ಜಿಲ್ಲಾದ್ಯಾಂತ ಗರಿಗೆದರಿತು ಕೃಷಿ ಚಟುವಟಿಕ
Team Udayavani, May 17, 2018, 12:52 PM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಾಂತ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ ಕೀಯ ಪಕ್ಷಗಳ ಅಭ್ಯರ್ಥಿಗಳ ಪರ
ಚುನಾವಣಾ ಪ್ರಚಾರದ ಭರಾಟೆಯಲ್ಲಿ ಹಲವು ತಿಂಗಳಿಂದ ತೊಡಗಿದ್ದ ಜಿಲ್ಲೆಯ ರೈತಾಪಿ ಜನ ಹಾಗೂ ಕೂಲಿ ಕಾರ್ಮಿಕರು ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಚುನಾವಣೆಯ ಗುಂಗಿನಿಂದ ನಿದಾನಕ್ಕೆ ಹೊರ ಬರುತ್ತಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
ಜಿಲ್ಲಾದ್ಯಾಂತ ಪ್ರಸ್ತಕ ವರ್ಷದ ಕೃಷಿ ಚಟುವಟಿಕೆಗಳು ಬಿರುಸುನಿಂದ ಆರಂಭ ಗೊಂಡಿದ್ದು ಕಳೆದ ಭಾನುವಾರ ಜಿಲ್ಲೆಯಲ್ಲಿ ಬಿದ್ದ ಮಳೆಗೆ ಕೃಷಿ ಭೂಮಿ ಹದ ಗೊಳಿಸುವ ಮೊದಲ ಹಂತದ ಕಾರ್ಯಕ್ಕೆ ರೈತರು ಮುಂದಾಗಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಚುನಾವಣಾ ಕಾರ್ಯಗಳಿಂದ ಮುಕ್ತರಾಗಿ ಕೃಷಿ ಚಟುವಟಿಕೆಗಳತ್ತ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಹೊರ ಬಿದಿದ್ದೇ ತಡೆ ಜಿಲ್ಲೆಯ ರೈತಾಪಿ ಕೂಲಿ ಕಾರ್ಮಿಕರು, ವಿಶೇಷವಾಗಿ ನಗರ, ಪಟ್ಟಣಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಕೊಳ್ಳುವ ಕಾರ್ಮಿಕರು ಕೆಲಸ ಕಾರ್ಯಗಳಿಗೆ ಬ್ರೇಕ್ ಹಾಕಿ ರಾಜಕೀಯ ಪಕ್ಷಗಳು ಕೈ ತುಂಬ ನೀಡುತ್ತಿದ್ದ ಹಣ ಪಡೆದು ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಇದರಿಂದ ನಗರ ಪಟ್ಟಣದಲ್ಲಿ ಕಾರ್ಮಿಕರ ಇಲ್ಲದೇ ಕಟ್ಟಡ ನಿರ್ಮಾಣ ಕಾರ್ಯ ಸಂಪೂರ್ಣ ಸ್ಥಗಿತ ಗೊಂಡರೆ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕಾರ್ಯಗಳಿಗೂ ಕೂಲಿ ಕಾರ್ಮಿಕರ ಕೊರತೆ ಎದ್ದು ಕಾಣುತ್ತಿತ್ತು. ಈಗ ಯಥಾಸ್ಥಿತಿ ಕಡೆಗೆ ತಿರುಗುತ್ತಿದೆ.
ಮೋಡಕವಿದ ವಾತಾವರಣ ಸದ್ಯ ಜಿಲ್ಲೆಯಲ್ಲಿ ಭಾನುವಾರ ಮಳೆಯಾಗಿದ್ದು ಬಿಟ್ಟರೆ ಇದು ವರೆಗೂ ಮಳೆಯ ದರ್ಶನ
ವಾಗಿಲ್ಲ. ಆದರೆ ಕಳೆದ ಎರಡು, 3 ದಿನಗಳಿಂದ ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಇದ್ದು ಬಿಸಿಲಿನ ಅರ್ಭಟ ತಗ್ಗಿ ಮಳೆ ಬರುವ ಮನ್ಸೂಚನೆ ಇದೆ. ಜೂನ್, ಜುಲೈ ವೇಳೆಗೆ ವಾಡಿಕೆಯಂತೆ ಜಿಲ್ಲಾ ದ್ಯಂತ ಬಿತ್ತನೆ ಕಾರ್ಯ ಮುಗಿಯಲಿದ್ದು, ಈಗಾಗಲೇ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡುವ ಮೂಲಕ ಬಿತ್ತನೆ ಕಾರ್ಯಕ್ಕೆ ಸಜಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
Chikballapur; ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ