ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ
Team Udayavani, Oct 3, 2020, 10:15 PM IST
ಚಿಕ್ಕಬಳ್ಳಾಪುರ: ದೇವಾಲಯದ ಬೀಗವನ್ನು ಒಡೆದು ಹುಂಡಿಯನ್ನು ಕದಿಯಲು ಯತ್ನಿಸಿದ ಇಬ್ಬರು ಚೋರರನ್ನು ಗ್ರಾಮಸ್ಥರು ಹಿಡಿದು ಶಿಡ್ಲಘಟ್ಟ ಗ್ರಾಮಾಂತರ ಪೋಲಿಸರ ವಶಕ್ಕೆ ನೀಡಿರುವ ಘಟನೆ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗ್ರಾಮದ ಸುರೇಶ್ ಕೋಣಂಗಿ ಬಿನ್ ರಾಮಪ್ಪ, ಲಕ್ಷ್ಮೀಪತಿ ಲಕ್ಕ ಬಿನ್ ಆಂಜಿನಪ್ಪ ಬಂಧಿತ ಆರೋಪಿಗಳು.
ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ-ಮೇಲೂರು ರಸ್ತೆಯಲ್ಲಿರುವ ಶ್ರೀಮ ಮಹೇಶ್ವರಮ್ಮ ದೇವಾಲಯದ ಬೀಗವನ್ನು ಹೊಡೆದು ಒಳನುಗ್ಗಿದ ಚೋರರು ದೇವಾಲಯದ ಹುಂಡಿಯನ್ನು ಕದಿಯಲು ಯತ್ನಿಸಿದಾಗ ಮಧ್ಯರಾತ್ರಿ ಸುಮಾರು 1 ಗಂಟೆಯಲ್ಲಿ ಮನೆಯಿಂದ ಹೊರಬಂದಿದ್ದ ನಾರಾಯಣಮೂರ್ತಿ ಎಂಬುವರು ಕಂಡು ಕೂಡಲೇ ಅವರ ಸಹೋದರ ಬಿ.ಕೆ.ಕೇಶವಮೂರ್ತಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಇಬ್ಬರು ಕಾರ್ಯಪ್ರವೃತರಾಗಿ ದೇವಾಲಯದ ಬಾಗಿಲನ್ನು ಹೊರಗಡೆಯಿಂದ ಬಂದ್ ಮಾಡಿ ಕಳ್ಳರನ್ನು ಹಿಡಿದು ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ಠಾಣೆಯ ಪೋಲಿಸರ ವಶಕ್ಕೆ ನೀಡಿದ್ದಾರೆ.
ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ಠಾಣೆಯ ಪಿಎಸ್ಐ ಲಿಯಾಖತ್ತುಲ್ಲಾ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಈ ಕಳ್ಳತನದ ಪ್ರಕರಣದಲ್ಲಿ ಭಾಗಿಯಾಗಿರುವ ಮಳ್ಳೂರು ಗ್ರಾಮದ ಮಧು ಮತ್ತು ಚಲಪತಿ ಎಂಬುವರು ಪರಾರಿಯಾಗಿದ್ದು ಅವರನ್ನು ಬಂಧಿಸಲು ಪೋಲಿಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ