ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರ ಬಸವಣ್ಣ ಧ್ವನಿ


Team Udayavani, May 8, 2019, 3:00 AM IST

shoshita

ಗುಡಿಬಂಡೆ: ಲಿಂಗ, ಜಾತಿ ಬೇಧಗಳನ್ನೆಲ್ಲಾ ಮುರಿದು ಸರ್ವರೂ ಸಮಾನರೆಂದು ಸಾರಿರುವ ಬಸವಣ್ಣ ಸಮಾನತೆಯ ಹರಿಕಾರ ಎಂದು ತಹಶೀಲ್ದಾರ್‌ ಹನುಮಂತರಾಯಪ್ಪ ಬಣ್ಣಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತ್ಯುತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಸವಣ್ಣನವರು ಉನ್ನತ ಸಮುದಾಯದಲ್ಲಿ ಜನಿಸಿದರೂ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತಿದ ಮಹನೀಯ. ಬಸವಣ್ಣನವರ ತತ್ವ, ಆದರ್ಶಗಳು° ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

12ನೇ ಶತಮಾನದಲ್ಲಿ ಸಮಾಜದ ಶೋಷಿತ ವರ್ಗಗಳ ಪರವಾಗಿ ಬಸವಣ್ಣನವರು ನಿಂತಿದ್ದರು. ಎಲ್ಲರೂ ಸಮಾನರು ಎಂದು ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದಿದ್ದರು. ಅಲ್ಲದೇ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹಿಸಿದರು ಎಂದು ವಿವರಿಸಿದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಗ್ರಾಮ ಲೆಕ್ಕಾಧಿಕಾರಿ ವಿದ್ಯಾ, ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಪ್ರತಿಪಾದಿಸಿದ್ದ ಬಸವಣ್ಣನವರು, ಕಾಯಕವೇ ಕೈಲಾಸ ಎಂಬುದನ್ನು ವಚನಗಳಲ್ಲಿ ತಿಳಿಸಿದ್ದಾರೆ.

12ನೇ ಶತಮಾನದಲ್ಲಿಯೇ ಬಸವಣ್ಣ ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದರು. ಬಸವಣ್ಣನವರ ಕನಸು ನನಸು ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಲಿಂಗತಾರತಮ್ಯ, ವರ್ಗ ತಾರತಮ್ಯ, ಜಾತಿ ತಾರತಮ್ಯ ಹೋಗಲಾಡಿಸುವ ಚಿಂತನೆ ಸಮಾಜಕ್ಕೆ ನೀಡಿದ ಅವರು ಧಾರ್ಮಿಕತೆಗೆ ಹೊಸ ವ್ಯಾಖ್ಯಾನ ನೀಡಿ ಬಡವರಿಗೂ ದೇವರ ಕಾಣುವ, ದೇವಸ್ಥಾನ ಕಟ್ಟುವ ಹಕ್ಕಿದೆ ಎಂಬುವುದನ್ನು ಮೊಟ್ಟ ಮೊದಲಿಗೆ ಅರಿವು ಮೂಡಿಸಿದರೆಂದರು.

ಕನ್ನಡ ಸಾಹಿತ್ಯ ಪರಿಷತ್‌ ನಿಕಟ ಪೂರ್ವ ಅಧ್ಯಕ್ಷ ಸ.ನ ನಾಗೇಂದ್ರ ಮಾತನಾಡಿ, ಶತಮಾನಗಳ ಹಿಂದೆ ಇದ್ದ ಮೌಡ್ಯ, ಕಂದಾಚಾರ ಪದ್ಧತಿಗಳು 21ನೇ ಶತಮಾನದಲ್ಲೂ ಆಚರಣೆಯಲ್ಲಿವೆ.

ಮೇಲು, ಕೀಳು, ಜಾತಿ ಎಂಬ ಸಂಪ್ರದಾಯ ಜೀವಂತವಾಗಿದೆ. ಇದನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ಎಲ್ಲಾ ಕುಲ ಕಸಬುಗಳ ವ್ಯಕ್ತಿಗಳ ಕಾಯಕಕ್ಕೆ ಗೌರವ ನೀಡಿ ಅಸಮಾನತೆ ಹೋಗಲಾಡಿಸಲು ಪಣ ತೊಟ್ಟಿದ್ದರು ಎಂದರು.

12 ಶತಮಾನದ ಕಾಲಘಟ್ಟದಲ್ಲಿ ಬಸವಣ್ಣವನರು ಹಾಕಿಕೊಂಡ ಸಮಾಜ ಸುಧಾರಣೆ ಅಭಿವೃದ್ಧಿ ಚಿಂತನೆಗಳು ಎಲ್ಲಾ ಕಾಲಗಳಲ್ಲೂ ಪ್ರಸ್ತುತವೆನ್ನಿಸುತ್ತದೆ. ಅವರ ಚಿಂತನೆಗಳ ಸಾಕಾರ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಹಲವು ಸರ್ಕಾರಗಳು ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರೇರಣೆ ಎಂದು ಬಣ್ಣಿಸಿದರು.

ದಯೆ ಧರ್ಮದ ಮೂಲ ಎಂಬ ಸಾರವನ್ನು ಸನಾತನ, ಬೌದ್ಧ, ಸಿಖ್‌, ಜೈನ, ಇಸ್ಲಾಂ ಧರ್ಮಗಳಲ್ಲಿ ಅಡಕವಾಗಿದ್ದರೂ ಅದನ್ನು ಸಮಾಜಕ್ಕೆ ತೀರಾ ನಿಕಟವಾಗಿ ತಲುಪಿಸಿದವರಲ್ಲಿ ಬಸವಣ್ಣನವರು ಓರ್ವರು. ಕಲ್ಮಶ ರಹಿತ ಮನಸ್ಸಿನಿಂದ ಶಾಂತಿ ಪ್ರಾಪ್ತಿ.

ಪ್ರಜಾಸತ್ತಾತ್ಮಕ ದೇಗುಲ ಬಾಗಿಲು ತೆರೆಸುವ ಮೂಲಕ ಅಸಂಖ್ಯಾತ ದೀನ, ದಲಿತ, ದುರ್ಬಲ ಜನಾಂಗದವರ ಮನಗೆಲ್ಲುವಂತೆ ಮಾಡಿದ್ದರೆಂದರು. ಈ ವೇಳೆ ರೇಷ್ಮೆ ಇಲಾಖೆಯ ಮ.ಗ.ಹೆಗಡೆ, ಸಮಾಜ ಕಲ್ಯಾಣ ಇಲಾಖೆಯ ದಾಸಪ್ಪ, ತೋಟಗಾರಿಕೆ ಇಲಾಖೆ ರವಿಕುಮಾರ್‌, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.