ಜಿಲ್ಲೆಯಲ್ಲಿ ಫ್ಲೋರೋಸಿಸ್ ನಿಯಂತ್ರಣಕ್ಕೆ ಜಾಗೃತಿ ಅಗತ್ಯ
Team Udayavani, Jan 26, 2020, 3:00 AM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿರುವ ನೀರು ಹಾಗೂ ಆಹಾರ ಸೇವಿಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಜನ ಜಾಗೃತಿ ಮೂಡಿಸಬೇಕಿದೆ ಎಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಮಿನಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಫ್ಲೋರೋಸಿಸ್ ತಡೆಗಟ್ಟುವ ಘಟಕದ ವತಿಯಿಂದ ಜಿಲ್ಲೆಯ ಫ್ಲೋರೋಸಿಸ್ ತಡೆಗಟ್ಟುವ ಹಾಗೂ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಫ್ಲೋರೋಸಿಸ್ ತೀವ್ರತೆ ಕಡಿಮೆ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟ ಅಂತರ ಇಲಾಖೆ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾಗೃತಿ ಮೂಡಿಸಿ: ಎಂಟು ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುವ ಈ ಫ್ಲೋರೋಸಿಸ್ ಅಂಶದ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಬೇಕು. ಫ್ಲೋರೈಡ್ ಅಂಶ ಹೆಚ್ಚಾಗಿರುವ ನೀರು ಹಾಗೂ ಆಹಾರ ಸೇವಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ರೋಗವನ್ನು ಸಂಪೂರ್ಣ ನಿಯಂತ್ರಣಕ್ಕೆ ತರಬೇಕೆಂದರು.
ಜಿಲ್ಲೆಯಲ್ಲಿನ ಪ್ರತಿ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಫ್ಲೋರೈಡ್ ಮುಕ್ತ ನೀರು ಒದಗಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಫ್ಲೋರೋಸಿಸ್ ಬಗ್ಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡುವುದು. ಫ್ಲೋರೋಸಿಸ್ ರೋಗ ಸಂಬಂಧ ತಪಾಸಣೆ ಕೇಂದ್ರವನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಆರಂಭಿಸಲಾಗಿದ್ದು, ಈ ಬಗ್ಗೆಯೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು.
ಜುಲೈ ತಿಂಗಳಲ್ಲಿ 28 ರಂದು ಅಮಲ ದಿನವನ್ನು ಜಿಲ್ಲಾದ್ಯಂತ ಆಚರಿಸಿ ಫ್ಲೋರೋಸಿಸ್ ದುಷ್ಪರಿಣಾಮಗಳ ಬಗ್ಗೆ ಜನ ಸಾಮಾನ್ಯರಲ್ಲಿ ವಿಶೇಷವಾಗಿ ಪ್ಲೋರೈಡ್ ಅಧಿಕ ಪ್ರಮಾಣದಲ್ಲಿರುವ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ, ಗೌರಿಬಿದನೂರು ತಾಲೂಕಿನ ಜನರಲ್ಲಿ ಮಾಹಿತಿ ನೀಡಿ ಅರಿವು ಮಾಡಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಿಇಒ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸಂತಾನ ಹಾಗೂ ಮಕ್ಕಳ ಆರೋಗ್ಯಾಧಿಕಾರಿ ಡಾ.ಚನ್ನಕೇಶವರೆಡ್ಡಿ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!