ನನ್ನ ಗೆಲುವಿಗೆ ಶಾಸಕ ಮುನಿಯಪ್ಪ ಆಶೀರ್ವಾದ
Team Udayavani, Aug 21, 2019, 3:00 AM IST
ಶಿಡ್ಲಘಟ್ಟ: ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಎಸ್.ಮುನಿಸ್ವಾಮಿ ಅವರು ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿ ನಾಡ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದರು.
ಸಂಸದ ಎಸ್.ಮುನಿಸ್ವಾಮಿ ಚುನಾಯಿತರಾದ ಬಳಿಕ ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋಲಾರ ಲೋಕಸಭಾ ಕ್ಷೇತ್ರದ ಜನರ ಮತ್ತು ಅಪ್ಪಾಜೀ( ಶಾಸಕ ವಿ.ಮುನಿಯಪ್ಪ) ಅವರ ಆಶೀರ್ವಾದ ಮತ್ತು ನೆರಳಿನಲ್ಲಿ ಸಂಸದನಾಗಿ ಆಯ್ಕೆಯಾಗಿದ್ದಾನೆ ಎಂದು ಹೇಳುವ ಮೂಲಕ ಸಭಿಕರನ್ನು ಕೆಲಕಾಲ ನಿಶ್ಯದ್ಧವಾಗುವಂತೆ ಮಾಡಿದರು.
ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷಗಳೊಂದಿಗೆ ಗುರುತಿಸಿಕೊಂಡರೂ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡದೆ ಜಿಲ್ಲೆಗೆ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಶ್ರಮಿಸುವುದಾಗಿ ಹೇಳಿದರು.
ಶಾಶ್ವತ ಅಭಿವೃದ್ಧಿ ಕಾಮಗಾರಿ: ಅಧಿಕಾರ ಶಾಶ್ವತವಲ್ಲ ಜನರ ವಿಶ್ವಾಸವನ್ನು ಗಳಿಸುವ ಕೆಲಸ ಮಾಡುತ್ತೇನೆ. ಹಿರಿಯ ಶಾಸಕರ ಮಾರ್ಗದರ್ಶನದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ಅನುದಾನ ಪಡೆದು ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದಾಗಿ ಭರವಸೆ ನೀಡಿದರು.
ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಗಳಿಗೆ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಅನುದಾನ ನೀಡುವುದನ್ನು ನಿಲ್ಲಿಸಿ ಪ್ರತಿಯೊಂದು ತಾಲೂಕಿನಲ್ಲಿ ಶಾಶ್ವತ ಅಭಿವೃದ್ಧಿ ಕೆಲಸಗಳನ್ನು ಮಾಡಲು ಆದ್ಯತೆ ನೀಡಿ 50 ಲಕ್ಷ ರೂ. ಅಥವಾ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಕಾಮಗಾರಿ ನಡೆಸುವುದಾಗಿ ಹೇಳಿದರು.
ಸಹಾಯ ಮಾಡಿಲ್ಲ: ಶಾಸಕ ವಿ.ಮುನಿಯಪ್ಪ ಮಾತನಾಡಿ, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಎಸ್.ಮುನಿಸ್ವಾಮಿ ಸಂಸದರಾಗಲು ಜನ ಆಶೀರ್ವಾದ ಮಾಡಿದ್ದಾರೆ. ಈ ವಿಚಾರದಲ್ಲಿ ನಾವೇನು ಸಹಾಯ ಮಾಡಿಲ್ಲವೆಂದು ವೇದಿಕೆಯಲ್ಲಿ ಸ್ಪಷ್ಟಪಡಿಸಿದರಲ್ಲದೆ ಕೇವಲ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮುನಿಸ್ವಾಮಿ ಮಾತ್ರವಲ್ಲದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಹ ಸಂಸದರಾಗಿ ಪ್ರಧಾನಮಂತ್ರಿಯಾಗಿದ್ದಾರೆ.
ಕರ್ನಾಟಕ ಮಾತ್ರವಲ್ಲ ದೇಶಾದ್ಯಂತ ಬಿಜೆಪಿಗೆ ಮತದಾರರು ಆಶೀರ್ವದಿಸಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಗೊಂದಲ ಸೃಷ್ಟಿಸಿ ರಾಜಕಾರಣ ಮಾಡುವವರಿಗೆ ಸೂಕ್ತ ವೇದಿಕೆಯಲ್ಲಿ ತಾನು ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ಕುಮಾರ್ ಉತ್ತರ ನೀಡುತ್ತೇವೆ ಎಂದು ಪರೋಕ್ಷವಾಗಿ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಉತ್ತಮವಾಗಿ ಸೇವೆ ಸಲ್ಲಿಸಿ: ಮತದಾರರ ಆಶೀರ್ವಾದದಿಂದ ಸಂಸದರಾಗಿ ಸುಖವಾಗಿರಲು ಬಯಸದೆ ಕ್ಷೇತ್ರದಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸಂಸದ ಮುನಿಸ್ವಾಮಿಗೆ ಸಲಹೆ ನೀಡಿದ ಶಾಸಕರು, ಅಧಿಕಾರ ಶಾಶ್ವತವಲ್ಲ ಜನಸೇವಕರಾಗಿ ಸೇವೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಜನ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಜಂಗಮಕೋಟೆ ನಾಡ ಕಚೇರಿಗೆ ಕಾಂಪೌಂಡ್ ನಿರ್ಮಿಸಲು ಅನುದಾನ ನೀಡಬೇಕೆಂದು ಶಾಸಕರ ಬೇಡಿಕೆಗೆ ಸ್ಪಂದಿಸಿದ ಸಂಸದರು, ಒಂದು ಸುಸಜ್ಜಿತ ನೀರು ಶುದ್ಧೀಕರಣ ಘಟಕ ಮತ್ತು ಕಾಂಪೌಂಡ್ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕವಾಗಿ ಭರವಸೆ ನೀಡಿ ಕುತೂಹಲ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ