ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಹಂಪಸಂದ್ರದಲ್ಲಿ ಗ್ರಾಮ ಪ್ರದಕ್ಷಣೆ

Team Udayavani, Mar 21, 2021, 7:05 PM IST

hk

ಗುಡಿಬಂಡೆ: ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಮರೇಶ್‌ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಂಪಸಂದ್ರ ಗ್ರಾಮದ ಬೀದಿ ಬೀದಿಗಳಲ್ಲಿ ಪ್ರದಕ್ಷಣೆ ಮಾಡಿ ಸಾರ್ವಜನಿಕರ ಜೊತೆ ಸಂವಾದ ನಡೆಸಿದರು.

ಪ್ರದಕ್ಷಣೆ ವೇಳೆ ಗ್ರಾಮದ ಚರಂಡಿ, ರಸ್ತೆ, ದೇವಾಲಯ, ಅಂಗನವಾಡಿ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರ, ಮೊದಲಾದ ಸ್ಥಳಗಳಿಗೆ ಭೇಟಿ ನೀಡಿ, ಅಲ್ಲಿ ಚರಂಡಿಗಳನ್ನು ನೋಡಿ ಸ್ವತ್ಛ ಮಾಡುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಹಂಪಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮದ ಉದ್ಘಾಟನಾ ಭಾಷಣದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್‌ ಮಾತನಾಡಿ, ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದು ಎರಡನೇ ಕಾರ್ಯಕ್ರಮವಾಗಿದೆ ಎಂದರು.

ಲಸಿಕೆ ಹಾಕಿಸಿಕೊಳ್ಳಿ: 45 ವರ್ಷ ಮೇಲ್ಪಟ್ಟವರು ಕೊರೊನಾ ಸೋಂಕಿನಿಂದ ಪಾರಾಗಲು ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದರು. ಶಾಸಕ ಎಸ್‌.ಎನ್‌ ಸುಬ್ಟಾರೆಡ್ಡಿ ಮಾತನಾಡಿ, ಗುಡಿ ಬಂಡೆ ತಾಲೂಕು ಅತಿ ಚಿಕ್ಕದಾಗಿದ್ದರು, ಸಕಾಲ, ಇ-ಕ್ಷಣ ಯೋಜನೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದು, ಎಸ್‌ಎಸ್‌ ಎಲ್‌ಸಿ ಫ‌ಲಿತಾಂಶದಲ್ಲೂ ಸಹ ಪ್ರಥಮ ಸ್ಥಾನ ಗಳಿಸಿ ಹೆಸರು ಮಾಡಿದ್ದು, ಇಂತಹ ತಾಲೂಕಿನಲ್ಲಿ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ನಮ್ಮ ಜನರ ಸೌಭಾಗ್ಯ. ಗ್ರಾಮ ವಾಸ್ತವ್ಯದಿಂದ ಜನರ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲಕರವಾಗಿದೆ ಎಂದರು.

ಹೊಗೆ ಮುಕ್ತ ತಾಲೂಕು: ತಾಲೂಕಿನಲ್ಲಿ 115 ಹಳ್ಳಿಗಳಿದ್ದು, 85 ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭವಾಗಿದ್ದು, ಇನ್ನುಳಿದ 30 ಹಳ್ಳಿಗಳಲ್ಲಿ ಶೀಘ್ರದಲ್ಲಿ ಆರ್‌ಒ ಪ್ಲಾಂಟ್‌ಗಳನ್ನು ಹಾಕಿಸಲಾಗು ವುದು. ಈಗಾಗಲೇ ತಾಲೂಕಿನ ಎಲ್ಲಾ ಮನೆಗಳಲ್ಲಿ ಗ್ಯಾಸ್‌ ಸೌಲಭ್ಯವಿದ್ದು, ಉಳಿದ ಮನೆಗಳಿಗೂ ಶೀಘ್ರದಲ್ಲೇ ಉಚಿತವಾಗಿ ಗ್ಯಾಸ್‌ ಸಂಪರ್ಕ ಹಾಕಿಸಿಕೊಟ್ಟು, ರಾಜ್ಯದಲ್ಲೇ ಪ್ರಥಮ ಹೊಗೆ ಮುಕ್ತ ತಾಲೂಕು ಘೋಷಣೆ ಮಾಡಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಗರ್ಭಿಣಿ ಸ್ತ್ರೀಯರಿಗೆ ಜಿ.ಪಂ. ಸದಸ್ಯೆ, ಜಿಲ್ಲಾಆರೋಗ್ಯಾಧಿಕಾರಿ, ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷೆ ಸೇರಿ ಸೀಮಂತ ಕಾರ್ಯಕ್ರಮ ನಡೆಸಿಕೊಟ್ಟರು, ನಂತರ ಸರ್ಕಾರ ವಿವಿಧ ಯೋಜನೆ ಗಳಾದ ಭಾಗ್ಯಲಕ್ಷ್ಮಿà ಬಾಂಡ್‌, ಪಿಂಚಣಿ ಆದೇಶ ಪ್ರತಿ, ಅಂಗವಿಕಲರ ಸಾಧನಾ ಸಲಕರಣೆ, ಮುಂತಾದ ಸೌಲಭ್ಯಗಳನ್ನು ಸ್ಥಳದಲ್ಲೇ ಒದಗಿಸಿಕೊಟ್ಟರು. ಜಿಪಂ ಸದಸ್ಯರಾದ ಗಾಯತ್ರಿ ನಂಜುಂಡಪ್ಪ, ಉಪ ವಿಭಾಗಾಧಿ ಕಾರಿ ರಘುನಂದನ್‌, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಇಂದಿರಾ ಕಬಾಡೆ, ತಹಶೀಲ್ದಾರ್‌ ಸಿಬ್‌Yತುಲ್ಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.