ಸ್ವಚ್ಛತೆ ಕಾಪಾಡಲು ಕ್ಯಾಪ್ಟನ್ ನೇಮಕ: ಡೀಸಿ
Team Udayavani, Aug 26, 2020, 2:31 PM IST
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ನಗರವನ್ನುಸ್ವಚ್ಛ ಮತ್ತು ಸುಂದರವಾಗಿಡಲು ಸಂಕಲ್ಪ ಮಾಡಿರುವ ಜಿಲ್ಲಾಧಿಕಾರಿ ಆರ್. ಲತಾ, ಮಂಗಳವಾರ ನಗರದಲ್ಲಿನ 11ನೇ ವಾರ್ಡ್ ಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಮೂಲ ಸೌಲಭ್ಯ ಗಳನ್ನು ಪರಿಶೀಲಿಸಿದರು.
ವಾರ್ಡ್ನಲ್ಲಿ ರಸ್ತೆ ಮತ್ತು ಸ್ವಚ್ಛತೆ ಪರಿಶೀಲಿಸಿ ಬಳಿಕ ಸಾರ್ವಜನಿಕರ ಕುಂದು ಕೊರತೆ ಗಳನ್ನು ಆಲಿಸಿದರು. ನಗರದ ಪ್ರತಿಯೊಂದು ವಾರ್ಡ್ಗಳಲ್ಲಿಯೂ ಕೋವಿಡ್-19 ನಿಯಂ ತ್ರಣಕ್ಕೆ ಟಾಸ್ಕ್ಫೋರ್ಸ್ಗಳನ್ನು ನೇಮಿಸಿದಂತೆ ಸ್ವಚ್ಛತೆಯನ್ನು ಕಾಪಾಡಲು ಕ್ಯಾಪ್ಟನ್ಗಳನ್ನು ನೇಮಿಸುವ ಮೂಲಕ ನಗರದಲ್ಲಿನ ಬ್ಲಾಕ್ ಸ್ಪಾಟ್ಗಳನ್ನು ತಡೆಯಲು ಮುಂದಾಗಿದ್ದು ನಾಗರಿಕರೂ ನಗರ ವನ್ನು ಸ್ವತ್ಛವಾಗಿ ಡಲು ಸಹಕರಿಸಬೇಕೆಂದು ಮನವಿ ಮಾಡಿದರು.
ಪರಿಶೀಲನೆ: ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ಚಿಕ್ಕಬಳ್ಳಾಪುರ ನಗರದ ವಾರ್ಡ್ ನಂಬರ್ 11 ರ ಎಲ್ಲಾ ರಸ್ತೆಗಳು, ಚರಂಡಿ ಗಳು, ಮನೆ-ಮನೆ ಕಸ ಸಂಗ್ರಹಣೆ ಬಗ್ಗೆ, ಹಸಿ, ಒಣ ಕಸ ಬೇರ್ಪಡಿಸುವಿಕೆ ಬಗ್ಗೆ, ಹೋಟೆಲ್ಗಳ ಶುಚಿತ್ವದ ಬಗ್ಗೆ, ಎಲ್ಲಾ ಅಂಗಡಿಗಳ ಮುಂದೆ ಕೊರೊನಾ ಬಗ್ಗೆ ಅರಿವು ಮೂಡಿಸುವ ಬ್ಯಾನರ್ಗಳ ಬಗ್ಗೆ, ಪರಿವೀಕ್ಷಣೆ ಮಾಡಿ ಸದರಿ ವಾರ್ಡ್ನ ಸ್ವಚ್ಛತೆ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ಸಾಂಕ್ರಾಮಿಕ ರೋಗ ನಿಯಂತ್ರಣ: ನಗರದ ಸಾರ್ವಜನಿಕರಿಗೆ ಕಸ ವಿಲೇವಾರಿ ಬಗ್ಗೆ ಅರಿವು ಮೂಡಿಸಿ, ಮನೆಗಳಿಂದಲೇ ಒಣ ಮತ್ತು ಹಸಿ ಕಸವಾಗಿ ವಿಂಗಡಿಸಿ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಚರಂಡಿ ಮತ್ತು ರಸ್ತೆಗಳು ಸ್ವತ್ಛವಾಗಿರ ಬೇಕು. ಪ್ಲಾಸ್ಟಿಕ್ ಬಳ ಕೆಯು ಕಡಿಮೆ ಮಾಡಲು ಅರಿವು ಮೂಡಿಸಬೇಕು. ಇದರಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಬಹುದು ಎಂದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರಸಭೆ ಪೌರಾಯುಕ್ತ ಲೋಹಿತ್, ವಾರ್ಡ್ ಸದಸ್ಯರು, ಕಿರಿಯ ಅಭಿಯಂತರರು, ಆರೋಗ್ಯ ನಿರೀಕ್ಷಕರು, ನೋಡಲ್ ಅಧಿಕಾರಿಗಳು, ಸ್ವತ್ಛತಾ ಕ್ಯಾಪ್ಟನ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ