ಅಂಬೇಡ್ಕರ್ ತತ್ವಾದರ್ಶ ಯುವಕರಿಗೆ ದಾರಿದೀಪ
Team Udayavani, Feb 15, 2021, 7:54 PM IST
ಚಿಕ್ಕಬಳ್ಳಾಪುರ: ಸಮಾಜದಲ್ಲಿರುವ ಎಲ್ಲಾ ಜನರು ಸಮಾನರಾಗಿ ಬದುಕುವ ಜೊತೆಗೆ ಪ್ರತಿಯೊಬ್ಬರು ವಿದ್ಯಾವಂತರಾಗಬೇಕೆಂಬ ಉದ್ದೇಶದಿಂದ ರಚಿಸಿರುವ ಸಂವಿಧಾನವನ್ನು ಓದಿ ಜಾಗೃತರಾಗಿ ಆದರ್ಶ ಸಮಾಜ ನಿರ್ಮಿಸಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ನಗರದ ಡಾ.ಬಿ.ಆರ್.ಅಂಬಡ್ಕರ್ ಭವನದಲ್ಲಿ 72ನೇ ಗಣರಾಜ್ಯೋತ್ಸವ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಸಂವಿಧಾನ ಸಂರಕ್ಷಣಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕದಸಂಸ ಪದಾಧಿಕಾರಿಗಳು ಸಂವಿಧಾನದ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿವೆ. ಪೋಷಕರು ಸಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕೆಂದು ಸಲಹೆ ನೀಡಿದರು. ಈ ನಿಟ್ಟಿನಲ್ಲಿ ಸಮಾಜದಲ್ಲಿ ಮತ್ತಷ್ಟು ಜಾಗೃತಿ ಮೂಡಿಸಿ ಜಿಲ್ಲೆಯನ್ನು ಶೈಕ್ಷಣಿಕ ಕೇಂದ್ರ ಮಾಡಲು ಎಲ್ಲರು ಸಹಕರಿಸಿ ಕೈಜೋಡಿಸಬೇಕೆಂದರು.
ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನ ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳು ಯುವಕರಿಗೆ ದಾರಿದೀಪವಾಗಬೇಕೆಂದರು. ಜಿಲ್ಲಾ ವರಿಷ್ಠಾಧಿಕಾರಿಗಳು ಮಾತನಾಡಿ, ಸಂವಿಧಾನದ ಆಶಯಗಳು ಎಲ್ಲಾ ಜನರಿಗೆ ಮುಟ್ಟಬೇಕು ಆಗ ಮಾತ್ರ ದೇಶದ ಭವಿಷ್ಯ ಆದರ್ಶವಾಗಿರುತ್ತೆ ಎಂದರು. ಕದಸಂಸ ಜಿಲ್ಲಾ ಸಂಚಾಲಕರಾದ ಮೇಲೂರು ಮಂಜುನಾಥ್, ರಾಜ್ಯ ಸಂಘಟನಾ ಸಂಚಾಲಕರಾದ ವಿ.ನಾರಾಯಣಸ್ವಾಮಿ, ಸನಂದ್ಕುಮಾರ್, ಭಾಗ್ಯಮ್ಮ ನಾರಾಯಣಸ್ವಾಮಿ, ಕೇಶವ,
ಆಂಜಿನಪ್ಪ, ವಿಭಾಗೀಯ ಸಂಚಾಲಕ ಲಕ್ಷ್ಮೀ ನಾರಾಯಣ, ದೇವಮ್ಮ, ಉಪನ್ಯಾಸಕರಾದ ಡಾ.ಎಚ್.ವಿ.ವೆಂಕಟೇಶ್ ಉಪನ್ಯಾಸ ನೀಡಿದರು. ಜಿಲ್ಲಾ ಸಂಘಟನಾ ಸಂಚಾಲಕರಾದ ನಾರಾಯಣಸ್ವಾಮಿ, ದಡಂಘಟ್ಟ ತಿರುಮಲೇಶ್, ತಾಲೂಕು ಸಂಚಾಲಕರಾದ ಮೂರ್ತಿ, ಶಿಡ್ಲಘಟ್ಟ ಮುನಿಆಂಜಿನಪ್ಪ, ಗೌರಿಬಿದನೂರು ಗಂಗಾಧರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!
Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!
Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ