ಅಪರಾಧ ಪತ್ತೆಗೆ ಸದಾ ಉತ್ಸಾಹ ಇರಲಿ
Team Udayavani, Jan 18, 2020, 3:00 AM IST
ಚಿಕ್ಕಬಳ್ಳಾಪುರ: ಸಾರ್ವಜನಿಕರ ರಕ್ಷಣೆ ಹಾಗೂ ಅಪರಾಧ ಪತ್ತೆಗೆ ಪೊಲೀಸರಲ್ಲಿ ಸದಾ ಹುರುಪು ಇರಬೇಕಾದರೆ ದೈಹಿಕವಾಗಿ ಸದೃಢವಾಗಿರಬೇಕು. ನಿರಂತರವಾಗಿ ದೈಹಿಕ ಚಟುವಟಿಕೆಗಳು ಇಲ್ಲದಿದ್ದರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುವುದು ಕಷ್ಟಸಾಧ್ಯ ಎಂದು ಕೇಂದ್ರ ವಲಯದ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ತಿಳಿಸಿದರು.
ನಗರದ ಹೊರ ವಲಯದ ಅಣಕನೂರು ಸಮೀಪದ ಜಿಲ್ಲಾ ಮೀಸಲು ಪಡೆಯ ಕವಾಯಿತು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆ 2019ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪೊಲೀಸರ ಕೆಲಸ ಕಠಿಣವಾದದ್ದು. ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಮಾತ್ರ ಕಾರ್ಯನಿರ್ವಹಿಸಲು ಸಾಧ್ಯ ಎಂದರು.
ಕ್ರೀಡಾಭ್ಯಾಸ ಮುಖ್ಯ: ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರಿಗೆ ಮಾನಸಿಕ ಹಾಗೂ ದೈಹಿಕ ಒತ್ತಡ ಹೆಚ್ಚಿರುತ್ತದೆ. ಪೊಲೀಸರು ಮಾನಸಿಕ ಹಾಗೂ ದೈಹಿಕವಾಗಿ ಒತ್ತಡ ನಿವಾರಣೆ ಆಗಬೇಕಾದರೆ ಕ್ರೀಡೆಗಳು ಮುಖ್ಯ. ಸಂಪೂರ್ಣ ಕ್ಷಮತೆ ಇದ್ದರೆ ಮಾತ್ರ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದರು.
ನವ ಚೈತನ್ಯ: ಜಿಲ್ಲೆಯಲ್ಲಿ ಈ ವರ್ಷ ಅನೇಕ ವಿವಿಧ ರೀತಿಯ ಪ್ರಕರಣಗಳನ್ನು ಭೇದಿಸಿ ಮುಂದೆ ಆಗುವಂತಹ ಪ್ರಕರಣಗಳನ್ನು ಸಹ ತಡೆದಿದ್ದು, ಇದೇ ರೀತಿ ಉತ್ಸಾಹದಿಂದ ಕಾರ್ಯ ನಿರ್ವಹಿಸಬೇಕೆಂದರು. ಕ್ರೀಡಾ ಸ್ಫೂರ್ತಿಯಿಂದ ಪ್ರತಿಯೊಬ್ಬರಲ್ಲಿ ನವ ಚೈತನ್ಯ ಮೂಡುತ್ತದೆ. ಪ್ರತಿ ದಿನ ಕ್ರೀಡಾ ಚಟುವಟಿಕೆಗಳನ್ನು ಅಭ್ಯಾಸ ಮಾಡುವುದರಿಂದ ಕುಟುಂಬದ ಮೇಲೆಯು ಪರಿಣಾಮ ಬೀರಿ ಮಕ್ಕಳು ಕ್ರೀಡಾಭ್ಯಾಸದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.
ಕಳೆದ ವರ್ಷವೇ ಕ್ರೀಡಾಕೂಟ ನಡೆಯಬೇಕಿತ್ತು. ಆದರೆ ಅನೇಕ ಕಾನೂನು ಸುವ್ಯವಸ್ಥೆ ಸಮಸ್ಯೆಗಳಿಂದಾಗಿ ತಡವಾಗಿದೆ. ಜಿಲ್ಲೆಯಲ್ಲಿ ಕಳೆದ ವರ್ಷ ಸಂಸತ್ ಚುನಾವಣೆ, ಇತ್ತೀಚೆಗೆ ನಡೆದ ಉಪ ಚುನಾವಣೆ ಯಶಸ್ವಿಯಾಗಿ ನಡೆಸಿದ್ದಕ್ಕೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ, ಸಿಬ್ಬಂದಿಗೆ ವಿಶೇಷವಾಗಿ ಕೇಂದ್ರ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಕೆ.ವಿ.ಶರತ್ಚಂದ್ರ ಅಭಿನಂದನೆ ಸಲ್ಲಿಸಿದರು.
ಕ್ರೀಡಾಕೂಟವೇ ಹಬ್ಬ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಮಾತನಾಡಿ, ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಯಾವುದೇ ಹಬ್ಬ, ಹರಿದಿನಗಳು ಬಂದರೂ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿಂದ ಹಬ್ಬಗಳಲ್ಲಿ ಕುಟುಂಬಸ್ಥರ ಜೊತೆಗೆ ಪಾಲ್ಗೊಳ್ಳಲು ಸಾಧ್ಯವಿಲ್ಲ. ಆದರೆ ಪ್ರತಿ ವರ್ಷ ನಡೆಯುವ ಕ್ರೀಡಾಕೂಟವೇ ಪೊಲೀಸರಿಗೆ ಹಬ್ಬವಾಗಿರುವುದರಿಂದ ಸಿಬ್ಬಂದಿ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಿಸಬೇಕೆಂದರು.
ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ರವಿಶಂಕರ್, ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಶ್ರೀನಿವಾಸ್, ಸಿಪಿಐಗಳಾದ ಹೆಚ್.ವಿ.ಸುದರ್ಶನ್, ಕೆ.ಎಂ.ಶ್ರೀನಿವಾಸಪ್ಪ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿಗಳಾದ ಕೃಷ್ಣಾರೆಡ್ಡಿ, ನಾಗೇಂದ್ರ ಪ್ರಸಾದ್ ಸೇರಿದಂತೆ ಜಿಲ್ಲೆಯ ಎಲ್ಲಾ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಿ: ಜಿಲ್ಲೆಯಲ್ಲಿ ಯಾರಾದರೂ ಹೊಸದಾಗಿ ಮನೆ ಬಾಡಿಗೆ ಪಡೆಯಲು ಬಂದಾಗ ಮನೆ ಮಾಲೀಕರು ಸೂಕ್ತ ಎಚ್ಚರಿಕೆ ವಹಿಸಿ ಅವರ ಚಲನವಲನಗಳನ್ನು ಗಮನಿಸಬೇಕೆಂದು ಕೇಂದ್ರ ವಲಯದ ಐಜಿಪಿ ಕೆ.ವಿ.ಶರತ್ ಚಂದ್ರ ತಿಳಿಸಿದರು. ಕ್ರೀಡಾಕೂಟ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಮಾಲೀಕರು ಮನೆಗಳನ್ನು ಬಾಡಿಗೆ ಕೊಟ್ಟು ಬರುವ ಬಾಡಿಗೆ ಪಡೆದುಕೊಂಡು ಸುಮ್ಮನೆ ಇದ್ದರೆ ಸಾಲದು, ಮನೆ ಪಡೆದವರು ದಿನ ಎಷ್ಟು ಗಂಟೆಗೆ ಹೋಗುತ್ತಾರೆ,
ಸಂಜೆ ಎಷ್ಟು ಗಂಟೆಗೆ ಬರುತ್ತಾರೆ, ಏನು ಕೆಲಸ ಮಾಡುತ್ತಾರೆ ಎಂಬುದನ್ನು ತಿಳಿಯಬೇಕು. ಅನೇಕ ಕಡೆ ಭಯೋತ್ಪಾದಕರು ಮನೆಯಿಂದ ಹೊರಗೆ ಬರುವುದಿಲ್ಲ. ಇಡೀ ದಿವಸ ಮನೆಯೊಳಗೆ ಇರುತ್ತಾರೆ. ಮನೆಯವರು ಅವರ ಚಲನವಲನಗಳ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಮನೆ ಮಾಲೀಕರು ಜಾಗ್ರತೆ ತಪ್ಪಿದರೆ ಭಯೋತ್ಪಾದನಾ ಕೃತ್ಯಗಳು ಸಂಭವಿಸುವ ಸಾಧ್ಯತೆ ಇರುತ್ತವೆ ಎಂದು ಐಜಿಪಿ ಎಚ್ಚರಿಸಿದರು.
ಅಪಘಾತ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಐಜಿಪಿ ಕೆ.ವಿ.ಶರತ್ ಚಂದ್ರ, ಜಿಲ್ಲೆಯ ಮುರಗಮಲ್ಲದಲ್ಲಿ ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟ ಬಗ್ಗೆ ಉಲ್ಲೇಖೀಸಿ ಅಧಿಕಾರಿಗಳು, ಸಾರಿಗೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಮತ್ತು ಹೆದ್ದಾರಿ ಅಧಿಕಾರಿಗಳ ಸಹಭಾಗಿತ್ವದಲ್ಲಿ ಸುಪ್ರೀಂಕೋರ್ಟ್ ಆದೇಶಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಅಪಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿ, ಸಿಬ್ಬಂದಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…