ಸರ್ಕಾರ ಸೌಲಭ್ಯ ಸದ್ಬಳಕೆಗೆ ಸಲಹೆ
Team Udayavani, Jul 27, 2020, 9:13 AM IST
ಚಿಕ್ಕಬಳ್ಳಾಪುರ: ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನ ಪಡೆದು ವಿದ್ಯಾವಂತರಾಗಿ ಶಾಲೆಗೆ, ಪೋಷಕರಿಗೆ, ಶಿಕ್ಷಕರಿಗೆ ಕೀರ್ತಿ ತರಬೇಕೆಂದು ಸಮಾಜ ಸೇವಕ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯ ಬ್ಯಾಂಕ್ ಮಂಜುನಾಥ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಗೌರಿಬಿದನೂರು ಪಟ್ಟಣದಲ್ಲಿ ಸರ್ಕಾರದಿಂದ ನೀಡಿರುವ ಪಠ್ಯ ಪುಸ್ತಕಗಳನ್ನು ನಗರದ ಎಸ್ಎಸ್ಇಎ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಅವರು, ಸರ್ಕಾರವು ಸರ್ಕಾರಿ, ಅನುದಾನಿತ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯಸ್ಸಿಗಾಗಿ ಪ್ರತಿ ವರ್ಷ ಕೋಟ್ಯಂತರ ರೂ. ವೆಚ್ಚದಲ್ಲಿ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ಸರ್ಕಾರವು ನೀಡುವ ಸೌಲಭ್ಯಗಳಲ್ಲಿ ಪಠ್ಯ ಪುಸ್ತಕ ವಿತರಣೆಯು ಬಹಳ ಮುಖ್ಯವಾಗಿದೆ. ಸರ್ಕಾರವು ನೀಡುವ ಸೌಲಭ್ಯ ಪಡೆದು ಜ್ಞಾನವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಿ ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಹೇಳಿದರು. ಉಪ ಪ್ರಾಂಶುಪಾಲ ಆಂಜನೇಯ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಬೋಧನೆ ಮಾಡಲು ಪ್ರಜ್ಞಾವಂತ ಶಿಕ್ಷಕರನ್ನು ಆಯ್ಕೆ ಮಾಡುತ್ತಿದೆ. ಕೆಳ ಹಂತದಲ್ಲಿರುವ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಶಿಕ್ಷಕರು ಶ್ರಮಿಸುತ್ತಿದ್ದಾರೆ. ಪೋಷಕರು ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡಾಗ ಮಾತ್ರ ಸರ್ಕಾರದ ಯೋಜನೆಗಳು ಫಲಪ್ರದವಾಗುತ್ತದೆ ಎಂದರು.
ಶಿಕ್ಷಕರಾದ ಎನ್.ಕೆ.ಕೆಂಚವೀರ್, ಲಕ್ಷ್ಮೀನರಸಪ್ಪ, ಸಂಜೀವರಾಯಪ್ಪ, ಜಿ.ಎನ್. ಸನತ್ಕುಮಾರ್, ಶಾಲಾ ಸಿಬ್ಬಂದಿಗಳಾದ ಅನಿತಮ್ಮ, ಪದ್ಮಾವತಮ್ಮ, ಲಕ್ಷ್ಮಯ್ಯ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ