ಋತುಚಕ್ರ ಶುಚಿತ್ವದ ಅರಿವು ಮೂಡಿಸಿ
Team Udayavani, May 31, 2020, 7:49 AM IST
ಚಿಕ್ಕಬಳ್ಳಾಪುರ: ಮಹಿಳೆಯರಲ್ಲಿ ಋತುಚಕ್ರವು ಒಂದು ಸಹಜ ಜೈವಿಕ ಪ್ರಕ್ರಿಯೆ. ಅದಿಲ್ಲದೇ ಮಾನವ ಸಂತತಿ ಮುಂದುವರಿಯಲಾರದು. ಋತುಚಕ್ರದ ಬಗ್ಗೆ ಜನರಲ್ಲಿ ರುವ ಮೂಢನಂಬಿಕೆ ಹಾಗೂ ತಪ್ಪು ಕಲ್ಪನೆಗಳನ್ನು ಹೋಗ ಲಾಡಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಜಿಪಂನ ಡಾ.ಹೆಚ್.ನರಸಿಂಹಯ್ಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯಡಿ ಮಹಿಳೆಯರಲ್ಲಿ ಋತುಚಕ್ರದ ಶುಚಿತ್ವದ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು. ಋತುಚಕ್ರದ ಶುಚಿತ್ವದಿಂದ ಲೈಂಗಿಕ ಸೋಂಕು ಇತರೆ ಗುಪ್ತರೋಗಗಳಿಂದ ದೂರವಿರಬಹುದು ಎಂಬ ಅರಿವು ಗ್ರಾಮೀಣ ಜನಸಾಮಾನ್ಯರಲ್ಲಿ ಬರಬೇಕಾಗಿದೆ.
ಅರಿವು ಮೂಡಿಸುವ ಕಾರ್ಯವನ್ನು ನಾವು ನೀವು ಗಳು ಒಟ್ಟಾಗಿ ಮಾಡಬೇಕಾದ ಅಗತ್ಯವಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈ ಕುರಿತು ಅರಿವು ಮೂಡಿಸುವ ಕಾರ್ಯ ಆಗಬೇಕೆಂದರು. ಚಿಕ್ಕಬಳ್ಳಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುಳಾ ಮಾತನಾಡಿ, ಮಹಿಳೆಯರಿಗೆ ಋತುಚಕ್ರದ ಶುಚಿತ್ವದ ಅಗತ್ಯದ ಬಗ್ಗೆ ಹಾಗೂ ಸಪ್ತಾಹ ಆಚರಿಸುವ ಜೊತೆಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದರ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಪಂನ ಡಿ.ಆರ್.ಡಿ. ಎ .ಯೋಜನಾ ನಿರ್ದೇಶಕ ಗಿರಿಜಾಶಂಕರ್, ಮುಖ್ಯ ಲೆಕ್ಕಾಧಿ ಕಾರಿ ಅರ್ಚನಾ, ಬಿ.ಕಮಲನಾಭನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ