ಉದ್ಯೋಗ ಖಾತ್ರಿ ಸದ್ಬಳಕೆಗೆ ಸಲಹೆ
Team Udayavani, Oct 4, 2020, 2:13 PM IST
ಪಾತಪಾಳ್ಯ: ರೈತಾಪಿ ವರ್ಗದವರಿಗೆ, ಕೂಲಿ ಕಾರ್ಮಿಕರಿಗೆ ವರವಾಗಿರುವ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕೆಂದು ಇ.ಒ. ಹೆಚ್.ಎನ್.ಮಂಜುನಾಥಸ್ವಾಮಿ ತಿಳಿಸಿದರು.
ನಲ್ಲಚೆರವು ಪ್ರಮುಖ ರಸ್ತೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರು ನಿರ್ಮಿಸುತ್ತಿದ್ದ ರಿವೀಟ್ಮೆಂಟ್ ಕಾಮಗಾರಿಯನ್ನು ಶನಿವಾರ ಪರಿಶೀಲಿಸಿ ಮಾತನಾಡಿದ ಅವರು, ಗ್ರಾಮೀಣ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಉದ್ಯೋಗ ಖಾತ್ರಿ ಯೋಜನೆಯು ಕೂಲಿ ಕಾರ್ಮಿಕರಿಗೆ ಹಾಗೂ ರೈತರಿಗೆ ವರದಾನವಾಗಿದೆ.
ಕಾಮಗಾರಿ ಮಾಡುವವರು ಬ್ಯಾಂಕ್ ಖಾತೆ, ಜಾಬ್ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಅಪ್ರಾಪ್ತರು ಕೂಲಿ ಮಾಡುವುದು ಅಪರಾಧ. ಖಾತ್ರಿ ಯೋಜನೆಯಲ್ಲಿ ತೋಟಗಾರಿಕೆ, ಪಶುಪಾಲನೆ, ಕೃಷಿ, ರೇಷ್ಮೆ, ಮೀನುಗಾರಿಕೆ, ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಮಾಡಬಹುದು. ಕೆರೆ ಹೂಳೆತ್ತುವುದು, ಗೋಕುಂಟೆ, ಹೊಸಕೆರೆ ನಿರ್ಮಾಣ, ನೆರೆಹಾವಳಿ ತಡೆಗಟ್ಟುವ ಕಾಮಗಾರಿಗಳು, ಮಣ್ಣುಗಾಲುವೆ ನಿರ್ಮಾಣ, ಗ್ರಾಮೀಣ ಗೋದಾಮ, ಸ್ಮಶಾನ ಅಭಿವೃದ್ಧಿ ಸರ್ಕಾರಿ ಶಾಲೆಗಳ ಆಟದ ಮೈದಾನ ಹಾಗೂ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ, ಸೋಪ್ಫಿಟ್, ಪೌಷ್ಟಿಕ ಕೈತೋಟ, ಅಣಬೆ ಬೇಸಾಯ ಮಾಡಬಹುದು ಎಂದು ತಿಳಿಸಿದರು.
ತಾಲೂಕು ಸಾಕ್ಷರತಾ ಸಂಯೋಜಕ ಎನ್. ಶಿವಪ್ಪ, ಚೇಳೂರು ಗ್ರಾಪಂ ಪಿಡಿಒ ಕೆ.ಸುರೇಶ್, ಪ್ರಸನ್ನ ಹಾಗೂ ಕೂಲಿ ಕಾರ್ಮಿಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್