1ಕೋಟಿ ಲಕ್ಷ ಸಸಿ ನೆಡುವ ಗುರಿ


Team Udayavani, Apr 27, 2019, 5:00 AM IST

1laksha

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ತಾಂಡವಾಡುತ್ತಿರುವ ತೀವ್ರತರವಾದ ಬರಸ್ಥಿತಿಯನ್ನು ನಿವಾರಿಸಲು ಜಿಲ್ಲಾದ್ಯಂತ ಹಸಿರೀಕರಣ ಹೆಚ್ಚು ಮಾಡಲು ಮೇ 1ಕ್ಕೆ ಸಸಿ ನೆಟ್ಟು ಬರ ಅಟ್ಟು ಆಂದೋಲನಕ್ಕೆ ಚಾಲನೆ ನೀಡಲಾಗುವುದು. ಈ ವರ್ಷದ ಮುಂಗಾರಿನಲ್ಲಿ ಒಟ್ಟು 1 ಕೋಟಿ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ರೋಟರಿ ಕೋಟಿ-ನಾಟಿ ಯೋಜನೆಯ ಅಧ್ಯಕ್ಷ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಕೆ.ಅಮರನಾರಾಯಣ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೋಟಿ-ನಾಟಿ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಅರಿವು ಮೂಡಿಸುವ ಕರಪತ್ರ ಹಾಗೂ ಕಿರು ಹೊತ್ತಿಗೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅಂತರ್ಜಲ ಕುಸಿತ: ಜಿಲ್ಲಾದ್ಯಂತ ಸತತ ಬರಗಾಲದ ಪರಿಣಾಮ ಪರಿಸರ ಅಸಮತೋಲನದಿಂದ ಕೂಡಿದ್ದು, ಅರಣ್ಯ ಪ್ರದೇಶ ಶೇ.9 ರಷ್ಟು ಮಾತ್ರ ಇದೆ. ಪ್ರತಿಕೂಲ ಹವಾಮಾನದಿಂದಾಗಿ ಬರದ ಛಾಯೆ ಪ್ರತಿ ವರ್ಷವೂ ಆವರಿಸುತ್ತಿದೆ. ಹವಾಮಾನ ವೈಪರೀತ್ಯಗಳಿಂದಾಗಿ ಮಳೆ ಪ್ರಮಾಣ ದಿನೇ ದಿನೆ ಜಿಲ್ಲೆಯಲ್ಲಿ ಕಡಿಮೆಯಾಗುತ್ತದೆ. ಅಂತರ್ಜಲದಲ್ಲಿ ತೀವ್ರ ಕುಸಿತವುಂಟಾಗಿದೆ ಎಂದರು.

ಭಾಗವಹಿಸುವಿಕೆ ಮುಖ್ಯ: ಕೃಷಿ ಹಾಗೂ ಕುಡಿಯಲು ನೀರಾವರಿ ಸಮಸ್ಯೆ ತಾರಕಕ್ಕೇರಿದೆ. ಇದಕ್ಕೆಲ್ಲ ಪರಿಹಾರ ಸಿಗಬೇಕಾದರೆ ವ್ಯಾಪಕವಾಗಿ ಹಸಿರೀಕರಣ ಮಾಡುವುದೊಂದೇ ದಾರಿ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ರೋಟಿ ಕೋಟಿ-ನಾಟಿ ಕಾರ್ಯಕ್ರಮದ ಮೂಲಕ ಶೇ.33 ರಷ್ಟು ಹಸಿರು ಕವಚ ನಿರ್ಮಾಣ ಮಾಡಲು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರೈತರ ಮುಖಾಂತರ ಕನಿಷ್ಠ ಒಂದು ಕೋಟಿ ಸಸಿಗಳನ್ನು ನೆಡಿಸಲು ರೋಟರಿ ಬೆಂಗಳೂರು ಆರ್ಚಡ್ಸ್‌ ಮತ್ತು ಜಿಲ್ಲೆಯ ಜಿಪಂ, ತಾಪಂ ಹಾಗೂ ಗ್ರಾಪಂಗಳು ಸಕ್ರಿಯವಾಗಿ ಭಾಗವಹಿಸುವಿಕೆ ಅಗತ್ಯವೆಂದರು.

2019ರ ಮಳೆಗಾಲದಲ್ಲಿ ಜಿಲ್ಲೆಯಾದ್ಯಂತ 25 ಲಕ್ಷ ಸಸಿಗಳನ್ನು ಆರೂ ತಾಲೂಕುಗಳಲ್ಲಿ ನೆಡಿಸಲು ಕಾರ್ಯ ತಂತ್ರದ ಬಗ್ಗೆ ಕಿರುಹೊತ್ತಿಗೆಯನ್ನು ತರಲಾಗಿದೆ. ತೀವ್ರ ಸಂಕಷ್ಟದಲ್ಲಿರುವ ರೈತರು ಉದ್ಯೋಗ ಖಾತರಿ ಯೋಜನೆಯಡಿ ಸಾಮಾಜಿಕ ಅರಣ್ಯ ಇಲಾಖೆಯು ಬೆಳೆಸಿರುವ ಸಸಿಗಳನ್ನು ನಿಯಮಾನುಸಾರ ಪಡೆದುಕೊಳ್ಳಲು ಅವಶ್ಯವಿರುವ ಮಾಹಿತಿಯ ಪುಸ್ತಕವನ್ನು ರೋಟರಿ ಬೆಂಗಳೂರು ಆರ್ಚಡ್ಸ್‌ ರವರು ಹೊರ ತಂದಿದ್ದಾರೆ.

ಅರಣ್ಯ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಕಿರುಪುಸ್ತಕದಲ್ಲಿ ರೈತರ ಉಪಯೋಗಕ್ಕೆ ಪ್ರಕಟಿಸಲಾಗಿದೆ ಎಂದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ ಸಂಗಪ್ಪ ಉಪಾಸೆ, ಜಿಪಂ ಮುಖ್ಯ ಯೋಜನಾಧಿಕಾರಿ ಮಾಧವರಾಮ್‌ ಸೇರಿದಂತೆ ಜಿಲ್ಲೆಯ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ನರೇಗಾ ಯೋಜನೆ ಸಹಾಯಕ ನಿರ್ದೇಶಕರು ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಜೂನ್‌ ತಿಂಗಳಲ್ಲಿ ಹಸಿರು ಹಬ್ಬ: ಜಿಪಂ ಸಿಇಒ ಗುರುದತ್ತ ಹೆಗಡೆ ಮಾತನಾಡಿ, ಜಿಲ್ಲಾದ್ಯಂತ ಹಸಿರು ಹಬ್ಬವನ್ನು ಜೂನ್‌ 1ರಿಂದ ಅಥವಾ ಮಳೆಯ ದಿನಗಳನ್ನು ಆಧರಿಸಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ತಿಳಿಸಲಾಗಿದೆ. ಕಾರ್ಯಕ್ರಮದ ಕಾರ್ಯ ಯೋಜನೆ ಯಶಸ್ವಿಗೆ ಗ್ರಾಪಂಗಳಿಗೆ ನೋಡಲ್‌ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಹಸಿರೀಕರಣಕ್ಕಾಗಿ ರೂಪಿಸಿರುವ ರೋಟರಿ-ಕೋಟಿ-ನಾಟಿ ಯೋಜನೆಯ ಪ್ರಯೋಜನೆ ಪಡೆದುಕೊಳ್ಳಬೇಕೆಂದು ಜಿಲ್ಲೆಯ ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Code of conduct: ಚುನಾವಣಾ ನೀತಿ ಸಂಹಿತೆ; ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

marriage 2

Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.