ಬಾಕಿ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರ ಧರಣಿ

9 ತಿಂಗಳಿಂದ ವೇತನ ಕೊಡದ ಆರೋಗ್ಯ ಇಲಾಖೆ

Team Udayavani, Jun 28, 2019, 8:00 AM IST

CB-TDY-3..

ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲೆಯ ಆಶಾ ಕಾರ್ಯಕರ್ತೆಯರು ಬಾಕಿ ವೇತನಕ್ಕಾಗಿ ಆಗ್ರಹಿಸಿ ಬೃಹತ್‌ ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ: ಕಳೆದ 9 ತಿಂಗಳಿಂದ ವೇತನ ಕೊಟ್ಟಿಲ್ಲ ಎಂದು ಆರೋಪಿಸಿ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಗುರುವಾರ ಜಿಲ್ಲಾಡಳಿತ ಭವನದ ಎದುರು ಆರೋಗ್ಯ ಇಲಾಖೆಯ ನೂರಾರು ಆಶಾ ಕಾರ್ಯಕರ್ತೆಯರು ದಿಢೀರನೇ ಪ್ರತಿಭಟನಾ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ ಸುಮಾರು 1,900 ಕ್ಕೂ ಹೆಚ್ಚು ಕಾರ್ಯಕರ್ತರಿಗೆ 9 ತಿಂಗಳಿಂದ ವೇತನ ಕೊಟ್ಟಿಲ್ಲ. ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗದ ಕಾರಣ ಜಿಲ್ಲಾಡಳಿತ ಭವನದ ಎದುರು ಆಶಾ ಕಾರ್ಯ ಕರ್ತರು ತಮ್ಮ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ರಾಜ್ಯ ಆಶಾ ನೌಕರರ ಸಂಘದ (ಸಿಐಟಿಯು) ಜಿಲ್ಲಾಧ್ಯಕ್ಷೆ ಗಂಜಿಗುಂಟೆ ಲಕ್ಷ್ಮಿದೇವಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರುರು, ವೇತನ ಕೊಡ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಡಿಕಾರಿದರು.

ಇಷ್ಟಾನುಸಾರ ವೇತನ ಬಿಡುಗಡೆ: ಇಲಾಖೆ ಕೆಲಸ ಕಾರ್ಯಗಳನ್ನು ಬಿಟ್ಟು ಸರ್ಕಾರದ ವಿವಿಧ ಕೆಲಸ ಕಾರ್ಯಗಳನ್ನು ಆಶಾ ಕಾರ್ಯಕರ್ತೆಯರ ಮೂಲಕ ಮಾಡಿಸಿಕೊಳ್ಳುತ್ತಿದ್ದರೂ ಕನಿಷ್ಠ ಪ್ರೋತ್ಸಾಹಧನ ಕೊಡುತ್ತಿಲ. ಇಲಾಖೆಯಲ್ಲಿ ಎಲ್ಲರಿಗೂ ಒಂದೇ ಬಾರಿ ವೇತನ ಕೊಡದೇ ಅವರ ಇಷ್ಟಾನುಸಾರ ವೇತನ ಬಿಡುಗಡೆ ಮಾಡಲಾಗುತ್ತಿದೆ ಎಂದು ದೂರಿದರು. ಸಂಘದ ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ ಮಾತನಾಡಿ, ಇಲಾಖೆಯಲ್ಲಿ ಹೊಸದಾಗಿ ನೇಮಕಗೊಳ್ಳುವ ಆಶಾ ಕಾರ್ಯಕರ್ತರಿಗೆ ಈ ಹಿಂದೆ ಹೆರಿಗೆ ಮಾಡಿಸಿದರೆ 250 ರೂ. ಭತ್ಯೆ ಕೊಡುತ್ತಿದ್ದರು. ಆದರೆ ಈಗ 100 ರೂ.ಗೆ ಇಳಿಕೆ ಆಗಿದೆ ಎಂದರು.

ಕೆಲವು ಕಡೆ ದುರುದ್ದೇಶ ದಿಂದ ಆಶಾ ಕಾರ್ಯ ಕರ್ತೆಯರ ಮೇಲೆ ಇಲಾಖೆ ಮೇಲ್ವಿಚಾರಕರು ಇಲ್ಲಸಲ್ಲದ ಆರೋಪಗಳನ್ನು ಹೊರೆಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಸಂಘದ ಕಾರ್ಯದರ್ಶಿ ಕಲಾವತಿ, ಪದಾಧಿಕಾರಿಗಳಾದ ರಾಧ, ಪಾರ್ವತಿ, ಶೋಭಾ, ನಂಜಮ್ಮ, ಮುನಿನಾರಾಯಣಮ್ಮ ಸೇರಿದಂತೆ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ, ತಾಲೂಕುಗಳಿಂದ ಆಗಮಿಸಿಆಶಾ ಕಾರ್ಯಕರ್ತೆ ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.