ಸುಧಾಕರ್‌ ಅಕ್ರಮಗಳ ಚರ್ಚೆಗೆ ಬಹಿರಂಗ ಸವಾಲು


Team Udayavani, Sep 26, 2019, 3:00 AM IST

sudhakar

ಅತ್ತ ಅನರ್ಹ ಶಾಸಕ ಡಾ.ಕೆ.ಸುಧಾಕರ್‌, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಘೋಷಣೆಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ತಮ್ಮ ಅರ್ಜಿದಾರ ಪರ ವಕೀಲ ಸುಂದರಂ ಮೂಲಕ ಸುಪ್ರೀಂಕೋರ್ಟ್‌ನಲ್ಲಿ ಬಿರುಸಿನ ವಾದ ಮಂಡಿಸಿದರೆ, ಇತ್ತ ಜಿಲ್ಲೆಯ ಕಾಂಗ್ರೆಸ್‌ ನಾಯಕರು ಸುಧಾಕರ್‌ ಕೋಟೆಯಲ್ಲಿ ನಿಂತು ಪ್ರಚಾರ ನಡೆಸಿ ಟಾಂಗ್‌ ನೀಡಿದರು. ಅಲ್ಲದೇ ಸುಧಾಕರ್‌ ಅಕ್ರಮಗಳ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧ ಎಂದು ಸುಧಾಕರ್‌ಗೆ ಸವಾಲು ಹಾಕಿದರು.

ಈ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗಲಿದ್ದಾರೆಂಬ ಕುತೂಹಲ ಇರುವಾಗಲೇ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಸೆ.30ರಂದು ಅಖಾಡಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲೆಯ ಚುನಾವಣೆ ಉಸ್ತುವಾರಿ ವಹಿಸಿರುವ ಮಾಜಿ ಕೃಷಿ ಸಚಿವ ಎನ್‌.ಎಚ್‌. ಶಿವಶಂಕರರೆಡ್ಡಿ ಪ್ರಕಟಿಸಿದ್ದು ಉಪ ಕದನ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ತಾರಕಕ್ಕೇರುವಂತೆ ಮಾಡಿದೆ.

ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಡಾ.ಕೆ. ಸುಧಾಕರ್‌ ಸ್ವ-ಗ್ರಾಮವಾದ ಪೆರೇಸಂದ್ರದಲ್ಲಿ ಬುಧವಾರ ಉಪ ಚುನಾವಣೆಯ ಪ್ರಚಾರ ನಡೆಸಿದ ಜಿಲ್ಲೆಯ ಕಾಂಗ್ರೆಸ್‌ ನಾಯಕರು, ಸುಧಾಕರ್‌ ಮಾಡಿರುವ ಅಕ್ರಮಗಳ ಬಗ್ಗೆ ನಾವು ದಾಖಲೆಗಳ ಸಮೇತ ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ. ಸುಧಾಕರ್‌ ನಮ್ಮ ಅಕ್ರಮಗಳ ಬಗ್ಗೆ ದಾಖಲೆ ಇದ್ದರೆ ತರಲಿ. ಒಂದು ವೇದಿಕೆಯಲ್ಲಿ ಚರ್ಚೆ ನಡೆಸೋಣ ಎಂದು ಸುಧಾಕರ್‌ಗೆ ಬಹಿರಂಗವಾಗಿ ಸವಾಲು ಎಸೆದಿದ್ದಾರೆ.

ಕ್ಷೇತ್ರದ ಮಂಡಿಕಲ್‌ ಹೋಬಳಿಯವರು ಚುನಾವಣೆ ಪ್ರಚಾರ ಸಭೆಗಳನ್ನು ನಡೆಸಿದ ಚುನಾವಣೆ ಉಸ್ತುವಾರಿಗಳಾದ ಮಾಜಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ, ಶಿಡ್ಲಘಟ್ಟದ ಶಾಸಕ ವಿ.ಮುನಿಯಪ್ಪ ಮತ್ತಿತರ ಹಿರಿಯ ಕಾಂಗ್ರೆಸ್‌ ನಾಯಕರು ಅನರ್ಹ ಶಾಸಕ ಸುಧಾಕರ್‌ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿ ವಾಗ್ಧಾಳಿ ನಡೆಸಿದರು. ಸುಧಾಕರ್‌ 2 ಬಾರಿ ಶಾಸಕರಾಗಿ ಏನೆಲ್ಲಾ ಅಕ್ರಮಗಳನ್ನು ಮಾಡಿದ್ದಾರೆ. ಕೋಟ್ಯಂತರ ರೂ., ಅಕ್ರಮ ಆಸ್ತಿ ಮಾಡಿರುವುದನ್ನು ನಾವು ದಾಖಲೆಗಳ ಸಮೇತ ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ. ಪೆರೇಸಂದ್ರದಲ್ಲಿ ವೇದಿಕೆ ಸಿದ್ಧಪಡಿಸುತ್ತೇವೆ. ತಾಕತ್ತಿದ್ದರೆ ಸುಧಾಕರ್‌ ನಮ್ಮ ಮೇಲೆ ಇರುವ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಚರ್ಚೆಗೆ ಬರಲಿಯೆಂದರು.

ಶ್ರೀಲಂಕಾದಲ್ಲಿ ಮಾಡಿರುವ ಅಕ್ರಮ ಆಸ್ತಿ, ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಭ್ರಷ್ಟಾಚಾರದ ಮೂಲಕ ಕೋಟ್ಯಂತರ ರೂ., ಆಸ್ತಿ ಮಾಡಿದ್ದಾರೆ. ತಾಲೂಕಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗೆ ಕುಮ್ಮಕ್ಕು ನೀಡಿ ಕ್ರಷರ್‌ ಮಾಲಿಕರಿಂದ ತಿಂಗಳಿಗೊಮ್ಮೆ ಒಂದು ಕ್ರಷರ್‌ಗೆ ಒಂದು ಲಕ್ಷ ರೂ. ವಸೂಲಿ ಮಾಡಿ, ಇಂದು ನೂರಾರು ಕೋಟಿ ಒಡೆಯನಾಗಿದ್ದಾನೆ. ಈ ದುಡ್ಡೇನು ವ್ಯವಸಾಯ ಮಾಡಿ, ಸಂಪಾದನೆ ಮಾಡಿಲ್ಲ. ಬದಲಾಗಿ ರೋಲ್‌ ಕಾಲ್, ಮತ್ತು ಚಿಕ್ಕಬಳ್ಳಾಪುರದಲ್ಲಿ ಭ್ರಷ್ಟಾಚಾರ ಮಾಡಿ ಸಂಪಾದಿಸಿದ ಹಣ ಎಂದು ಸುಧಾಕರ್‌ ವಿರುದ್ಧ ಶಿವಶಂಕರರೆಡ್ಡಿ ಕಿಡಿ ಕಾರಿದರು.

ಸುಧಾಕರ್‌ ಅತ್ಯಂತ ಭ್ರಷ್ಟ ರಾಜಕಾರಣಿ: ಮಾಜಿ ಸಚಿವ ವಿ.ಮುನಿಯಪ್ಪ ಮಾತನಾಡಿ, ಸುಧಾಕರ್‌ ಒಬ್ಬ ಅತಿ ಭ್ರಷ್ಟ ರಾಜಕಾರಣಿ. ಈತನಿಂದ ಇಡೀ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಗೆ ಅಗೌರವ ತಂದ ಅಪಕೀರ್ತಿ ಸುಧಾಕರ್‌ಗೆ ಸಲ್ಲುತ್ತದೆ. ಸಿದ್ದರಾಮಯ್ಯನವರ ಆಶೀರ್ವಾದದಿಂದ ಬೆಳೆದು, ಬೆಳೆಸಿದ ಗುರುವಿಗೆ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದರು. ನಾನು 6 ಬಾರಿ ಶಾಸಕನಾಗಿ ಆಯ್ಕೆಯಾದರೂ ಯಾವತ್ತೂ ಮಂತ್ರಿ ಸ್ಥಾನಕ್ಕೆ ಬ್ಲಾಕ್‌ ಮೇಲ್‌ ತಂತ್ರಗಾರಿಕೆ ಮಾಡಲಿಲ್ಲ. ಪಕ್ಷದ ವಿರುದ್ಧ ಮಾತನಾಡಲಿಲ್ಲ. ಆದರೆ ಈತ ಮೊದಲ ಬಾರಿಗೆ ಮಂತ್ರಿಯಾಗಲು ಬ್ಲಾಕ್‌ವೆುಲ್‌ ಮಾಡಿದ್ದಾರೆ.

ಹೀಗಾಗಿ ಈ ಬಾರಿ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಮಹಾಜನತೆ ಈತನನ್ನು ಮನೆಗೆ ಕಳಿಸಬೇಕು. ಮುಂದೆ ಈತನ ಅಕ್ರಮಗಳನ್ನು ಹೊರತಂದು ನಾವು ಸುಧಾಕರ್‌ನನ್ನು ಶ್ರೀಕೃಷ್ಣನ ಜನ್ಮ ಸ್ಥಳಕ್ಕೆ ಕಳಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಬ್ಬ ಸಾಮಾನ್ಯ ನಿವೃತ್ತ ಶಿಕ್ಷಕನ ಮಗನಾಗಿ ಸದಾಶಿವನಗರದಲ್ಲಿ ಬೃಹತ್‌ ಮನೆ, ಪೆರೇಸಂದ್ರದಲ್ಲಿ ಶಾಲಾ ಕಾಲೇಜುಗಳು, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನೂರಾರು ಎಕರೆ ಜಮೀನು ಎಲ್ಲಿಂದ ಬಂತು? ಎಂದು ಕ್ಷೇತ್ರದ ಮತದಾರರು ಕೇಳಲೇಬೇಕು ಎಂದರು.

ಸುಧಾಕರ್‌ ತವರಲ್ಲಿ ಪ್ರಚಾರ: 2 ದಿನಗಳಿಂದ ಮಂಚನಬಲೆ, ತಿಪ್ಪೇನಹಳ್ಳಿ ಜಿಪಂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ದ ಕಾಂಗ್ರೆಸ್‌ ನಾಯಕರು 3ನೇ ದಿನ ಅನರ್ಹ ಶಾಸಕ ಡಾ.ಕೆ.ಸುಧಾಕರ್‌ ಕೋಟೆಯಾದ ಮಂಡಿಕಲ್‌ ಹೋಬಳಿಯಲ್ಲಿ ಪ್ರಚಾರ ನಡೆಸಿ ಗಮನ ಸೆಳೆದರು. ಮಂಡಿಕಲ್, ಅಡ್ಡಗಲ್, ಪೆರೇಸಂದ್ರ, ಅರೂರು, ಕಮ್ಮಗಟ್ಟಹಳ್ಳಿ ಮತ್ತು ದೊಡ್ಡ ಪೈಲಗುರ್ಕಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿ ಸುಧಾಕರ್‌ ವಿರುದ್ದ ನಾಯಕರು ವಾಗ್ಧಾಳಿ ಮುಂದುವರಿಸಿದರು.

ಮಾಜಿ ಶಾಸಕ ಸಂಪಂಗಿ, ಎಸ್‌.ಎಂ. ಮುನಿಯಪ್ಪ, ಜಿಪಂ ಅಧ್ಯಕ್ಷ ಎಚ್‌.ವಿ.ಮಂಜುನಾಥ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌. ಕೇಶವ ರೆಡ್ಡಿ, ಹಿರಿಯ ಮುಖಂಡರಾದ ಜಿ.ಎಚ್‌.ನಾಗರಾಜ್, ನಂದಿ ಆಂಜಿನಪ್ಪ, ಕೆ.ವಿ. ನವೀನ್‌ ಕಿರಣ್, ಕೆಪಿಸಿಸಿ ಸದಸ್ಯ ಎಸ್‌.ಪಿ.ಶ್ರೀನಿವಾಸ್‌ , ಪಿ.ಎನ್‌, ಮುನೇಗೌಡ, ವಕೀಲ ಬಾಲರಾಜ್, ಅಜಿತ್‌ ಪ್ರಸಾದ್‌, ಶೆಟ್ಟಿಗೆರೆ ಮುರಳಿ, ಜಿ.ಆರ್‌. ಶ್ರೀನಿವಾಸ್‌, ಮಂಚನಬಲೆ ಇಸ್ಮಾಯಿಲ್‌, ಶ್ರೀಧರ್‌, ಗಂಗರಾಜ್, ಕಿಟ್ಟಿ, ಆವಲಪ್ಪ, ದಯಾನಂದ್‌, ನಾರಾಯಣಸ್ವಾಮಿ, ನವೀನ್‌ ಹಾಜರಿದ್ದರು.

ಸುಧಾಕರ್‌ ಕ್ಷೇತ್ರಕ್ಕೆ ಕಾಲಿಟ್ಟರೆ ಹಿಂದೆ ಮುಂದೆ ಪೊಲೀಸರ ರಕ್ಷಣೆಯಲ್ಲಿ ಬರುವ ಶಾಸಕರು ಈ ಕ್ಷೇತ್ರದ ಚುನಾಯಿತ ಜನಪ್ರತಿನಿದಿ ಆಗಬೇಕೆ? ಇಂತಹವರಿಗೆ ಕ್ಷೇತ್ರದ ಜನತೆ ಛೀಮಾರಿ ಹಾಕಬೇಕು. ಕ್ಷೇತ್ರದ ಮತದಾರರು ಆಸೆ, ಅಮಿಷಗಳಿಗೆ ಒಳಗಾಗದೇ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಿರುವ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಬೇಕು.
-ವಿ.ಮುನಿಯಪ್ಪ, ಮಾಜಿ ಸಚಿವ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.