ಗ್ರಾಮಾಭಿವೃದ್ಧಿಗೆ ಶ್ರಮಿಸಲು ಸಲಹೆ
Team Udayavani, Feb 24, 2021, 1:41 PM IST
ಚಿಂತಾಮಣಿ: ಗ್ರಾಮೀಣ ಜನರ ಅಭಿವೃದ್ಧಿಗಾಗಿ ಸ್ಥಳೀಯಸರ್ಕಾರಗಳು ಸಮರ್ಪಕವಾಗಿ ಕೆಲಸ ಮಾಡುವ ಉದ್ದೇಶದಿಂದ ನೂತನ ಗ್ರಾಪಂ ಸದಸ್ಯರಿಗೆ ತರಬೇತಿ ನೀಡಲಾಗುತ್ತಿದ್ದು, ಅವರನ್ನು ಜನಸೇವೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ತಿಳಿಸಿದರು.
ನಗರದ ತಾಪಂ ಕಚೇರಿಯಲ್ಲಿ ನೂತನ ಗ್ರಾಪಂಸದಸ್ಯರಿಗೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು, ಗ್ರಾಪಂನಲ್ಲಿ ಗ್ರಾಮದ ಮೂಲ ಸೌಲಭ್ಯಗಳನ್ನು ಒದಗಿಸುವುದು ಮಾತ್ರವಲ್ಲ. ಅದರೊಂದಿಗೆ ಶೇ.100 ಲಸಿಕೆ ಸಾಧಿಸುವುದು, ಶೇ.100 ಶಾಲಾ ದಾಖಲಾತಿಸಾಧಿಸುವುದು, ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವಂತಹ ಕೆಲಸದೊಂದಿಗೆ ಬಾಲ್ಯವಿವಾಹ ಪದ್ಧತಿ, ಬಾಲಕಾರ್ಮಿಕ ಪದ್ಧತಿ ನಿಲ್ಲಿಸುವುದು ಸೇರಿದಂತೆ ಹಲವು ಕಾರ್ಯ ಕ್ರಮಗಳನ್ನು ಮಾಡಬಹುದಾಗಿದೆ ಎಂದು ತಿಳಿಸಿದರು.
ಕಳೆದ ವರ್ಷದಲ್ಲಿ ನಾವು ಗ್ರಾಪಂಗಳಲ್ಲಿ ಶೇ.96 ರಷ್ಟು ತೆರಿಗೆ ವಸೂಲಿ ಸಾಧನೆ ಮಾಡಿದ್ದೇವೆ. ಇದೇ ಸಾಧನೆ ಮುಂದಿನದಿನಗಳಲ್ಲಿ ನಿಮ್ಮೆಲ್ಲರ ಸಹಕಾರದಿಂದ ಶೇ.100 ರೊಂದಿಗೆ ಮುನ್ನಡೆಸಬೇಕು. ಗ್ರಾಮೀಣ ಭಾಗದಲ್ಲಿ ವಿವಿಧ ಬಗೆಯಸಮಸ್ಯೆಗಳನ್ನು ಅನುಭವಿಸುತ್ತಿರುವವರು ಮತ್ತು ಉತ್ತಮಸೇವೆ ಒದಗಿಸುತ್ತೀರಾ ಎಂಬ ನಂಬಿಕೆಯಿಂದ ಜನರು ನಿಮ್ಮನ್ನು ಸದಸ್ಯರನ್ನಾಗಿ ಆಯ್ಕೆಟ್ಟುಕೊಂಡು ಕೆಲಸ ಮಾಡಬೇಕೆಂದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ನೋಮೇಶ್ಕುಮಾರ್, ತಾಪಂ ಇಒ ಜಿ.ಆರ್.ಮಂಜುನಾಥ್, ತರಬೇತುದಾರರಾದ ಶಶಿರಾಜ್, ಆರ್.ಡಿ.ಮಂಜುನಾಥ್, ಪಿಡಿಒ ಶ್ರೀ ನಾಥ್ ಸೇರಿದಂತೆ ಗ್ರಾಪಂ ಸದಸ್ಯರು, ಅಧಿಕಾರಿಗಳು, ಇದ್ದರು.
ಕಿರುಕುಳ: ದಂಪತಿ ಧರಣಿ :
ಗೌರಿಬಿದನೂರು: ತಾಲೂಕಿನ ಗಂಗಸಂದ್ರದಲ್ಲಿ ಗ್ರಾಮಸ್ಥರ ಕಿರುಕುಳ ಖಂಡಿಸಿ ಗಂಡ-ಹೆಂಡತಿ ಪಂಚಾಯ್ತಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಎನ್. ಹನುಮಂತನಾಯಕ್ ಮತ್ತು ಪತ್ನಿ ಮಾತನಾಡಿ, ನಮ್ಮ ಕುಟುಂಬದ ಮೇಲೆ ವಿನಾಃಕಾರಣ ಅಕ್ಕಪಕ್ಕದವರು ಕಿರುಕುಳನೀಡುತ್ತಿದ್ದಾರೆ. ಮನೆ ಸುತ್ತಮುತ್ತ ಗಲೀಜು ಹಾಕುವುದು, ಕಸಕಡ್ಡಿ ಹಾಕುವುದರಿಂದ ಸೊಳ್ಳೆಗಳ ಕಾಟದಿಂದ ನಾವು ರಾತ್ರಿಇಡೀ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಇಲ್ಲಿನ ಗ್ರಾಪಂ ಸದಸ್ಯರ ಕುಮ್ಮಕ್ಕು ಸೇರಿದಂತೆ ಹಲವರು ನಮ್ಮನ್ನು ಊರು ಬಿಡಿಸಲು ಮತ್ತು ಆಸ್ತಿ ಕಬಳಿಸಲು ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಹಿಂದೆಯೂ ಸಹ ದಶಕದ ಹಿಂದೆ ಗ್ರಾಮಸ್ಥರ ಕಿರುಕುಳ ಸಹಿಲು ಆಗದೆ ನಗರದಲ್ಲಿ ವಾಸ ಮಾಡಿ ಕಷ್ಟ ಅನುಭಸಿದ್ದವೇವೆ. ಪರಿಶಿಷ್ಟಪಂಗಡ ಎಂಬ ಕಾರಣಕ್ಕಾಗಿ ತೊಂದರೆ ನೀಡುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗೆ ದೂರು ನೀಡಿದ್ದು, ಅವರು ಸಹಾಯ ನೀಡುವುದಾಗಿ ಭರವಸೆ ನೀಡಿದ ನಂತರ ಮತ್ತೆ ನಮ್ಮ ಸ್ವಗ್ರಾಮ ಸಾಗಾನಹಳ್ಳಿಗೆ ಬಂದು ನೆಲೆಸಿದ್ದೇವೆ. ಇದೀಗ ಮತ್ತೆ ಕಿರುಕುಳ ಶುರುವಾಗಿದೆ ಎಂದು ಅಳಲು ತೋಡಿಕೊಂಡರು. ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಸ್ಥಳಕ್ಕೆ ಆಗಮಿಸಿ ಹನುಮಂತನಾಯಕ್ರ ಸಮಸ್ಯೆಆಲಿಸಿ ನಿಮ್ಮ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದ ನಂತರ ಧರಣಿ ವಾಪಸ್ ಪಡೆದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ