾವಯವದಲ್ಲಿ ‘ಜಂಬುನೇರಳೆ’ ಸಾಧನೆ

ತೋಟಕಾರಿಕೆ ಬೆಳೆ ಬೆಳೆದಿರುವ ಕೃಷಿಕ ಜಗನ್ನಾಥ್‌ ಸಂತಸ

Team Udayavani, Jul 26, 2019, 10:50 AM IST

cb-tdy-2

ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಹೋಬಳಿಯ ಆರ್ಕುಂದ ಗ್ರಾಮದ ಶಿಕ್ಷಕ ಹಾಗೂ ಕೃಷಿಕ ಜಗನ್ನಾಥ್‌ ಯಶಸ್ವಿಯಾಗಿ ಬೆಳೆದಿರುವ ಜಂಬುನೇರಳೆ ಬೆಳೆ.

ಗೌರಿಬಿದನೂರು: ಗುರಿ ಸಾಧಿಸಬೇಕೆಂಬುವವರಿಗೆ ಛಲದೊಂದಿಗೆ ಕಾಯಕದ ಇಚ್ಚಾಶಕ್ತಿ ಇದ್ದರೆ ಏನನ್ನು ಬೇಕಾದರೂ ಮಾಡಬಹುದು ಎಂಬ ಸಿದ್ಧಾಂತದೊಂದಿಗೆ ನಿತ್ಯದ ವೃತ್ತಿ ಬದುಕಿನ ಜೊತೆಯಲ್ಲಿ ಕೃಷಿಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಸಾವಯವ ಪದ್ಧತಿಯಲ್ಲಿಯೇ ಭರ್ಜರಿಯಾದ ‘ಜಂಬು ನೇರಳೆ’ ಹಣ್ಣನ್ನು ಬೆಳೆದಿರುವ ಸಾಧನೆೆ ಜಗನ್ನಾಥ್‌ ರವರದ್ದು.

ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಆರ್ಕುಂದ ಗ್ರಾಮದ ಈ ಯುವಕ ವೃತ್ತಿಯಲ್ಲಿ ಶಿಕ್ಷಕರಾಗಿದ್ದರೂ ಕೂಡ ಬೇಸಾಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ಅಪಾರವಾದ ಆಸಕ್ತಿಯನ್ನು ಬೆಳೆಸಿಕೊಂಡಿದ್ದಾರೆ. ಮೂಲತಃ ರೈತ ಕುಟುಂಬದಿಂದ ಬೆಳೆದು ಬಂದು ಸ್ನಾತಕೋತ್ತರ ಪದವೀಧರರಾಗಿರುವ ಇವರು ನಿತ್ಯ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣದ ದಾಹವನ್ನು ನೀಗಿಸುವ ಪ್ರಯತ್ನ ಮಾಡುತ್ತಿದ್ದು, ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ತರಬೇತಿಯನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವೆಲ್ಲದರ ಜೊತೆಯಲ್ಲಿ ನಿತ್ಯದ ಬದುಕಿನಲ್ಲಿ ಕೃಷಿ ಚಟುವಟಿಕೆಗಳನ್ನು ಆಸಕ್ತಿ ಮತ್ತು ಸ್ಫೂರ್ತಿದಾಯಕವಾಗಿ ಮಾಡಬಲ್ಲ ಚಾಣಾಕ್ಷ ್ಯತನವನ್ನು ಹೊಂದಿರುವ ಇವರು ಕಳೆದ ನಾಲ್ಕೆ ೖದು ವರ್ಷಗಳ ಹಿಂದಿನಿಂದಲೂ ತನ್ನ ಜಮೀನಿನಲ್ಲಿ ಬೆಳೆಯುತ್ತಿದ್ದ ಬೆಳೆಗಳ ಜೊತೆಯಲ್ಲಿ ಇನ್ನಿತರ ಮಿಶ್ರ ಬೆಳೆಗಳನ್ನು ಬೆಳೆದರೆ ಆರ್ಥಿಕವಾಗಿ ಸಹಕಾರಿಯಾಗಬಲ್ಲದು ಮತ್ತು ಕೃಷಿ ಚಟುವಟಿಕೆಗಳಿಗೆ ಆಸರೆಯಾಗಬಹುದು ಎಂಬುದನ್ನು ಅರಿತು ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಉತ್ತಮ ತಳಿಯಾದ ‘ದೂಪ್‌ ದಾಲ್’ ಹೆಸರಿನ ಜಂಬು ನೇರಳೆ ಗಿಡಗಳನ್ನು ತಂದು ತನ್ನ ಕೃಷಿ ಭೂಮಿಯ ಬದುಗಳಲ್ಲಿ ನಾಟಿ ಮಾಡಿ ಸಾವಯವ ಗೊಬ್ಬರ ಮತ್ತು ಮಿತವಾದ ನೀರನ್ನು ನೀಡುತ್ತಾ ಬೆಳೆಸಿಕೊಂಡು ಬಂದಿದ್ದಾರೆ.

ಕೃಷಿ ಭೂಮಿಯ ಬದುಗಳಲ್ಲಿ ನೆಟ್ಟಿರುವ ನೇರಳೆ ಗಿಡಗಳು ಇಂದು ಬೆಳೆದು ಮರಗಳಾಗಿವೆ. ಕೃಷಿ ಭೂಮಿಯಲ್ಲಿನ ಮಣ್ಣಿನ ಫ‌ಲವತ್ತತೆಯು ಮಳೆ ನೀರಿಗೆ ಕೊಚ್ಚಿ ಹೋಗದಂತೆ ಸಂರಕ್ಷಣೆ ಮಾಡುತ್ತಿದ್ದು, ಮತ್ತೂಂದೆಡೆ ಉತ್ತಮ ಪರಿಸರವನ್ನು ನಿರ್ಮಾಣ ಮಾಡಲು ಸಹಕಾರಿಯಾಗಿದೆ.

ನೇರಳೆ ಹಣ್ಣಿಗೆ ಬಂಗಾರದ ಬೆಲೆ; ಜಂಬು ನೇರಳೆ ಹಣ್ಣುಗಳು ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸಂಜೀವಿನಿ ಇದ್ದ ಹಾಗೆ. ಅಲ್ಲದೆ ಇತರ ಸಾಕಷ್ಟು ಕಾಯಿಲೆಗಳಿಗೂ ಇದು ಸೂಕ್ತ ಮದ್ದಾಗಿದೆ. ಆದ್ದರಿಂದ ಋತು ಆರಂಭದಿಂದ ಅಂತ್ಯದವರೆಗೂ ಇದರ ಬೆಲೆ ಬಂಗಾರದಂತಿರುತ್ತದೆ. ಇದನ್ನು ಬೆಳೆದಂತಹ ರೈತರು ಮುಂಗಾರಿನ ಆರಂಭದಲ್ಲಿ ಆರ್ಥಿಕವಾಗಿ ಸಬಲರಾಗುತ್ತಾರೆ ಎಂಬುದು ವ್ಯಾಪಾರಸ್ಥರ ಲೆಕ್ಕಾಚಾರ.

ನಗರದಲ್ಲಿ ಜೋರು ವ್ಯಾಪಾರ; ಮುಂಗಾರು ಆರಂಭದ ಮೇ ಕೊನೆಯವಾರದಿಂದ ಹಿಡಿದು ಜುಲೈ ತಿಂಗಳು ಮುಗಿಯುವವ ರೆವಿಗೂ ಈ ನೇರಳೆ ಹಣ್ಣುಗಳು ಮರದಲ್ಲಿ ಮತ್ತು ಮಾರುಕಟ್ಟೆಯಲ್ಲಿ ಸಿಗುತ್ತವೆ. ವ್ಯಾಪಾರಸ್ಥರು ಗ್ರಾಮೀಣ ಭಾಗದಲ್ಲಿರುವ ಈ ಹಣ್ಣನ್ನು ಮರದ ರೂಪದಲ್ಲಿ ಕೊಂಡು ನಂತರ ಅವುಗಳನ್ನು ಜೋಪಾನವಾಗಿ ಬಿಡಿಸಿಕೊಂಡು ಬಂದು ನಗರದ ಜನನಿಬಿಡ ಪ್ರದೇಶದಲ್ಲಿ ಮಾರಾಟ ಮಾಡಲು ಮುಂದಾಗುತ್ತಾರೆ. ಆರಂಭದ ದಿನಗಳಲ್ಲಿ ಕೆ.ಜಿ ಜಂಬುನೇರಳೆ ಹಣ್ಣಿನ ಬೆಲೆ 180 ರಿಂದ 400 ರೂಗಳು ನಂತರದ ದಿನಗಳಲ್ಲಿ 140 ರಿಂದ 160 ರೂಗಳಿಗೆ ಇಳಿಮುಖವಾಗುತ್ತದೆ. ಆದರೂ ಇದರ ಬೇಡಿಕೆ ಮಾತ್ರ ಹೆಚ್ಚಾಗಿರುತ್ತದೆ.

ಜಂಬು ನೇರಳೆ ಗಿಡಗಳನ್ನು ಬೆಳೆಸಿ; ಸರ್ಕಾರ ಹಾಗೂ ಸಂಘಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಪ್ರದೇಶ, ಶಾಲಾ ಕಾಲೇಜುಗಳ ಆವರಣ, ರಸ್ತೆ ಬದಿಗಳಲ್ಲಿ ಹಾಗೂ ಇನ್ನಿತರ ಕಡೆಗಳಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಪೋಷಿಸುವಂತೆ ಪ್ರತೀ ಗ್ರಾಪಂ ಮಟ್ಟದಲ್ಲಿ ತಿಳಿಸಿದೆ. ಇದರ ಸಲುವಾಗಿ ಅಧಿಕಾರಿಗಳು ಮತ್ತು ಸ್ವಯಂಸೇವಕರು ಹೆಚ್ಚಿನ ಜಂಬು ನೇರಳೆ ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸಿದಲ್ಲಿ ಮುಂದಿನ ನಾಲ್ಕೆ ೖದು ವರ್ಷಗಳಲ್ಲಿ ಉತ್ತಮ ಫ‌ಸಲನ್ನು ಕಾಣುವುದಲ್ಲದೆ ಸಾಕಷ್ಟು ನೇರಳೆ ಹಣ್ಣುಗಳನ್ನು ಸ್ಥಳೀಯ ಸಮುದಾಯದಲ್ಲೆ ಪಡೆಯಬಹುದಾಗಿದೆ. ಅಲ್ಲದೆ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡಲು ಇದು ಸಹಕಾರಿಯಾಗುತ್ತದೆ ಎನ್ನುತ್ತಾರೆ ಜಗನ್ನಾಥ್‌. ಇದರ ಬಗ್ಗೆ ಹೆಚ್ವಿನ ಮಾಹಿತಿ ಪಡೆಯಲು 9986291418 ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.