ಕೋವಿಡ್ 19 ತಡೆಗೆ ಮುನ್ನೆಚ್ಚರಿಕೆ ವಹಿಸಿ
Team Udayavani, Jun 23, 2020, 6:17 AM IST
ಶಿಡ್ಲಘಟ್ಟ: ನಗರ ಸಹಿತ ತಾಲೂಕಿನಾದ್ಯಂತ ಕೋವಿಡ್ 19 ಸೋಂಕು ನಿಯಂತ್ರಿಸಲು ಅಧಿಕಾರಿಗಳು ಮತ್ತಷ್ಟು ಮುನ್ನೆ ಚ್ಚರಿಕೆ ಕ್ರಮಗಳನ್ನು ಕೈಗೊಂಡು ನಾಗರಿಕರ ಆತಂಕ ದೂರ ಮಾಡಬೇಕೆಂದು ಶಾಸಕ ವಿ.ಮುನಿಯಪ್ಪ ಸೂಚಿಸಿದರು.
ನಗರದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಕ್ರಿಮಿನಾಶಕ ಔಷಧಿ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ 19 ಮುಕ್ತವಾಗಿದ್ದ ತಾಲೂಕಿನಲ್ಲಿ ಸೋಂಕು ಕಾಲಿಟ್ಟಿದೆ. ನಾಗರಿಕರು ವಿನಾಕಾರಣ ಮನೆಯಿಂದ ಹೊರ ಬರುವುದನ್ನು ಸ್ವಯಂ ಪ್ರೇರಿತರಾಗಿ ನಿಯಂತ್ರಿಸಿಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸ್ಯಾನಿಟೈಸರ್ ಹಾಕಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡು ಸಹಕರಿಸಬೇಕೆಂದು ಮನವಿ ಮಾಡಿದರು.
ನಗರದಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಳೇ ಅಂಚೆ ಕಚೇರಿ ರಸ್ತೆಯನ್ನು ಸೀಲ್ಡೌನ್ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ತ್ಯಾಗರಾಜ್ ಮಾಹಿತಿ ನೀಡಿದರು. ಶಾಸಕರು ನಗರದಲ್ಲಿ ಪ್ರದಕ್ಷಿಣೆ ಮಾಡಿ ಸೀಲ್ ಡೌನ್ ಆಗಿರುವ ಪ್ರದೇಶ ವೀಕ್ಷಿಸಿ ನಗರದ ಎಲ್ಲಾ ವಾಡ್ಗಳಲ್ಲಿ ಕ್ರಿಮಿನಾಶಕ ಔಷಧಿ ಸಿಂಪಡಿಸಿ ಸ್ವತ್ಛತೆ ಕಾಪಾಡಲು ವಿಶೇಷ ಅಭಿಯಾನ ನಡೆಸಬೇಕೆಂದು ಪೌರಾಯುಕ್ತ ಹಾಗೂ ಆರೋಗ್ಯ ನಿರೀಕ್ಷಕಿಗೆ ಆದೇಶಿಸಿದರು.
ಜಿಪಂ ಮಾಜಿ ಅಧ್ಯಕ್ಷ ವಿ.ಸುಬ್ರಹ್ಮಣಿ, ನಗರಸಭಾ ಸದಸ್ಯ ರಿಯಾಝ್ಪಾಷ, ಮನೋಹರ್, ನಗರಸಭೆಯ ನೀರು ಸರಬರಾಜು ವಿಭಾಗದ ಮುರಳಿ, ಮುಖಂಡರಾದ ಟಿ.ಕೆ.ನಟರಾಜ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್, ಭಕ್ತರಹಳ್ಳಿ ಗ್ರಾಪಂ ಸದಸ್ಯ ಚಿದಾ ನಂದಮೂರ್ತಿ, ಕಾಕಚೊಕ್ಕಂಡಹಳ್ಳಿ ಮಂಜುನಾಥ್, ಮಾದಿಗ ದಂಡೋರ ಸಮಿತಿ ಖಜಾಂಚಿ ನರಸಿಂಹ ಮೂರ್ತಿ, ನಾಗನರಸಿಂಹ, ಆರೋಗ್ಯ ನಿರೀಕ್ಷಕಿ ಶೋಭಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ