700 ಕಾಮಗಾರಿಗೆ ಅನುಮೋದನೆ
Team Udayavani, Jul 25, 2019, 3:00 AM IST
ಶಿಡ್ಲಘಟ್ಟ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲಾದ್ಯಂತ ಸುಮಾರು 700 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ ನರೇಗಾ ಯೋಜನೆಯಡಿ ಜಲಸಂರಕ್ಷಣೆಗೆ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆಯನ್ನು ಜಿಲ್ಲಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಶೇಷ ಉಸ್ತುವಾರಿ ವಹಿಸಲಾಗಿದೆ.
ಚೆಕ್ ಡ್ಯಾಂ: ಅಂರ್ತಜಲ ಮಟ್ಟ ವೃದ್ಧಿಗೊಳಿಸಲು ಮತ್ತು ಮಳೆನೀರು ಸಂರಕ್ಷಣೆ ಮಾಡಲು ಚೆಕ್ಡ್ಯಾಂ ಮತ್ತು ಬಹುಕಮಾನ್ ಚೆಕ್ ಡ್ಯಾಂಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ 160 ಚೆಕ್ಡ್ಯಾಂ ಸಮೇತ ಜಿಲ್ಲಾದ್ಯಂತ ವಿವಿಧ ಬಗೆಯ 700 ಕಾಮಗಾರಿಗಳನ್ನು ನಡೆಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಕೆರೆ, ಕಲ್ಯಾಣಿ, ಸಂರಕ್ಷಣೆ: ಜಿಲ್ಲೆಯಲ್ಲಿ ಹಿಂಗಾರು ಆಗಮನದ ಮುನ್ನವೇ ಮಳೆ ನೀರು ಸಂರಕ್ಷಣೆ ಮಾಡಲು ಒತ್ತು ನೀಡಲಾಗಿದೆ. ಸರ್ಕಾರಿ ಕಟ್ಟಡಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕೆರೆ-ಕುಂಟೆ ಮತ್ತು ಕಲ್ಯಾಣಿಗಳನ್ನು ಸಂರಕ್ಷಣೆ ಮಾಡಿ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ತಾಲೂಕಿನಲ್ಲಿ ಜಲಸಂರಕ್ಷಣೆ ಮಾಡಲು ಕೆರೆ-ಕುಂಟೆ ಮತ್ತು ಕಲ್ಯಾಣಿಗಳನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಲಾಗಿದೆ ಎಂದು ಶ್ಲಾಘಿಸಿದರು. ಜಿಲ್ಲೆಯಲ್ಲಿ ಇದೇ ಮಾದರಿ ಅನುಸರಿಸಿ ಕಾಮಗಾರಿ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಬೆಳ್ಳೂಟಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಸುಸಜ್ಜಿತ ಕಲ್ಯಾಣಿ ಅಭಿವೃದ್ಧಿಗೊಳಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪರಿಶೀಲನೆ: ತಾಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ಸಮೀಪ ಮಳೆ ನೀರು ಸಂರಕ್ಷಣೆ ಮಾಡಲು ಅಳವಡಿಸಿರುವ ಮಳೆ ಕೊಯ್ಲು ಪದ್ಧತಿ, ರಾಜೀವ್ ಗಾಂಧಿ ಸೇವಾ ಕೇಂದ್ರ, ಕುಂಟೆ ಅಭಿವೃದ್ಧಿ ಕಾಮಗಾರಿ ಹಾಗೂ ಚಿಕ್ಕದಾಸರಹಳ್ಳಿ ಬ್ಯಾಟರಾಯಸ್ವಾಮಿ ಸನ್ನಿಧಿಯಲ್ಲಿರುವ ಕಲ್ಯಾಣಿ, ಆನೂರು ಗ್ರಾಮದಲ್ಲಿ ಚೆಕ್ಡ್ಯಾಂ, ಪಲಿಚೇರ್ಲು ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್ ನಿರ್ಮಾಣ ಸಹಿತ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ರೈತರು ಸಹ ಮಳೆ ನೀರು ಸಂರಕ್ಷಣೆ ಮಾಡಲು ನರೇಗಾ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಲು ಪ್ರಚಾರ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್ ಹಗಡೆ, ಜಿಪಂ ಸದಸ್ಯ ತನುಜ, ತಾಪಂ ಸದಸ್ಯ ರಾಜಶೇಖರ್, ತಾಪಂ ಇಒ ಶಿವಕುಮಾರ್, ಯುವ ಮುಖಂಡ ಬೆಳ್ಳೂಟಿ ಸಂತೋಷ, ನಾಗೇಶ್, ಆನೂರು ಗ್ರಾಮ ಪಂಚಾಯಿತಿ ಪಿಡಿಒ ಅರುಣಾಕುಮಾರಿ, ಎಸ್.ದೇವಗಾನಹಳ್ಳಿ ಪಿಡಿಒ ಮಧು, ಚಿಕ್ಕಬಳ್ಳಾಪುರ ಜಿಲ್ಲಾ ಎಪಿಎಂಸಿ ಉಪಾಧ್ಯಕ್ಷ ಬೆಳ್ಳೂಟಿ ವೆಂಕಟೇಶ್, ಮಳಮಾಚನಹಳ್ಳಿ ಗ್ರಾಪಂ ಸದಸ್ಯ ಡಿ.ಬೈರೇಗೌಡ, ಬಿ.ಬೈರೇಗೌಡ, ಕಾರ್ಯದರ್ಶಿ ರಾಜಣ್ಣ, ಕೃಷಿ ಇಲಾಖೆಯ ಅಧಿಕಾರಿ ಮಾಲತೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ