ಶಿಥಿಲಾವಸ್ಥೆಯಲ್ಲಿ ಬೆಸ್ಕಾಂ ಕಚೇರಿ, ವಸತಿಗೃಹ


Team Udayavani, Jul 28, 2019, 3:17 PM IST

cb-tdy-2

ದಿಬ್ಬೂರಹಳ್ಳಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿರುವ ವಸತಿಗೃಹಗಳು ತ್ಯಾಜ್ಯ, ಮಲಮೂತ್ರ ವಿಸರ್ಜನೆ ಕೇಂದ್ರವಾಗಿರುವುದು.

ಶಿಡ್ಲಘಟ್ಟ: ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸರ್ಕಾರಿ ಸೌಲಭ್ಯ ತಲುಪಿಸಬೇಕೆಂಬ ಉದ್ದೇಶದೊಂದಿಗೆ ಸರ್ಕಾರಿ ನೌಕರರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಿಸುವ ಕಚೇರಿ ಮತ್ತು ವಸತಿಗೃಹಗಳು ನಿರ್ವಹಣೆ ಇಲ್ಲದಿದ್ದರೇ ಯಾವ ಗತಿಗೆ ತಲುಪುತ್ತದೆ ಎಂಬುದಕ್ಕೆ ಕೆಇಬಿ(ಬೆಸ್ಕಾಂ) ಕಚೇರಿ ಮತ್ತು ವಸತಿಗೃಹಗಳು ಜೀವಂತ ಸಾಕ್ಷಿಯಾಗಿದೆ.

ತಾಲೂಕಿನ ದಿಬ್ಬೂರಹಳ್ಳಿ ಗ್ರಾಮದಲ್ಲಿ ಅನೇಕ ವರ್ಷಗಳ ಹಿಂದೆ ಕೆಇಬಿ ಅಥವಾ ಬೆಸ್ಕಾಂ ಕಚೇರಿ, ನೌಕರರಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಆದರೆ ನಿರ್ವಹಣೆಯ ಕೊರತೆಯಿಂದ ಲಕ್ಷಾಂತರ ರೂ. ಮೌಲ್ಯದ ಜಾಗ ಅನಾಥವಾಗಿದ್ದು, ಕಟ್ಟಡ ಪಾಳುಬಿದ್ದಿದ್ದು, ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತನೆಗೊಂಡಿದೆ.

ಅಕ್ರಮ ಚಟುವಟಿಕೆ: ಗ್ರಾಮ ಪಂಚಾಯಿತಿ ಕೇಂದ್ರದ ಸಮೀಪಯಿರುವ ಕೆಇಬಿ ಕಚೇರಿ ಮತ್ತು ವಸತಿಗೃಹಗಳಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲು ಕಾಣುತ್ತವೆ. ಮಲಮೂತ್ರ ವಿಸರ್ಜನೆಯ ಕೇಂದ್ರವಾಗಿ ಪರಿ ವರ್ತನೆಗೊಂಡಿದ್ದು, ರಾತ್ರಿ ವೇಳೆಯಲ್ಲಿ ಸರ್ಕಾರಿ ಕಟ್ಟಡ ಪುಂಡಪೋಕರಿಗಳಿಗೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ನಿರ್ವಹಣೆ ಇಲ್ಲ: ಸರ್ಕಾರಿ ನೌಕರರು ಕೇಂದ್ರ ಸ್ಥಾನ ದಲ್ಲಿ ಕಾರ್ಯ ನಿರ್ವಹಿಸಬೇಕೆಂದು ಸರ್ಕಾರ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಒಂದೊಂದು ಇಲಾ ಖೆಗೆ ಪ್ರತ್ಯೇಕ ಕಚೇರಿ ಮತ್ತು ವಸತಿಗೃಹ ನಿರ್ಮಿಸಲು ಕ್ರಮ ಕೈಗೊಂಡಿದ್ದ ಫ‌ಲದಿಂದಾಗಿ ದಿಬ್ಬೂರಹಳ್ಳಿಯಲ್ಲಿ ನಿರ್ಮಿಸಿರುವ ಕೆಇಬಿ ಕಚೇರಿ ಮತ್ತು ವಸತಿಗೃಹಗಳು ಸೂಕ್ತ ನಿರ್ವಹಣೆ ಇಲ್ಲದೇ ಅನಾಥವಾಗಿದೆ.

ಕಟ್ಟಡದ ಸ್ವರೂಪವೇ ಬದಲು: ದಿಬ್ಬೂರಹಳ್ಳಿ ಗ್ರಾಮ ದಲ್ಲಿ ಕೆಇಬಿ ಕಚೇರಿಗೆ ನೂತನ ಕಟ್ಟಡ ನಿರ್ಮಾಣ ಗೊಂಡ ಬಳಿಕ ಹಳೆ ಕಚೇರಿಯನ್ನು ಕಂದಾಯ ಇಲಾ ಖೆಯ ಸಿಬ್ಬಂದಿ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ ಯಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಕೆಇಬಿ ಇಲಾಖೆಯ ಅಧಿಕಾರಿಗಳು ಅವರನ್ನು ಖಾಲಿ ಮಾಡಿದ ಬಳಿಕ ಹಳೆ ಕಚೇರಿ ಮತ್ತು ವಸತಿಗೃಹ ಬಳಕೆ ಯಾಗದೇ ಪಾಳುಬಿದ್ದಿದ್ದು, ಕಟ್ಟಡದ ಸ್ವರೂಪವೇ ಬದಲಾಗಿದೆ.

ಗ್ರಾಮ ಪಂಚಾಯಿತಿ ಕೇಂದ್ರದ ಸಮೀಪ ಮತ್ತು ಊರಿನ ಮಧ್ಯೆ ಭಾಗದಲ್ಲಿರುವ ಕೆಇಬಿ ಕಚೇರಿ ಮತ್ತು ವಸತಿಗೃಹಗಳು ಯಾರಿಗೂ ಬೇಡವಾದ ಸ್ಥಿತಿಗೆ ತಲುಪಿದೆ. ಕಟ್ಟಡಗಳ ಗೋಡೆಗಳು ಬಿರುಕು ಬಿಟ್ಟಿದ್ದು, ಕುಸಿಯುವ ಹಂತಕ್ಕೆ ತಲುಪಿದೆ.

ಗ್ರಾಪಂಗೆ ಬರುವ ಗ್ರಾಮಸ್ಥರು ಕೆಇಬಿ ಹಳೆ ಕಚೇರಿ ಮತ್ತು ವಸತಿಗೃಹಗಳನ್ನು ನೋಡಿ ಭೂತಬಂಗಲೆಯಂತಿರುವ ಕಟ್ಟಡಗಳನ್ನು ಯಾರು ನಿರ್ವಹಣೆ ಮಾಡುತ್ತಿಲ್ಲವೇ ಎಂದು ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳುವವಂತಹ ಶೋಚನೀಯ ಪರಿಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರಿ ಕಚೇರಿಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು ಉತ್ಸಾಹ ತೋರಿಸುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅಸ್ತಿತ್ವದಲ್ಲಿರುವ ಹಳೆ ಕಚೇರಿಯ ಕಟ್ಟಡಗಳ ಸ್ಥಿತಿಗತಿ ಮತ್ತು ವಸತಿಗೃಹಗಳ ಪರಿಸ್ಥಿತಿಯನ್ನು ಅವಲೋಕಿಸಲು ಮುಂದಾಗಬೇಕಾಗಿದೆ. ಹೊಸದು ನಿರ್ಮಾಣವಾದ ಮೇಲೆ ಹಳೆ ಕಚೇರಿಗಳನ್ನು ಕಡೆಗಣಿಸುವ ನೀತಿ ಬದಲಾಗದಿದ್ದರೆ ಸರ್ಕಾರದ ಮೂಲ ಉದ್ದೇಶಗಳಿಗೆ ಬೆಲೆ ಇಲ್ಲದಂತಾಗುತ್ತದೆ.

ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ ಶಿಥಿಲಾವಸ್ಥೆಯಲ್ಲಿರುವ ಕೆಇಬಿ ಹಳೆ ಕಚೇರಿ ಮತ್ತು ವಸತಿಗೃಹಗಳ ಕಾಯಕಲ್ಪಕ್ಕೆ ಮುಂದಾಗಬೇಕಿದೆ.

 

● ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.