ನೆರೆ ಸಂತ್ರಸ್ತರ ಪರಿಹಾರಕ್ಕೆ ಆಗ್ರಹಿಸಿ ನಾಳೆ ಬೆಂಗಳೂರು ಚಲೋ


Team Udayavani, Oct 13, 2019, 3:00 AM IST

nere-santrasata

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸಂಭವಿಸಿರುವ ಭೀಕರ ನೆರೆಗೆ ಸಂತ್ರಸ್ತರಾಗಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಪರಿಹಾರ ಒದಗಿಸಬೇಕು. ನೆರೆ ಹಾಗೂ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೋಮವಾರ ಬೆಂಗಳೂರು ಚಲೋ ಹಮ್ಮಿಕೊಂಡಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.

ನಗರದ ರೈತ ಸಂಘದ ಜಿಲ್ಲಾ ಕಚೇರಿಯಲ್ಲಿ ಈ ಕುರಿತು ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕದಲ್ಲಿ ನೆರೆ ಸಂಭವಿಸಿ ಎರಡು ತಿಂಗಳಾದರೂ ಇದುವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.

ಕಾಟಾಚಾರಕ್ಕೆ ಅಧಿವೇಶನ: ನೆರೆಗೆ ತುತ್ತಾಗಿರುವ ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ 17 ಜಿಲ್ಲೆಗಳಲ್ಲಿ ಲಕ್ಷಾಂತರ ಜನ ಮನೆ, ಬೆಳೆ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಕನಿಷ್ಠ ಸರ್ಕಾರ ಇದುವರೆಗೂ ಅವರಿಗೆ ಸೂಕ್ತ ಸೂರು ಕಲ್ಪಿಸುವ ಕೆಲಸ ಮಾಡಿಲ್ಲ. ರಸ್ತೆಗಳು ಸಂಪೂರ್ಣ ಹಾಳಾಗಿದೆ. ಕಾಳಜಿ ಕೇಂದ್ರಗಳು ಅವ್ಯವಸ್ಥೆಯಿಂದ ಕೂಡಿವೆ. ಪುನರ್ವಸತಿ ಕಾರ್ಯ ಆಮೆಗತಿಯಲ್ಲಿ ಸಾಗಿದೆ. ಸರ್ಕಾರ ಕಾಟಾಚಾರಕ್ಕೆ ಮೂರು ದಿನಗಳ ಅಧಿವೇಶನ ಕರೆದಿದೆ ಎಂದು ದೂರಿದರು.

ವೈಜ್ಞಾನಿಕ ನೀತಿ ರೂಪಿಸಿ: ರಾಜ್ಯ ರೈತ ಸಂಘದ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಯಾಕೂಬ್‌ ಷರೀಫ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನೀತಿಗಳು ಸಂಪೂರ್ಣ ಅವೈಜ್ಞಾನಿಕವಾಗಿ ಕೂಡಿವೆ. ಈ ಎರಡು ಯೋಜನೆಗಳಲ್ಲಿ ಅಲ್ಪ ಪರಿಹಾರ ಮಾತ್ರ ಸಿಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ನೆರೆ ಹಾಗೂ ಬರಕ್ಕೆ ಸಂಬಂಧಿಸಿದ್ದಂತೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ನೀತಿಗಳನ್ನು ವೈಜ್ಞಾನಿಕವಾಗಿ ರೂಪಿಸಬೇಕೆಂದು ಆಗ್ರಹಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನುಸೂಯಮ್ಮ, ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದಶಿ ಜಿ.ಎಸ್‌.ವೆಂಕಟಸ್ವಾಮಿ, ಪದಾಧಿಕಾರಿಗಳಾದ ವೆಂಕಟರೋಣಪ್ಪ, ವೆಂಕಟೇಶ್‌, ಗಂಗಾಧರ್‌, ತ್ರಿವೇಣಿ, ಶಿವಕುಮಾರ್‌, ಚಿನ್ನರೆಡ್ಡಪ್ಪ ಇದ್ದರು.

ರೈತ ಸಂಘದ ಹಕ್ಕೋತ್ತಾಯಗಳು
* ಸಂತ್ರಸ್ತರಿಗೆ ವಸತಿ ಸೌಕರ್ಯಕ್ಕೆ 10 ಲಕ್ಷ ನೀಡಬೇಕು.
* ರೈತರ ಸಾಲ ಮನ್ನಾ ಜೊತೆಗೆ ಹೊಸ ಸಾಲ ವಿತರಿಸಬೇಕು.
* ಕೇಂದ್ರ ಸರ್ಕಾರ ನೆರೆ ಪರಿಹಾರಕ್ಕೆ 30 ಸಾವಿರ ಕೋಟಿ ನೀಡಬೇಕು.
* ಬೆಳೆ ವಿಮಾ ಬಾಕಿ ಹಣ ಕೂಡಲೇ ರೈತರಿಗೆ ನೀಡಬೇಕು.
* ಅರ್ಜಿ ಸಲ್ಲಿಸಿರುವ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.