12 ಸಾವಿರ ಗೌರವ ಧನಕ್ಕೆ ಆಗ್ರಹ
Team Udayavani, Jul 28, 2020, 8:32 AM IST
ಚಿಕ್ಕಬಳ್ಳಾಪುರ: ಪ್ರೋತ್ಸಾಹ ಹಾಗೂ ಗೌರವ ಧನ ಸೇರಿ ಒಟ್ಟಿಗೆ ತಿಂಗಳಿಗೆ ಕನಿಷ್ಠ 12 ಸಾವಿರ ರೂ. ಗೌರವ ಧನ ನೀಡ ಬೇಕೆಂದು ಆಗ್ರಹಿಸಿ ಸೋಮವಾರ ಜಿಲ್ಲೆಯ ಮಂಚೇನಹಳ್ಳಿಗೆ ಭೇಟಿ ನೀಡಿದ್ದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ಗೆ ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸಿದರು.
ಕಳೆದ 18 ದಿನಗಳಿಂದ 12 ಸಾವಿರ ರೂ. ಗೌರವ ಧನ ನೀಡಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವೈಯಕ್ತಿಕ ಸುರಕ್ಷತಾ ಕಿಟ್ಗಳನ್ನು ನೀಡುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಮಂಚೇನಹಳ್ಳಿ ಹೋಬಳಿಯ ಶಾಂಪೂರ್ ಗ್ರಾಪಂ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಮಂಚೇನಹಳ್ಳಿಗೆ ಆಗಮಿಸಿದ್ದ ಸಚಿವರಿಗೆ ಆಶಾ ಕಾರ್ಯ ಕರ್ತೆಯರು ಸುತ್ತುವರೆದು ತಮ್ಮ ಬೇಡಿಕೆಗಳ ಮನವಿ ಸಲ್ಲಿಸಿದರು.
ಕೋವಿಡ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಯರು ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ತಮ್ಮ ಬೇಡಿಕೆ ಗಳಿಗೆ ಸ್ಪಂದಿಸ ಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು. ಆಶಾ ಕಾರ್ಯಕರ್ತೆ ಯರ ಸಂಘದ ಜಿಲ್ಲಾ ಮುಖಂಡರಾದ ಸರಸ್ವತಮ್ಮ, ಲಕ್ಷ್ಮೀ, ಪಂಕಜಾರೆಡ್ಡಿ, ಮಮತಾರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ