ಪ್ರತಿ ಜಿಲ್ಲೆಯಲ್ಲೂ ಆರೋಗ್ಯ ಮೇಳ ನಡೆಸಲು ಪ್ರಯತ್ನ

ಸಚಿವ ಡಾ. ಸುಧಾಕರ್‌ ಏರ್ಪಡಿಸಿದ್ದ ಬೃಹತ್‌ ಆರೋಗ್ಯ ಮೇಳಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅರುಣ್‌ ಸಿಂಗ್‌

Team Udayavani, May 16, 2022, 1:49 PM IST

8

ಚಿಕ್ಕಬಳ್ಳಾಪುರ: ಈವರೆಗೆ ನಾನು ಎಲ್ಲೂ ನೋಡಿರದ ಬೃಹತ್‌ ಆರೋಗ್ಯ ಮೇಳವಿದು. ಇಂತಹ ಯೋಜಿತ ಕಾರ್ಯಕ್ರಮ ಸಚಿವ ಡಾ.ಕೆ.ಸುಧಾಕರ್‌ ಅವರ ದೂರದೃಷ್ಟಿಗೆ ಸಾಕ್ಷಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಿದ್ದ ಬೃಹತ್‌ ಆರೋಗ್ಯ ಮೇಳಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದರು.

ಆರೋಗ್ಯ ಮೇಳದಲ್ಲಿ ತಪಾಸಣೆ ಜತೆಗೆ ಚಿಕಿತ್ಸೆಯೂ ಲಭ್ಯವಿದೆ. ಒಂದೇ ಕ್ಯಾಂಪಸ್‌ನಲ್ಲಿ ತಪಾಸಣೆ, ಚಿಕಿತ್ಸೆ, ಆಯುಷ್ಮಾನ್‌ ಕಾರ್ಡ್‌ ಮಾಡಿಕೊಡುವುದು ಸೇರಿ ಹಲವಾರು ಸೇವೆಗಳನ್ನು ನೀಡಲಾಗುತ್ತಿದೆ. ಇಂತಹ ಉತ್ತಮ ಕಾರ್ಯವನ್ನು ಬೇರೆ ಪಕ್ಷದವರು ನೋಡಿ ಕಲಿಯಬೇಕಿದೆ. ಇದೇ ರೀತಿ ಇನ್ನಷ್ಟು ಜಿಲ್ಲೆಗಳಲ್ಲಿ ಈ ಆರೋಗ್ಯ ಮೇಳ ನಡೆಯಲಿ ಎಂದು ಸಲಹೆ ನೀಡಿದರು.

ಸಿಎಂ ಜತೆ ಚರ್ಚಿಸಿ ಜಿಲ್ಲೆಗಳಲ್ಲೂ ಮೇಳ:

ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ಶನಿವಾರ, ಭಾನುವಾರದ ರಜಾದಿನಗಳನ್ನು ಆರಿಸಿ ಕೊಂಡು ಆರೋಗ್ಯ ಮೇಳ ಮಾಡಲಾಗಿದೆ. ಜನರು ಹೆಚ್ಚು ಉತ್ಸಾಹದಿಂದ ಮೇಳಕ್ಕೆ ಬಂದು ಸೇವೆ ಪಡೆದಿದ್ದಾರೆ. ವೈದ್ಯರು, ಕಾರ್ಯಕರ್ತರು ಸಮಯ ಮೀರಿದ್ದರೂ ಕೆಲಸ ಮಾಡಿದ್ದಾರೆ. ಅವರಿಗೆ ವಂದನೆಗಳನ್ನು ತಿಳಿಸುತ್ತೇನೆ. ರಾಜ್ಯ ಸರ್ಕಾರದಿಂದಲೇ ಈ ರೀತಿಯ ಆರೋಗ್ಯ ಮೇಳವನ್ನು ಪ್ರತಿ ಜಿಲ್ಲೆಯಲ್ಲಿ ನಡೆಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಇದನ್ನು ಜನಾಂದೋಲನದಂತೆ ಮಾಡಲಾಗುವುದು ಎಂದರು.

ಗ್ರಾಮೀಣ ಭಾಗಗಳಲ್ಲಿ ಆರೋಗ್ಯದ ಬಗ್ಗೆ ಹಂತದ ಆಸ್ಪತ್ರೆಗಳು ಎಲ್ಲಾ ಕಡೆ ಇಲ್ಲ. ಚಿಕ್ಕಬಳ್ಳಾಪುರದಲ್ಲಿ ಹೊಸ ಮೆಡಿಕಲ್‌ ಕಾಲೇಜು ಬರಲು 10-12 ತಿಂಗಳು ಬೇಕಾಗಬಹುದು. ಈ ಭಾಗದಲ್ಲಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕಾಗಿ ನನ್ನದೇ ರೀತಿಯಲ್ಲಿ ಹೋರಾಟ ಮಾಡಿದ್ದೇನೆ. ಈವರೆಗೆ ಜನರು ಬೆಂಗಳೂರಿನಂತಹ ನಗರಗಳಿಗೆ ಹೋಗಿ ತಪಾಸಣೆ, ಚಿಕಿತ್ಸೆ ಪಡೆಯುತ್ತಿದ್ದರು ಎಂದರು.

ಟೀಕೆಗಳು ಸಹಜ: ಆರೋಗ್ಯ ಮೇಳದ ಟೀಕೆ ಕುರಿತು ಉತ್ತರಿಸಿದ ಸಚಿವರು, ನೀರು ತರುವಾಗ, ವೈದ್ಯಕೀಯ ಕಾಲೇಜು ತಂದಾಗ ಟೀಕೆ ಬಂದಿತ್ತು. ಆರೋಗ್ಯ ಮೇಳದ ಬಗ್ಗೆಯೂ ಟೀಕೆ ಬಂದಿದೆ. ಈ ರೀತಿ ಟೀಕೆ ಬರುವುದು ಸರ್ವೇ ಸಾಮಾನ್ಯ. ಜನರ ಬಗ್ಗೆ ಬದ್ಧತೆ, ಕಾಳಜಿ ಇರುವವರು ಇದಕ್ಕೆ ಹೆದರಬೇಕಿಲ್ಲ. ಆದರೆ ನಾವು ಆತ್ಮತೃಪ್ತಿಯಿಂದ ಕೆಲಸ ಮಾಡಬೇಕು, ಜನರಿಗೆ ಇದರಿಂದ ಉಪಯೋಗವಾಗಬೇಕು ಎಂದರು.

ಉಚಿತ ಚಿಕಿತ್ಸೆ: ಆರೋಗ್ಯ ಮೇಳದಲ್ಲಿ ಮಾಡುವ ತಪಾಸಣೆ ಒಂದು ಹಂತವಾಗಿದೆ. ಬಳಿಕ ಜನರಿಗೆ ಆಯುಷ್ಮಾನ್‌ ಯೋಜನೆಯಡಿ ಚಿಕಿತ್ಸೆ ನೀಡಲಾಗುವುದು. ಆ ಯೋಜನೆಯಡಿ ಫಲಾನುಭವಿ ಆಗಿಲ್ಲದಿದ್ದರೆ, ನಮ್ಮ ಫೌಂಡೇಶನ್‌ನಿಂದ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು

ಆರೋಗ್ಯ ಮೇಳ ಯಶಸ್ವಿ

ಗಿನ್ನಿಸ್‌ ವರ್ಲ್ಡ್ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರಿದ ಎರಡು ದಿನಗಳ ಬೃಹತ್‌ ಆರೋಗ್ಯ ಮೇಳ, ಲಕ್ಷಾಂತರ ಜನರ ಆರೋಗ್ಯ ತಪಾಸಣೆಯೊಂದಿಗೆ ಯಶಸ್ಸು ಕಂಡಿತು. ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿ ಟ್ರಸ್ಟ್‌, ಬಾಲಗಂಗಾಧರನಾಥ ಸ್ವಾಮೀಜಿ ಕ್ಯಾಂಪಸ್‌ನಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಏರ್ಪಡಿಸಿದ್ದ ಆರೋಗ್ಯ ಮೇಳಕ್ಕೆ ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ಹಿನ್ನೆಲೆಯಲ್ಲಿ ವರ್ಲ್ಡ್ ಬುಕ್‌ ಆಫ್‌ ರೆಕಾರ್ಡ್ಸ್‌ ಸಂಸ್ಥೆಯು ಇದು ಜಗತ್ತಿನ ಅತ್ಯಂತ ದೊಡ್ಡ ಆರೋಗ್ಯ ಮೇಳ ಎಂದು ಪ್ರಮಾಣ ಪತ್ರ ನೀಡಿತ್ತು. ಮೊದಲ ದಿನ ಮೇಳಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಆಗಮಿಸಿ, ಈ ರೀತಿಯ ಪ್ರಯತ್ನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮಾಡಬೇಕು ಎಂದು ಸಲಹೆ ನೀಡಿದ್ದರು. ಭಾನುವಾರ ಕೂಡ ಮೇಳದಲ್ಲಿ ಅನೇಕರು ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕಣ್ಣು, ಕಿವಿ, ದಂತ, ಚರ್ಮ, ಮೂಳೆ, ಹೃದಯ, ಶ್ವಾಸಕೋಶ ಸೇರಿದಂತೆ ಅನೇಕ ಪ್ರಕಾರದ ವೈದ್ಯಕೀಯ ತಪಾಸಣೆಯ ಉಚಿತ ಸೇವೆಯನ್ನು ಜನರು ಬಳಸಿಕೊಂಡರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.