ಕೇಂದ್ರ ಸರ್ಕಾರದಿಂದ ಆತಂಕದ ವಾತಾವರಣ ಸೃಷ್ಟಿ
Team Udayavani, Feb 1, 2020, 3:00 AM IST
ಗೌರಿಬಿದನೂರು: ದೇಶದಲ್ಲಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಕಾಯ್ದೆಗಳನ್ನು ಜಾರಿಗೊಳಿಸಿ ದೇಶದ ದಲಿತರು, ಆದಿವಾಸಿಗಳು, ಮುಸ್ಲಿಮರಲ್ಲಿ ಆತಂಕದ ವಾತಾವರಣ ಸೃಷ್ಟಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಶಾಸಕ ಶಿವಶಂಕರ ರೆಡ್ಡಿ ಕಿಡಿಕಾರಿದರು.
ನಗರದಲ್ಲಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಜಾರಿ ವಿರುದ್ಧ ಸಿಐಟಿಯು, ಡಿಎಸ್ಎಸ್, ಯುವ ಕಾಂಗ್ರೆಸ್, ರೈತಸಂಘ, ವಿಶ್ವಮಾನವ ಕುವೆಂಪು ವಿಚಾರ ವೇದಿಕೆ ಮುಂತಾದ ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಬಡವರ ಪರವಾದ ಹಾಗೂ ಯುವಜನರಿಗೆ ಉದ್ಯೋಗ, ರೈತರಿಗೆ ಅನುಕೂಲಕರವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸದೆ ವಿವಾದಿತ ಕಾನೂನುಗಳನ್ನು ಜಾರಿ ಮಾಡಲು ಹೊರಟಿದೆ ಎಂದು ದೂರಿದರು. ಇಂತಹ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದೇಶದಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದು, ಅಧಿಕಾರಿಗಳು ಜನಗಣತಿಗೆ ಬಂದಾಗ ಯಾವುದೇ ದಾಖಲೆಗಳನ್ನು ನೀಡುವುದಿಲ್ಲ. ಬೇಕಾದರೆ ನನ್ನನ್ನು ಜೈಲಿಗೆ ಹಾಕಲಿ ಎಂದು ಸಭೆಯಲ್ಲಿ ಸವಾಲೆಸೆದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕರ್ನಾಟಕ ಜನಶಕ್ತಿ ವೇದಿಕೆ ಮುಖ್ಯಸ್ಥ ಡಾ.ಹೆಚ್.ವಿ.ವಾಸು ಮಾತನಾಡಿ, ದೇಶದ ಮೂಲ ವಾರಸುದಾರರ ದಾಖಲೆಗಳನ್ನು ಕೇಳಲು ಹೊರಟಿರುವವರಿಗೆ ದಾಖಲೆ ನೀಡಬಾರದು. ಸಿಎಎ, ಎನ್ಆರ್ಸಿ ಕಾಯ್ದೆಗಳ ವಿರುದ್ಧ ಮುಂದಿನ ಏ.15ರಂದು ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಡಾ.ಅನಿಲ್, ಸಿಪಿಎಂ ಮುಖಂಡ ಜಿ.ಎನ್.ನಾಗರಾಜ್, ಸಿದ್ದಗಂಗಪ್ಪ, ಮೌಲಾನಾ ಜಮದ್ ಅಲಿ ಜವಾದ್ ಮಾತನಾಡಿದರು. ಸಿ.ಜಿ.ಗಂಗಪ್ಪ ಸ್ವಾಗತಿಸಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಕಾರ್ಯಕ್ರಮ ನಿರೂಪಿಸಿದರು. ಆನೂಡಿ ನಾಗರಾಜ್ ಸಂವಿಧಾನದ ಹಕ್ಕುಗಳ ಬಗ್ಗೆ ಬೋಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ