Chikkaballapur; ಅಕ್ರಮ ರಕ್ತ ಚಂದನ ಸಾಗಿಸುತ್ತಿದ್ದ ಇನ್ನೋವಾ ಕಾರು ಪಲ್ಟಿ
ಲಕ್ಷಾಂತರ ಮೌಲ್ಯದ ರಕ್ತಚಂದನ ಕಡಪದಿಂದ ಬೆಂಗಳೂರಿಗೆ ಸಾಗಿಸುವ ವೇಳೆ ಅಪಘಾತ
Team Udayavani, Sep 12, 2023, 11:52 AM IST
ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ.
ಬೆಂಗಳೂರಿನ ಬಾಷಾ ಎಂಬುವರಿಗೆ ಮಾರಾಟ ಮಾಡಲು ಅಕ್ರಮವಾಗಿ ರಕ್ತಚಂದನ ತುಂಡುಗಳನ್ನು ಇನ್ನೋವಾ ಕಾರಿನಲ್ಲಿ ಇರಿಸಿಕೊಂಡು ಸಾಗಾಟ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಇದನ್ನೂ ಓದಿ:Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಪೆರೇಸಂದ್ರ ಠಾಣೆಯ ಪಿಎಸ್ಐ ಜಗದೀಶರೆಡ್ಡಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ