ಕನ್ನಂಪಲ್ಲಿ ಕೆರೆಗೆ ಶಾಸಕ ಕೃಷ್ಣಾ ರೆಡ್ಡಿ ದಂಪತಿ ಬಾಗಿನ
Team Udayavani, Nov 29, 2020, 2:21 PM IST
ಚಿಂತಾಮಣಿ: ನಗರದ ಜೀವಜಲ ಮೂಲವಾಗಿರುವ ಕನ್ನಂಪಲ್ಲಿ ಕೆರೆ ಕಳೆದ ಎರಡು ದಿನಗಳಿಂದ ಬಿದ್ದ ಮಳೆಗೆ ಕೋಡಿ ಹರಿಯುತ್ತಿದ್ದು, ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ದಂಪತಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಬೆಳಗ್ಗೆ ಕೆರೆಯ ಬಳಿ ತೆರಳಿ ವೇದಪಂಡಿತರು ಹಾಗೂ ವಾದ್ಯಮೇಳಗಳೊಂದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ನಂತರ ಗಂಗಾಮಾತೆಯನ್ನುಅಲಂಕೃತ ತೆಪ್ಪದಲ್ಲಿಕೂರಿಸಿ ಕೆರೆಪ್ರದಕ್ಷಿಣೆ ಮಾಡಲಾಯಿತು ಹಾಗೂ ನಾರಸಿಂಹಪೇಟೆಯ ಗ್ರಾಮದೇವತೆ ಗಂಗಮ್ಮನವರಿಗೆ ಪೂಜೆ ಸಲ್ಲಿಸಿ ಅಲಂಕೃತ ಪಲ್ಲಕ್ಕಿ ಮುಖಾಂತರ ಮೆರವಣಿಗೆ ಮಾಡಲಾಯಿತು.
ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಪತ್ರಿಕೆಯೊಂದಿಗೆ ಮಾತನಾಡಿ, ತಾನೂ ಶಾಸಕನಾದ ಬಳಿಕ ಕನ್ನಂಪಲ್ಲಿ ಕೆರೆ ಮೂರನೇ ಬಾರಿಗೆ ತುಂಬಿ ಕೋಡಿ ಹರಿಯುತಿರುವುದು ಸಂತಸದ ವಿಷಯ ವಾಗಿದ್ದು, ಪ್ರತಿವರ್ಷ ಇದೇ ರೀತಿ ತಾಲೂಕಿನ ಎಲ್ಲಾ ಕೆರೆಗಳು ತುಂಬಿ ಕೋಡಿ ಹರಿದು ಸಕಾಲಕ್ಕೆ ಜನಜಾನುವಾರುಗಳಿಗೆ ಮೇವು, ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಬಾಗಿನ ವೇಳೆ ಚಿಂತಾಮಣಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ತಹಶೀಲ್ದಾರ್ ಹನುಮಂತರಾಯಪ್ಪ, ನಗರಸಭೆ ಪರಿಸರ ಅಭಿಯಂತರ ಉಮಾಶಂಕರ್, ಆರತಿ, ಬಿಇಒ ಸುರೇಶ್, ತಾಲೂಕು ಆರೋಗ್ಯಾಧಿಕಾರಿ ಸ್ವಾತಿ ಸೇರಿದಂತೆ ನಗರಸಭೆ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು ಚಿಂತಾ ಮಣಿ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸಪ್ಪ ಹಾಗೂ ಗ್ರಾಮಾಂತರ ಠಾಣೆ ಪಿಎಸ್ಐ ನರೇಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು