ಕನ್ನಂಪಲ್ಲಿ ಕೆರೆಗೆ ಬಾಗಿನ ಅರ್ಪಣೆ
Team Udayavani, Oct 14, 2017, 2:28 PM IST
ಚಿಂತಾಮಣಿ: ನಗರದ ಕನ್ನಂಪಲ್ಲಿ ಕೆರೆಗೆ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ದಂಪತಿ ಹಾಗೂ ಸಂಸದ ಕೆ.ಎಚ್. ಮುನಿಯಪ್ಪ ಶುಕ್ರವಾರ ವೇದ ಪಂಡಿತರು, ವಾದ್ಯ ಮೇಳ ಹಾಗೂ ಬೆಂಬಲಿಗರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಮುನಿಯಪ್ಪ ಮಾತನಾಡಿ, ನಗರಕ್ಕೆ ಜೀವಧಾರೆಯಾದ ಕನ್ನಂಪಲ್ಲಿ ಕೆರೆ ತುಂಬಿರುವುದು ಸಂತಸದ ವಿಷಯ. ಕೆರೆ ತುಂಬ ನೀರು ಇವೆ ಎಂದು ಪೋಲು ಮಾಡಬಾರದು. ಮಿತವಾಗಿ ಅವಶ್ಯಕತೆಗೆ ತಕ್ಕಷ್ಟು ಬಳಸಬೇಕು ಎಂದರು.
2.5 ವರ್ಷ ಸಮಸ್ಯೆ ಇಲ್ಲ: ನಗರಕ್ಕೆ ನೀರು ಪೂರೈಸುವ ಕೆರೆ ಇದು. ಎರಡು ವರ್ಷಗಳ ನಂತರ ತುಂಬಿ ಕೋಡಿ ಹರಿದಿದೆ. ಇದರಿಂದ ಜನತೆಗೆ ನೀರಿನ ಸಮಸ್ಯೆ ತಪ್ಪಿದಂತಾಯಿತು. ಇದರಿಂದ ಇನ್ನೂ ಎರಡುವರೆ ವರ್ಷ ನಗರಕ್ಕೆ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ತಿಳಿಸಿದರು.
ಬಾಗಿನ ಅರ್ಪಿಸುವ ವೇಳೆ ಚಿಂತಾಮಣಿ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಜನ ಬಂದಿದ್ದರು. ಎರಡು ವರ್ಷಗಳ ನಂತರ ತುಂಬಿದ ಕೆರೆ ಎದುರು ನಿಂತು ಜನರು ಸೆಲ್ಫಿ ಹಾಗೂ ಗುಂಪು ಫೋಟೊ ತೆಗೆಸಿಕೊಂಡರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ತಿಂಡಿಯ ವ್ಯವಸ್ಥೆ ಮಾಡಲಾಗಿತ್ತು.
ನಗರಸಭೆ ಅಧ್ಯಕ್ಷೆ ಸುಜಾತಾ, ಜಿಪಂ ಸದಸ್ಯೆ ಕಮಲಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀರಾಮಪ್ಪ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಆಬ್ಬುಗುಂಡು ಶ್ರೀನಿವಾಸ ರೆಡ್ಡಿ, ನಗರಸಭಾ ಸದಸ್ಯರಾದ ಪ್ರಕಾಶ್, ಮಂಜುನಾಥ, ಸಾದಪ್ಪ, ವೆಂಕಟರವಣಪ್ಪ, ರಾಮಮೂರ್ತಿ, ಬ್ಲಿಡ್ ಮಂಜುನಾಥ ಹಾಗೂ ಎಲ್ಲಾ ನಗರಸಭಾ ಸದಸ್ಯರು, ತಹಶೀಲ್ದಾರ್ ಅಜಿತ್ಕುಮಾರ್ ರೈ, ಮಸಲಹಳ್ಳ ಮಂಜು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ