ಹೆಚ್ಚು ಸ್ಥಾನ ಗೆದ್ದವರೇ ಅಧಿಕಾರ ನಡೆಸಬೇಕು;ಮಹಾರಾಷ್ಟ್ರದಲ್ಲಿ ಅದೇ ಆಗಿದೆ: ಬಿ.ಎಲ್. ಸಂತೋಷ್
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ಎಲ್. ಸಂತೋಷ್ ಅಭಿಪ್ರಾಯ
Team Udayavani, Nov 23, 2019, 6:10 PM IST
ಚಿಕ್ಕಬಳ್ಳಾಪುರ: ಪ್ರಜಾಪ್ರಭುತ್ವದಲ್ಲಿ ಯಾವ ಪಕ್ಷಕ್ಕೆ ಚುನಾವಣೆಯಲ್ಲಿ ಹೆಚ್ಚು ಸೀಟು ಬರುತ್ತದೋ ಆ ಪಕ್ಷಕ್ಕೆ ಅಧಿಕಾರ ಸಿಗಬೇಕು. ಅದು ಮಹಾರಾಷ್ಟ್ರದಲ್ಲಿ ಈಡೇರಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಮಹಾರಾಷ್ಟ್ರದಲ್ಲಿ ಎನ್.ಸಿ.ಪಿ. ಪಕ್ಷದ ಬೆಂಬಲದೊಂದಿಗೆ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗುವುದರೊಂದಿಗೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಕೆಲವರು ಕಳೆದ ಹಲವು ದಿನಗಳಿಂದ ಮಾಡಿದ ಪ್ರಯತ್ನ ವ್ಯರ್ಥವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರ ನಡೆಸಬೇಕಿರುವುದು ಅತಿ ದೊಡ್ಡ ಪಕ್ಷದ ಜವಾಬ್ದಾರಿ ಎಂದು ಸಂತೋಷ್ ಅವರು ತಿಳಿಸಿದರು.
ಜನರ ಅರ್ಶೀವಾದವಿದ್ದರೆ ಅಧಿಕಾರಕ್ಕೇರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಇದಕ್ಕೆ ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೇರಿರುವುದು ಹಾಗೂ ಈಗ ಮಹಾರಾಷ್ಟ್ರದಲ್ಲಿ ಫಡ್ನವೀಸ್ ಸರಕಾರ ಅಸ್ತಿತ್ವಕ್ಕೆ ಬಂದಿರುವುದೇ ಸಾಕ್ಷಿ ಎಂದು ಬಿ.ಎಲ್.ಸಂತೋಷ್ ಅವರು ಹೇಳಿದರು.
ಮಹಾರಾಷ್ಟ್ರ ರಾಜಕೀಯ ಬೆಳವಣೆಗೆ ಕಾಂಗ್ರೆಸ್, ಮತ್ತಿತರ ಪಕ್ಷಗಳಿಗೆ ತಕ್ಕ ಪಾಠ ಕಲಿಸಿವೆ ಎಂದರು. ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಆನ್ಯಾಯವೇ ನೀತಿ, ಭ್ರಷ್ಟಾಚಾರವೇ ಸಿದ್ದಾಂತ ಎಂದು ಸಂತೋಷ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ