ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ವಿರುದ್ಧ ಕ್ರಮ
Team Udayavani, Mar 28, 2021, 5:20 PM IST
ಚಿಕ್ಕಬಳ್ಳಾಪುರ: ತಂಬಾಕು ಸೇವನೆ ಆರೋಗ್ಯವನ್ನುಹದಗೆಡಿಸುವುದಲ್ಲದೇ, ಯುವಕರು ಮತ್ತುನೆರೆಹೊರೆಯವರ ಮೇಲೆ ಪರಿಣಾಮ ಬೀರುತ್ತದೆ.ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಸೇರಿದಂತೆ ತಂಬಾಕು ಸೇವನೆ ಮಾಡಿದವರ ವಿರುದ್ಧಕಾನೂನು ಕ್ರಮಕೈಗೊಂಡು, ದಂಡ ವಿಧಿಸುವಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿಅನುಷ್ಠಾನಗೊಳಿಸಬೇಕು ಎಂದು ಅಪರಜಿಲ್ಲಾಧಿಕಾರಿ ಎಚ್.ಅಮರೇಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಮತ್ತು ಕೊಟಾ³ ಕಾಯ್ದೆ ಅನುಷ್ಠಾನ ಕುರಿತು ಜಿಲ್ಲಾಮಟ್ಟದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣಕಾರ್ಯಕ್ರಮದಡಿ ಈಗಾಗಲೇ ಜಿಲ್ಲೆಯಲ್ಲಿ ಹಲವುಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ.
ತಂಬಾಕುಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವಪರಿಣಾಮಗಳ ಬಗ್ಗೆ ಸಾಮಾನ್ಯರು, ಯುವಕರಿಗೆಅರಿವಿನ ಅಗತ್ಯವಿದೆ. ತಂಬಾಕು ಸೇವನೆಯಲ್ಲಿತೊಡಗಿರುವವರನ್ನು ತಂಬಾಕಿನಿಂದಮುಕ್ತಗೊಳಿಸಬೇಕು. ತಂಬಾಕು ಉತ್ಪನ್ನಗಳಸೇವನೆಯಲ್ಲಿ ಹೊಸಬರು ಸೇರ್ಪಡೆಯಾಗದಂತೆಅರಿವು ಮೂಡಿಸಬೇಕು ಎಂದರು.
ಜಾಗೃತಿ ನಾಮಫಲಕ ಕಡ್ಡಾಯ: ತಾಲೂಕಿನಸಾರ್ವಜನಿಕ ಸ್ಥಳ, ಶಾಲಾ-ಕಾಲೇಜು,ಅಂಗಡಿಗಳು ಹಾಗೂ ಆಸ್ಪತ್ರೆ ಸುತ್ತಲೂ ಸ್ವತ್ಛತೆಕಾಪಾಡಿಕೊಳ್ಳುವುದರ ಜೊತೆಗೆ ತಂಬಾಕುಸೇವನೆಯಿಂದಾಗುವ ಪರಿಣಾಮಗಳು ಮತ್ತುಧೂಮಪಾನ, ತಂಬಾಕು ನಿಯಂತ್ರಣದ ಬಗ್ಗೆಜಾಗೃತಿ ಮೂಡಿಸಬೇಕು. ತಾಲೂಕುವಾರುಈಗಾಗಲೇ 743 ವಿರುದ್ಧ ದಂಡ ವಿಧಿಸಿದ್ದು, ಒಟ್ಟು51,950 ರೂ. ದಂಡ ಸಂಗ್ರಹಿಸಲಾಗಿದೆ.
18ವಷದೊಳಗಿನ ವಯಸ್ಕರಿಗೆ ತಂಬಾಕು,ಧೂಮಪಾನ ಮಾರಾಟ ಮಾಡದಂತೆಕ್ರಮವಹಿಸಿದ್ದು, ಶೇ.80.77ರಷ್ಟು ಪ್ರಗತಿ ಸಾಧಿಸಿದೆ.ಹೆಚ್ಚಿನ ರೀತಿಯಾಗಿ ತಂಬಾಕುಸೇವನೆಯಿಂದಾಗುವ ಪರಿಣಾಮಗಳ ಬಗ್ಗೆ ಜಾಗೃತಿನಾಮಫಲಕಗಳು ಕಡ್ಡಾಯ ಮಾಡುವ ಅಗತ್ಯವಿದೆಎಂದರು.ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕಡಾ.ರಮೇಶ್, ತಾಲೂಕು ಆರೋಗ್ಯ ಅಧಿಕಾರಿಮಂಜುಳಾ ಸೇರಿದಂತೆ ವಿವಿಧ ಇಲಾಖೆಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?