ಶಿಶು ಮರಣ ತಡೆಗೆ ಕ್ರಮ


Team Udayavani, Jun 4, 2019, 3:00 AM IST

shishu

ಚಿಕ್ಕಬಳ್ಳಾಪುರ: ತಾಯಿ ಮತ್ತು ಮಕ್ಕಳ ಆರೋಗ್ಯದ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಶಿಶು ಮರಣ ಪ್ರಮಾಣ ತಡೆಗಟ್ಟುವ ಸಲುವಾಗಿ 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಜೂನ್‌ 3 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ ಡಾ.ಬಿ.ಎಂ.ರವಿಶಂಕರ್‌ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಬಾಲ್ಯಾವಸ್ಥೆಯಲ್ಲಿ ತೀವ್ರ ಅತಿಸಾರಭೇದಿ ನಿಯಂತ್ರಣಾ ಪ್ರಾಕ್ಷಿಕ-2019 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅತಿಸಾರ ಭೇದಿ ಆಗುವ ಮಗುವಿಗೆ ಓಆರ್‌ಎಸ್‌ನ್ನು ಕಡ್ಡಾಯವಾಗಿ ನೀಡಬೇಕೆಂದರು.

ಮಕ್ಕಳಲ್ಲಿ ಅತಿಸಾರ ಭೇದಿಯಿಂದಾಗಿ ಸಾವು ನೋವು ಸಂಭವಿಸುವ ಸಾಧ್ಯತೆ ಇರುವುದರಿಂದ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸುವುದು ಅಲ್ಲದೇ ಇಂತಹ ಸಮಸ್ಯೆಗಳು ಕಂಡು ಬಂದಾಗ ಕೂಡಲೇ ವೈದ್ಯರ ಬಳಿ ತೋರಿಸಬೇಕು. ಇದರಿಂದ ಶಿಶು ಮರಣ ಪ್ರಮಾಣ ಕಡಿಮೆ ಮಾಡಬಹುದು.

ಕೈಜೋಡಿಸಿ: ಒಂದು ವೇಳೆ ಓಆರ್‌ಎಸ್‌ ಪೌಡರ್‌ ಇಲ್ಲವಾದಲ್ಲಿ ಅದನ್ನು ಮನೆಯಲ್ಲಿಯೇ ಸಿದ್ಧಪಡಿಸಬಹುದಾಗಿದೆ. ಅತಿಸಾರ ಭೇದಿಯಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಮಕ್ಕಳು ಸಾವಿಗೀಡಾಗುತ್ತಾರೆ. ಇದನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಿಡಿದು ಜಿಲ್ಲಾಸ್ಪತ್ರೆಗಳಲ್ಲಿ ಓಆರ್‌ಎಸ್‌ ಪೌಡರ್‌ನ್ನು ವಿತರಿಸಲಾಗುತ್ತಿದೆ. ಜೂ.17ರವರೆಗೂ ಈ ಕಾರ್ಯಕ್ರಮ ನಡೆಯಲಿದೆ.

ಯಾರು ಈ ಬಗ್ಗೆ ನಿರ್ಲಕ್ಷ್ಯ ತೋರದೇ ಪಾಕ್ಷಿಕ ಯಶಸ್ವಿಗೆ ಪೋಷಕರು ಕೈ ಜೋಡಿಸಬೇಕೆಂದರು. ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ರವಿಕುಮಾರ್‌ ಮಾತನಾಡಿ, ಓಆರ್‌ಎಸ್‌ ಮತ್ತು ಝಿಂಕ್‌ ಅತಿಸಾರ ಭೇದಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದ್ದು ಈ ಬಗ್ಗೆ ಮೊದಲು ತಾಯಿ ಮಗುವಿನಲ್ಲಿ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಶುಚಿತ್ವ ಕಾಪಾಡಿ: ಓಆರ್‌ಎಸ್‌ ಮತ್ತು ಝಿಂಕ್‌ ಮಾತ್ರೆಗಳನ್ನು ಎರಡು ತಿಂಗಳಿಗಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅತಿಸಾರ ಭೇದಿಯಾದ ಮಕ್ಕಳಿಗೆ ಪ್ರತಿ ಬಾರಿ 5 ಚಮಚದ ಓಆರ್‌ಎಸ್‌ ದ್ರವಣ ಕುಡಿಸಬೇಕು. 14 ದಿನಗಳು ಪ್ರತಿ ದಿನಕ್ಕೆ ಒಂದರಂತೆ ಝಿಂಕ್‌ ಮಾತ್ರೆಯನ್ನು ಕುಡಿಯುವ ನೀರು ಅಥವಾ ತಾಯಿಯ ಎದೆ ಹಾಲಿನೊಂದಿಗೆ ಬೆರೆಸಿ ವಯಸ್ಸಿಗೆ ಅನುಗುಣವಾಗಿ ನೀಡಬೇಕೆಂದರು.

ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಸಹ ಕೈ ಜೋಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ತಾಯಂದಿರು ಮನೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದರು.

ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ.ರಮೇಶ್‌, ತಾಲೂಕು ವೈದ್ಯಾಧಿಕಾರಿ ಡಾ. ಮುನಿಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣಾಧಿಕಾರಿ ಮಹೇಶ್‌ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಅತಿಸಾರ ಭೇದಿಯಾಗುವುದರಿಂದ ಮಕ್ಕಳಲ್ಲಿ ಶಕ್ತಿ ಕುಂದುತ್ತದೆ. ಮಕ್ಕಳು ಮರಣಕ್ಕೆ ಒಳಗಾಗುವ ಸಾಧ್ಯ ಇರುವುದರಿಂದ ಮಗುವಿಗೆ ಓಆರ್‌ಎಸ್‌ನ್ನು ಅತಿಸಾರ ಭೇದಿ ನಿಲ್ಲುವವರೆಗೂ ನೀಡುವ ಮೂಲಕ ಮರು ಶಕ್ತಿಯನ್ನು ಮಗುವಿನಲ್ಲಿ ಓಆರ್‌ಎಸ್‌ ತುಂಬುತ್ತದೆ. ತಾಯಿ ಮಗುವಿಗೆ ಆಹಾರವನ್ನು ತಿನಿಸುವಾಗ ಕೈಗಳನ್ನು ಸಾಬೂನಿನಿಂದ ತೊಳೆದುಕೊಂಡು ಆಹಾರ ನೀಡಬೇಕು.
-ಡಾ.ಪ್ರಕಾಶ್‌, ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞ

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.