ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ
Team Udayavani, May 29, 2022, 5:13 PM IST
ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಆತನ ಸಂಬಂಧಿಕರು ನಾಲ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಪಟ್ಟಣ ಪಂಚಾಯಿತಿ 5ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ಗಂಗರಾಜ ಅಲಿಯಾಸ್ ಕಂಬಿರಾಜು ಮತ್ತು ಆತನ ಸಂಬಂಧಿಕರಿಂದ ಅದೇ ವಾರ್ಡ್ಗೆ ಸೇರಿದ ಸಂದೀಪ್, ಗಣೇಶ್ ಸೇರಿದಂತೆ ಒಟ್ಟು ನಾಲ್ಕು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಶನಿವಾರ ರಾತ್ರಿ ಗಾಯಾಳು ಗಣೇಶ್ ರವರ ಮನೆಯ ಮಕ್ಕಳು ಆಟ ಅಡುತ್ತಿದ್ದು, ಆ ಸಮಯದಲ್ಲಿ ಮಕ್ಕಳನ್ನು ಮನೆಗೆ ಹೋಗಿ ರಾತ್ರಿಯಾಯಿತು ಎಂದು ಬೈದು ಮನೆಗೆ ಕಳಿಸುತ್ತಿರುವಾಗ ಗಂಗರಾಜು ಮತ್ತು ಅವರ ಸಂಬಂಧಿಕರು ಏಕಾಏಕಿ ದಾಳಿ ಮಾಡಿ ಗಣೇಶ್, ಪತ್ನಿ, ತಂದೆ, ಸಂದೀಪ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸಂದೀಪ್ , ಗಣೇಶ್ ಗೆ ಗಂಬೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು